ಕಬಾಲಿ ಬ್ಯಾನ್ ಅಗ್ಬೇಕ್ ಬ್ಯಾನ್ ಆಗ್ಬೇಕ್ ಬ್ಯಾನ್ ಆಗ್ಬೇಕ್ : ವಾಟಾಳ್
ಬೆಂಗಳೂರು, ಜುಲೈ 22: ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರ ಕಬಾಲಿ ಚಿತ್ರ ವಿಶ್ವದೆಲ್ಲೆಡೆ ಪ್ರದರ್ಶನ ಕಂಡು ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಬೆಂಗಳೂರಿನಲ್ಲಿ ರಜನಿ ಅಭಿಮಾನಿಗಳಿಂದ ಅಭೂತಪೂರ್ವ ಸ್ವಾಗತ ಸಿಕ್ಕಿದೆ. ಆದರೆ, ಕಬಾಲಿ ಪ್ರದರ್ಶನದಿಂದ ಕನ್ನಡ ಹಾಗೂ ಕನ್ನಡ ಚಿತ್ರರಂಗಕ್ಕೆ ಹಾನಿಯಾಗುತ್ತಿದೆ ಎಂದು ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ಅವರು ಪ್ರತಿಭಟನೆ ನಡೆಸಿದ್ದಾರೆ.
ಕಬಾಲಿ ಜುಲೈ 22ರಂದು ರೀಲ್ ಹಾಗೂ ರಿಯಲ್ ವರ್ಲ್ಡ್ ನಲ್ಲಿ ಸಕತ್ ಟ್ರೆಂಡ್ ನಲ್ಲಿತ್ತು. ಸಾಮಾಜಿಕ ಜಾಲ ತಾಣಗಳಲ್ಲಿ ಜುಲೈ 12 ಕಬಾಲಿ ಡೇ ಆಗಿ ಮಾರ್ಪಟ್ಟಿತ್ತು. ಬೆಂಗಳೂರಿನ ಶೇಷಾದ್ರಿಪುರದ ನಟರಾಜ ಟಾಕೀಸ್, ಊರ್ವಶಿ ಚಿತ್ರಮಂದಿರಗಳಲ್ಲಿ ಹಬ್ಬದ ವಾತಾವರಣ ಕಂಡು ಬಂದಿತು. [40 ದೇಶಗಳಲ್ಲಿ ರಜನಿ ಕಬಾಲಿ ಕ್ರೇಜ್ ಸೂಪರ್ ಡಾ]

ಆದರೆ, ಈ ಕ್ರೇಜ್ ನಿಂದ ಕನ್ನಡಕ್ಕೆ ಹಾನಿಯಾಗುತ್ತ್ತಿದೆ ಎಂದು ವಾಟಾಳ್ ಅವರು ಪ್ರತಿಭಟನೆ ನಡೆಸಿದರು. 'ಕಬಾಲಿ ಬ್ಯಾನ್ ಆಗ್ಬೇಕ್, ಇದು ಕಬಾಲಿ ಅಲ್ಲ ತುಕಾಲಿ' ಕನ್ನಡ ಉಳಿಯಲಿ ಎಂದು ಘೋಷಣೆ ಕೂಗಿದರು. [ಅಪ್ಪಟ ಕನ್ನಡ ಪ್ರೇಮಿ ಬರೆದಿರುವ ಪತ್ರ, ತಪ್ಪದೆ ಓದಿ!]

ಕಬಾಲಿ ಭಾವಚಿತ್ರಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ತಮಿಳು ಅಭಿಮಾನಿಗಳು ಹಾಗೂ ವಾಟಾಳ್ ಅವರ ಸಂಗಡಿಗರ ನಡುವೆ ಘರ್ಷಣೆ ಉಂಟಾಯಿತು. ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಇಬ್ಬರ ನಡುವಿನ ಕಿತ್ತಾಟಕ್ಕೆ ತೆರೆ ಎಳೆದರು. [ಕಬಾಲಿ 'ಬೆಂಕಿ' ಯಲ್ಲಿ ಚಳಿ ಕಾಯಿಸಿಕೊಂಡ ಸ್ಟಾರ್ಸ್]
ಭಾರತದಲ್ಲಿ ಅಷ್ಟೆ ಅಲ್ಲದೆ, ಯುಎಸ್, ಯುಕೆ, ಸಿಂಗಪುರ, ಫ್ರಾನ್ಸ್, ಮಲೇಶಿಯಾ, ಥಾಯ್ಲೆಂಡ್, ಚೀನಾ ಸೇರಿದಂತೆ 40ಕ್ಕೂ ಅಧಿಕ ದೇಶಗಳಲ್ಲಿ 4,000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಪ್ರದರ್ಶನ ಕಂಡಿದೆ. [ವಿಮರ್ಶೆ: 'ಕಬಾಲಿ ಡಾ', 'ನೆರಪ್ಪು ಡಾ' ತುಂಬಾ ನಿಧಾನ ಡಾ!]
ಕರ್ನಾಟಕದಲ್ಲೇ 400 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಪ್ರದರ್ಶನವಾಗಿದೆ. ಕನ್ನಡ ಚಿತ್ರಗಳಿಗೆ ಚಿತ್ರಮಂದಿಗಳು ಸಾಲುತ್ತಿಲ್ಲ ಎಂಬ ಕೊರಗು ಎದ್ದಿರುವ ನಡುವೆ ಈ ರೀತಿ ಬೆಳವಣಿಗೆ ಬಗ್ಗೆ ವಾಟಾಳ್ ಪ್ರಶ್ನಿಸಿದ್ದಾರೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್












Click it and Unblock the Notifications