ಅಗರಬತ್ತಿ ಸಂಸ್ಥೆ ವಿರುದ್ಧ ಕೇಸು ಗೆದ್ದ ಗೋಲ್ಡನ್ ಸ್ಟಾರ್
ಬೆಂಗಳೂರು, ಏಪ್ರಿಲ್ 02: ಆಗರಬತ್ತಿ ಸಂಸ್ಥೆ ಜಾಹೀರಾತು ವಿಷಯಕ್ಕೆ ಕಲಾ ಸಾಮ್ರಾಟ್ ಎಸ್ ನಾರಾಯಣ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಡುವೆ ಬೆಂಕಿ ಹತ್ತಿಸಿದ್ದ ಕಿರಿಕಿರಿಗೆ ಈಗ ಮೋಕ್ಷ ಸಿಕ್ಕಿದೆ.
ಅನುಮತಿ ಪಡೆಯದೇ ಗಣೇಶ್ ಅವರ ಚಿತ್ರವನ್ನು ಮೋಕ್ಷ್ ಅಗರಬತ್ತಿ ಕಂಪನಿಯ ಸ್ವರ್ಣ ಚಂಪಾ ಅಗರಬತ್ತಿಯ ಮೇಲೆ ಮುದ್ರಿಸಿ, ಪ್ರಚಾರಕ್ಕೆ ಬಳಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಸಂಸ್ಥೆ ವಿರುದ್ಧ ಗಣೇಶ್ ಅವರು ಕೇಸು ದಾಖಲಿಸಿ 75 ಲಕ್ಷ ರೂ. ಪರಿಹಾರ ನೀಡುವಂತೆ 2008ರಲ್ಲಿ ಕೋರಿದ್ದರು. ಇಂದು ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.
2006ರಲ್ಲಿ ಗಣೇಶ್ ಅಭಿನಯದ ಚೆಲುವಿನ ಚಿತ್ತಾರ ಚಿತ್ರದ ಜತೆ ಅಗರಬತ್ತಿ ಸಂಸ್ಥೆ ಒಪ್ಪಂದ ಮಾಡಿಕೊಂಡಿತ್ತು. ಈ ಒಪ್ಪಂದದ ಪ್ರಕಾರ, ಚಿತ್ರದ ಸ್ಟಿಲ್ ಗಳನ್ನು ಬಳಸಲು ನಿರ್ಮಾಪಕ, ನಿರ್ದೇಶಕ ಎಸ್ ನಾರಾಯಣ್ ಅವರು ಅನುಮತಿ ನೀಡಿದ್ದರು. ಆದರೆ, ಸ್ವರ್ಣ ಚಂಪಾ ಅಗರಬತ್ತಿ ಮೇಲೆ ಬಳಸಿದ ಚಿತ್ರಗಳು ಚೆಲುವಿನ ಚಿತ್ತಾರದಲ್ಲ ಎಂದು ಗಣೇಶ್ ದೂರಿದ್ದರು.

ಈ ವಿಚಾರವಾಗಿ ನಟ ಗಣೇಶ್ ಮತ್ತು ನಿರ್ದೇಶಕ ಎಸ್. ನಾರಾಯಣ್ ಮಧ್ಯೆ ವಿವಾದಕ್ಕೂ ಕಾರಣವಾಗಿತ್ತು. ಸಂಸ್ಥೆ ಪರ ವಕೀಲ ಶಂಕರಪ್ಪ ಅವರು ಗಣೇಶ್ ಅವರಿಗೆ ನೋಟಿಸ್ ನೀಡಿದ್ದರು.
ನ್ಯಾಯಾಲಯದಲ್ಲಿ ವಿಚಾರಣೆ ನಡೆಯುವ ವೇಳೆ ಎಸ್. ನಾರಾಯಣ್ ಕೂಡ ಹಾಜರಾಗಿ ಹೇಳಿಕೆ ದಾಖಲಿಸಿದ್ದರು. ಕೊನೆಗೆ, ಸಂಸ್ಥೆಯಿಂದ ಗಣೇಶ್ ಅವರ ಚಿತ್ರ ದುರ್ಬಳಕೆಯಾಗಿರುವುದು ಸಾಬೀತಾದ ಹಿನ್ನಲೆಯಲ್ಲಿ ಗಣೇಶ್ ಅವರಿಗೆ 75 ಲಕ್ಷ ರೂ. ಪರಿಹಾರ ನೀಡುವಂತೆ ಕೋರ್ಟ್ ಸೂಚಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications