ನಟಿ ಸಂಜನಾಗೆ 28 ಲಕ್ಷ ರು. ವಂಚಿಸಿತೇ ಪ್ರಸಿದ್ಧಿ ಚಿಟ್ ಫಂಡ್ ಸಂಸ್ಥೆ?
ಬೆಂಗಳೂರಿನ ಪ್ರಸಿದ್ಧಿ ಚಿಟ್ ಫಂಡ್ ಸಂಸ್ಥೆಯಿಂದ ಮೋಸವಾಗಿದೆ ಎಂದು ಆರೋಪಿಸಿರುವ ನಟಿ ಸಂಜನಾ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಪ್ರಸಿದ್ಧಿ ಚಿಟ್ ಫಂಡ್ ನಲ್ಲಿರುವ ಸಂಸ್ಥೆಯಿಂದ ತಮಗೆ 28 ಲಕ್ಷ ರು. ವಂಚನೆಯಾಗಿರುವುದಾಗಿ ಆರೋಪಿಸಿದ ನಟಿ.
ಬೆಂಗಳೂರು, ಆಗಸ್ಟ್ 19: ನಗರದ ಮಲ್ಲೇಶ್ವರಂನಲ್ಲಿರುವ ಪ್ರಸಿದ್ಧಿ ಚಿಟ್ ಫಂಡ್ಸ್ ಕಡೆಯಿಂದ ತಮಗೆ ಸುಮಾರು 28 ಲಕ್ಷ ರು.ಗಳಷ್ಟು ಮೋಸ ಆಗಿದೆ ಎಂದು ಕನ್ನಡ ನಟಿ ಸಂಜನಾ ಅವರು ಆರೋಪಿಸಿದ್ದಾರೆ. ಈ ಬಗ್ಗೆ ಖಾಸಗಿ ಮಾಧ್ಯಮವೊಂದಕ್ಕೆ ನೀಡಿರುವ ಹೇಳಿಕೆಯಲ್ಲಿ ಅವರು ಈ ವಿಚಾರ ಹೊರಗೆಡವಿದ್ದಾರೆ.
ಅವರ ಹೇಳಿಕೆಯ ಪ್ರಕಾರ, ಪ್ರಸಿದ್ಧಿ ಚಿಟ್ ಫಂಡ್ ಸಂಸ್ಥೆಯು ಮಹೇಶ್, ನಿರುಪಮಾ ಮತ್ತಿತರಿಂದ ಆರಂಭವಾಗಿತ್ತು. ತಾವು ಮೂರು ವರ್ಷಗಳಿಂದ ಈ ಸಂಸ್ಥೆಯಲ್ಲಿ ಹಣ ಹೂಡುತ್ತಿದ್ದು, ಪ್ರತಿ ತಿಂಗಳೂ 60ರಿಂದ 75 ಸಾವಿರ ರು.ಗಳಷ್ಟು ಹಣ ನೀಡುತ್ತಿದ್ದೆವು. ಪ್ರತಿ ತಿಂಗಳೂ ಸಂಸ್ಥೆಯ ಏಜೆಂಟ್ ಗಳು ಮನೆಗೆ ಬಂದು ಚೆಕ್ ಪಡೆಯುತ್ತಿದ್ದರು. ಆದರೆ, ಮಾರ್ಚ್ ತಿಂಗಳಿನಿಂದ ಈ ಸಂಸ್ಥೆಯಿಂದ ಏಜೆಂಟರೂ ಬರಲಿಲ್ಲ. ಇದನ್ನು ವಿಚಾರಿಸಲು ಹೊರಟಾಗಲೇ ಈ ಚಿಟ್ ಫಂಡ್ಸ್ ಅವ್ಯವಹಾರ ಬೆಳಕಿಗೆ ಬಂದಿರುವುದು ತಿಳಿದಿದೆ ಎಂದರು.

ಈ ಚಿಟ್ ಫಂಡ್ ನಲ್ಲಿ ನಾನು ಮಾತ್ರವಲ್ಲದೆ, ಅನೇಕ ಜನರು, ಹಿರಿಯ ನಾಗರಿಕರು ಹಣ ಹೂಡಿಕೆ ಮಾಡಿದ್ದಾರೆ. ಈಗ ಹಣವೂ ಇಲ್ಲ, ಬಡ್ಡಿಯೂ ಇಲ್ಲ ಎನ್ನುವಂತಾಗಿದೆ. ಈಗಾಗಲೇ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಕಂಪನಿಯ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ, ಪೊಲೀಸರು ಸಂಸ್ಥೆಯ ಎಲ್ಲಾ ಪದಾಧಿಕಾರಿಗಳ, ಮಾಲೀಕರ ಪಾಸ್ ಪೋರ್ಟ್ ಗಳನ್ನು ವಶಪಡಿಸಿಕೊಂಡಿದ್ದರು.
ಆದರೆ, ಪೊಲೀಸರು ಕ್ರಮ ಕೈಗೊಳ್ಳುವಲ್ಲಿ ಭಾರೀ ವಿಳಂಬ ಮಾಡಿದ್ದರಿಂದಾಗಿ ಅವರು ಈಗ ನಾಪತ್ತೆಯಾಗಿದ್ದಾರೆ. ಅವರೆಲ್ಲಿದ್ದಾರೆಂದು ಯಾರಿಗೂ ತಿಳಿಯುತ್ತಿಲ್ಲ. ಇಲ್ಲಿ ಕಚೇರಿಗೆ ಬಂದರೆ, ಇಲ್ಲಿನ ಸಿಬ್ಬಂದಿ ಮಹೇಶ್ ಅವರನ್ನು ಕೇಳಿ, ನಿರುಪಮಾ ಅವರನ್ನು ಕೇಳಿ ಎಂಬಿತ್ಯಾದಿ ಹೆಸರಗಳನ್ನು ಹೇಳುತ್ತಾರೆ. ಆದರೆ, ಇವರು ಹೇಳುವ ಅವರು ಯಾರೂ ಮಾತಿಗೆ ಸಿಗುತ್ತಿಲ್ಲ ಎಂದು ಅವರು ತಿಳಿಸಿದರು.
ಪ್ರಕರಣ ಬೆಳಕಿಗೆ ಬಂದ ಹೊಸತರಲ್ಲಿ ನಾವು ಹೇಳುವ ಎಲ್ಲರೂ, ವಾಟ್ಸಾಪ್ ಮೂಲಕ ಎಲ್ಲರಿಗೂ ಸಂಪರ್ಕದಲ್ಲಿದ್ದರು. ಆದರೆ, ಇತ್ತೀಚೆಗೆ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಇದೇ ಈಗ ನಮಗೆಲ್ಲಾ ಆತಂಕ ತಂದಿದೆ ಎಂದು ಅವರು ವಿವರಿಸಿದರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications