ಕನ್ನಡೇತರರಿಗಾಗಿ ಬಿಟಿಎಂ ಲೇಔಟಲ್ಲಿ ಕನ್ನಡ ಕಲಿಕೆ
ಬೆಂಗಳೂರು, ಅ. 26 : ಕನ್ನಡ ರಾಜ್ಯೋತ್ಸವ ಹತ್ತಿರ ಬರುತ್ತಿದ್ದಂತೆ ಬೆಂಗಳೂರಿನಲ್ಲಿ ಕನ್ನಡ ಪ್ರೇಮ ಜಾಗೃತವಾಗುತ್ತಿದೆ, ಕನ್ನಡಪರ ಕಾರ್ಯಕ್ರಮಗಳು ಗರಿಗೆದರುತ್ತಿವೆ. ಅದರಲ್ಲೊಂದು ಬೆಂಗಳೂರಿನಲ್ಲಿದ್ದು ಕನ್ನಡ ಕಲಿಯಲು ಉತ್ಸುಕರಾಗಿರುವ ಕನ್ನಡೇತರ ನಿವಾಸಿಗಳಿಗೆ ಕನ್ನಡ ಮಾತಾಡುವುದನ್ನು ಮತ್ತು ಬರೆಯುವುದನ್ನು ಕಲಿಸುವ ಕಾರ್ಯಕ್ರಮ.
ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಸಾಹಿತ್ಯ ಪರಿಷತ್ ಮತ್ತು ಬಿಟಿಎಂ ಬಡಾವಣೆಯ ನಿವಾಸಿಗಳು ಈ ಕಾರ್ಯಕ್ರಮವನ್ನು ಜಂಟಿಯಾಗಿ ಈ ಯೋಜನೆಯನ್ನು ರೂಪಿಸಿದ್ದಾರೆ. ಕನ್ನಡ ಕಲಿಯಲು ಉತ್ಸುಕತೆ ಇರುವವರಿಗೆ ಕನ್ನಡವನ್ನು ಇಲ್ಲಿ ಉಚಿತವಾಗಿ ಕಲಿಸಲಾಗುತ್ತಿದೆ.
ಕನ್ನಡ ಕಲಿಸುವ ಕಾರ್ಯಕ್ರಮಕ್ಕೆ ಅ.20ರಂದು ಭಾನುವಾರ ವಿಧ್ಯುಕ್ತವಾಗಿ ಚಾಲನೆ ನೀಡಲಾಗಿದೆ. ಅಚ್ಚರಿಯೆಂಬಂತೆ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರ ಮೂಲದ 27 ಕನ್ನಡೇತರರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಆಯೋಜಕರಿಗೆ ಭಾರೀ ಉತ್ಸಾಹ ತುಂಬಿದೆ.

ಬಿಟಿಎಂ ಬಡಾವಣೆಯ ಎರಡನೇ ಹಂತದಲ್ಲಿರುವ ವಿನಾಯಕ ದೇವಸ್ಥಾನದ ಹಿಂಬದಿ ಇರುವ ಸ್ಥಳದಲ್ಲಿ ಈ ತರಗತಿಗಳನ್ನು ನಡೆಸಲಾಗುತ್ತಿದೆ. ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ವೃತ್ತಿಪರ ಶಿಕ್ಷಕರು ಈ ತರಗತಿಗಳನ್ನು ನಡೆಸುತ್ತಿದ್ದಾರೆ.
ಶ್ನೀಡರ್ ಎಲೆಕ್ಟ್ರಿಕ್ ಕಂಪನಿಯಲ್ಲಿ ಹಿರಿಯ ಅಧಿಕಾರಿ ಆಗಿರುವ ಎಚ್.ಎಸ್. ಕೃಷ್ಣಪ್ರಸಾದ್ ಅವರು ಕನ್ನಡ ಕಲಿಕಾ ಆಂದೋಲನಕ್ಕೆ ನಾಂದಿ ಹಾಡಿದ್ದಾರೆ. "ಇತರ ರಾಜ್ಯಗಳ, ಕನ್ನಡ ಬಾರದಿರುವ ಬೆಂಗಳೂರು ನಿವಾಸಿಗಳು ಬಸ್ಸಿನಲ್ಲಿ, ಆಟೋ ಬಳಸುವಾಗ, ಸರಕಾರಿ ಕಚೇರಿಗಳಿಗೆ ಹೋದಾಗ ತೊಂದರೆ ಅನುಭವಿಸಬಾರದು ಎನ್ನುವ ಉದ್ದೇಶದಿಂದ ಈ ತರಗತಿಗಳನ್ನು ಆರಂಭಿಸಲಾಗಿದೆ" ಎಂದು ಕೃಷ್ಣಪ್ರಸಾದ್ ಹೇಳುತ್ತಾರೆ.
ಈ ಪ್ರಯತ್ನಕ್ಕೆ ಭಾಗವಹಿಸುವವರಿಂದ ಅತ್ಯುತ್ತಮ ಪ್ರಶಂಸೆ ಕೂಡ ವ್ಯಕ್ತವಾಗಿದೆ.
60 ವರ್ಷದ ತಮಿಳುನಾಡಿನ ಸಾವಿತ್ರಿ ಚೆಲ್ಲಪ್ಪ ಅವರು, "ಇತರೆ ಭಾಷೆಯವರಿಗೆ ಸಾರ್ವಜನಿಕ ಸಾರಿಗೆಯಲ್ಲಿ ಅಡ್ಡಾಡುವಾಗ ತುಂಬಾ ತೊಂದರೆಯಾಗುತ್ತದೆ. ಏಕೆಂದರೆ ಅಲ್ಲಿ ಹೆಚ್ಚಾಗಿ ಕನ್ನಡ ಅಕ್ಷರ ಮತ್ತು ಅಂಕಿಗಳನ್ನು ಬಳಸುತ್ತಾರೆ. ಕನ್ನಡ ಭಾಷೆ ಕಲಿಯುವ ಅವಕಾಶ ತಾನಾಗಿಯೇ ದೊರೆತಾಗ ಕೂಡಲೆ ತರಗತಿಗೆ ಸೇರಿಕೊಂಡೆ" ಎಂದು ಸಂತೋಷದಿಂದ ನುಡಿಯುತ್ತಾರೆ.
ಹೈದರಾಬಾದ್ ಮೂಲದ ನವೀನ್ ಫ್ರಾನ್ಸಿಸ್ ಪ್ರಕಾರ, "ನಾನು ಬೆಂಗಳೂರಿನಲ್ಲಿ 2005ರಿಂದ ವಾಸವಿದ್ದೇನೆ. ಕನ್ನಡ ಅರ್ಥವಾಗುತ್ತಾದರೂ ಅದು ತೆಲುಗಿಗಿಂತ ವಿಭಿನ್ನ. ಕನ್ನಡವನ್ನು ಪೂರ್ತಿಯಾಗಿ ಕಲಿಯುವುದರಿಂದ ನಾನು ಪೂರ್ತಿ ಬೆಂಗಳೂರಿಗನಾಗುತ್ತೇನೆ ಎಂಬ ಭಾವನೆಯಿಂದ ಈ ತರಗತಿಗಳನ್ನು ಸೇರಿಕೊಂಡಿದ್ದೇನೆ."
ಈ ತರಗತಿಗಳು ಒಂದು ಬಡಾವಣೆಯಲ್ಲಿ ಮಾತ್ರವಲ್ಲ ಬೆಂಗಳೂರಿನಲ್ಲಿನ ಎಲ್ಲ ಲೇಔಟುಗಳಲ್ಲಿ ಆರಂಭವಾಗಬೇಕು ಮತ್ತು ನಿರಂತರವಾಗಿ ನಡೆಯುತ್ತಿರಬೇಕು. ಆಗ ಮಾತ್ರ ಕನ್ನಡೇತರರಲ್ಲಿ ಕನ್ನಡತನವನ್ನು ತುಂಬಲು ಸಾಧ್ಯ. ಎಲ್ಲಕ್ಕಿಂತ ಹೆಚ್ಚಾಗಿ ಕನ್ನಡಿಗರು ಎಲ್ಲ ಕಡೆಗಳಲ್ಲಿ ಕನ್ನಡವನ್ನು ಬಳಸಲು ಮುಂದಾಗಬೇಕು.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ:
ವಿಳಾಸ : ಥಿಂಕ್ ವಿದ್ಯಾ ಲರ್ನಿಂಗ್ ಪ್ರೈ.ಲಿ.
#867, 25ನೇ ಮುಖ್ಯ ರಸ್ತೆ, 4ನೇ ಅಡ್ಡರಸ್ತೆ,
ಬಿಟಿಎಂ ಲೇಔಟ್ - ಎರಡನೇ ಹಂತ,
ಬೆಂಗಳೂರು - 560076
ದೂರವಾಣಿ : 09590014159
ವಿನಾಯಕ ದೇವಸ್ಥಾನದ ಹಿಂದೆ
ಈಮೇಲ್ : [email protected]
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications