ಬೆಸ್ಕಾಂನಲ್ಲಿ ಕನ್ನಡ ಡಿಂಡಿಮ: ಗ್ರಾಹಕರ ಮನವಿಗೆ ಸಿಕ್ಕ ಜಯ
ಬೆಂಗಳೂರು, ಮಾರ್ಚ್ 3: ಕರ್ನಾಟಕದಲ್ಲೇ ಸರಿಯಾಗಿ ಕನ್ನಡ ಭಾಷೆಯನ್ನು ಬಳಸುತ್ತಿಲ್ಲ ಎಂಬ ಆರೋಪ ಇದೆ. ಕೆಲವು ಸರ್ಕಾರಿ ಕಚೇರಿಯಲ್ಲೂ ಕನ್ನಡ ಭಾಷೆ ಕಡೆಗಣನೆ ಮಾಡಲಾಗುತ್ತಿದೆ ಎಂಬ ಬೇಸರವನ್ನು ಕನ್ನಡ ಪರ ಸಂಘಟನೆಗಳು ಹಾಗೂ ಕನ್ನಡಾಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ.
ಇದೀಗ, ಬೆಂಗಳೂರಿನ ಬೆಸ್ಕಾಂ ಸಂಸ್ಥೆಯಲ್ಲಿ ಕನ್ನಡವನ್ನು ಕಡೆಗಣನೆ ಮಾಡಲಾಗುತ್ತಿದೆ ಎಂದು ಗ್ರಾಹಕರೊಬ್ಬರು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ದೂರು ನೀಡಿದ್ದಾರೆ. ಅಪ್ಪಟ ಕನ್ನಡ ಸಂಸ್ಥೆಯಾಗಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಕನ್ನಡವನ್ನು ಬಳುಸುತ್ತಿಲ್ಲ ಎಂದು ದೂರಿದ್ದಾರೆ.
ಈ ಕುರಿತು ಬೆಂಗಳೂರಿನ ವಿವೇಕ್ ಶಂಕರ್ ಎಂಬ ವ್ಯಕ್ತಿ ಫೆಬ್ರವರಿ 14 ರಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಲಿಖಿತ ದೂರು ನೀಡಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾಧಿಕಾರ ಬೆಸ್ಕಾಂಗೆ ನೋಟಿಸ್ ನೀಡಿದೆ.

ವಿವೇಕ್ ಶಂಕರ್ ಅವರ ದೂರಿಗೆ ಉತ್ತರ ನೀಡಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ ಎಸ್ ನಾಗಾಭರಣ ''ಬೆಸ್ಕಾಂ ಸಂಸ್ಥೆ ಅಪ್ಪಟ ಕನ್ನಡ ಸಂಸ್ಥೆ. ಸಂಸ್ಥೆಯ ಸಾಮಾಜಿಕ ಜಾಲತಾಣದಲ್ಲಿ ಕನ್ನಡವನ್ನು ಕಡೆಗಣಿಸಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆದ್ದರಿಂದಲೇ ಸಂಬಂಧಪಟ್ಟವರಿಗೆ ಕನ್ನಡವನ್ನು ಸಾಮಾಜಿಕ ಜಾಲತಾಣವೂ ಸೇರಿದಂತೆ ಆಡಳಿತ ಎಲ್ಲಾ ಹಂತದಲ್ಲೂ ಪ್ರಧಾನವಾಗಿ ಬಳಸುವಂತೆ ಸೂಚಿಸಲು ತಿಳಿಸಿದೆ'' ಎಂದು ಆದೇಶ ನೀಡಿದ್ದಾರೆ.
ಈ ಮೂಲಕ ಬೆಸ್ಕಾಂನಲ್ಲಿ ಕನ್ನಡ ಭಾಷೆ ಕಡೆಗಣನೆ ಆಗುತ್ತಿದೆ ಎಂಬುದಕ್ಕೆ ಒಂದು ಹಂತದ ಪರಿಹಾರ ಮತ್ತು ಸಮಾಧಾನ ಸಿಕ್ಕಿದೆ. ಇನ್ನು ಮುಂದಾದರೂ ಬೆಸ್ಕಾಂ ಸಾಮಾಜಿಕ ಜಾಲತಾಣದಲ್ಲಿ ಕನ್ನಡ ಭಾಷೆ ಡಿಂಡಿಮ ಬಾರಿಸುತ್ತಾ ಕಾದುನೋಡಬೇಕಿದೆ.
-
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications