ಬೆಸ್ಕಾಂನಲ್ಲಿ ಕನ್ನಡ ಡಿಂಡಿಮ: ಗ್ರಾಹಕರ ಮನವಿಗೆ ಸಿಕ್ಕ ಜಯ
ಬೆಂಗಳೂರು, ಮಾರ್ಚ್ 3: ಕರ್ನಾಟಕದಲ್ಲೇ ಸರಿಯಾಗಿ ಕನ್ನಡ ಭಾಷೆಯನ್ನು ಬಳಸುತ್ತಿಲ್ಲ ಎಂಬ ಆರೋಪ ಇದೆ. ಕೆಲವು ಸರ್ಕಾರಿ ಕಚೇರಿಯಲ್ಲೂ ಕನ್ನಡ ಭಾಷೆ ಕಡೆಗಣನೆ ಮಾಡಲಾಗುತ್ತಿದೆ ಎಂಬ ಬೇಸರವನ್ನು ಕನ್ನಡ ಪರ ಸಂಘಟನೆಗಳು ಹಾಗೂ ಕನ್ನಡಾಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ.
ಇದೀಗ, ಬೆಂಗಳೂರಿನ ಬೆಸ್ಕಾಂ ಸಂಸ್ಥೆಯಲ್ಲಿ ಕನ್ನಡವನ್ನು ಕಡೆಗಣನೆ ಮಾಡಲಾಗುತ್ತಿದೆ ಎಂದು ಗ್ರಾಹಕರೊಬ್ಬರು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ದೂರು ನೀಡಿದ್ದಾರೆ. ಅಪ್ಪಟ ಕನ್ನಡ ಸಂಸ್ಥೆಯಾಗಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಕನ್ನಡವನ್ನು ಬಳುಸುತ್ತಿಲ್ಲ ಎಂದು ದೂರಿದ್ದಾರೆ.
ಈ ಕುರಿತು ಬೆಂಗಳೂರಿನ ವಿವೇಕ್ ಶಂಕರ್ ಎಂಬ ವ್ಯಕ್ತಿ ಫೆಬ್ರವರಿ 14 ರಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಲಿಖಿತ ದೂರು ನೀಡಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾಧಿಕಾರ ಬೆಸ್ಕಾಂಗೆ ನೋಟಿಸ್ ನೀಡಿದೆ.

ವಿವೇಕ್ ಶಂಕರ್ ಅವರ ದೂರಿಗೆ ಉತ್ತರ ನೀಡಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ ಎಸ್ ನಾಗಾಭರಣ ''ಬೆಸ್ಕಾಂ ಸಂಸ್ಥೆ ಅಪ್ಪಟ ಕನ್ನಡ ಸಂಸ್ಥೆ. ಸಂಸ್ಥೆಯ ಸಾಮಾಜಿಕ ಜಾಲತಾಣದಲ್ಲಿ ಕನ್ನಡವನ್ನು ಕಡೆಗಣಿಸಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆದ್ದರಿಂದಲೇ ಸಂಬಂಧಪಟ್ಟವರಿಗೆ ಕನ್ನಡವನ್ನು ಸಾಮಾಜಿಕ ಜಾಲತಾಣವೂ ಸೇರಿದಂತೆ ಆಡಳಿತ ಎಲ್ಲಾ ಹಂತದಲ್ಲೂ ಪ್ರಧಾನವಾಗಿ ಬಳಸುವಂತೆ ಸೂಚಿಸಲು ತಿಳಿಸಿದೆ'' ಎಂದು ಆದೇಶ ನೀಡಿದ್ದಾರೆ.
ಈ ಮೂಲಕ ಬೆಸ್ಕಾಂನಲ್ಲಿ ಕನ್ನಡ ಭಾಷೆ ಕಡೆಗಣನೆ ಆಗುತ್ತಿದೆ ಎಂಬುದಕ್ಕೆ ಒಂದು ಹಂತದ ಪರಿಹಾರ ಮತ್ತು ಸಮಾಧಾನ ಸಿಕ್ಕಿದೆ. ಇನ್ನು ಮುಂದಾದರೂ ಬೆಸ್ಕಾಂ ಸಾಮಾಜಿಕ ಜಾಲತಾಣದಲ್ಲಿ ಕನ್ನಡ ಭಾಷೆ ಡಿಂಡಿಮ ಬಾರಿಸುತ್ತಾ ಕಾದುನೋಡಬೇಕಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications