'ಕನ್ನಡ, ಬಾವುಟ, ಪ್ರತ್ಯೇಕ ಧರ್ಮ ಎಲ್ಲ ಚುನಾವಣೆ ಗಿಮಿಕ್'
ಬೆಂಗಳೂರು, ಆಗಸ್ಟ್ 5: ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸಂಬಂಧಿಸಿದ ನಲವತ್ತು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಷ್ಟೆಲ್ಲ ಮಾಹಿತಿಯನ್ನು ಒಂದೆರಡು ದಿನದಲ್ಲಿ ಸಂಗ್ರಹಿಸುವುದಕ್ಕೆ ಸಾಧ್ಯವಾ? ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಪ್ರತಿಕ್ರಿಯಿಸಿದರು.
ಸದ್ಯದ ವಿವಿಧ ವಿದ್ಯಮಾನಗಳ ಬಗ್ಗೆ ಅವರ ಜತೆ ಒನ್ಇಂಡಿಯಾ ಕನ್ನಡ ಪ್ರಶ್ನಿಸಿದಾಗ ಅವರು ಉತ್ತರಿಸಿದರು. "ಗುಜರಾತ್ ನ ಶಾಸಕರನ್ನು ಇಲ್ಲಿಗೆ ಕರೆದುಕೊಂಡು ಬಂದು ಶಿವಕುಮಾರ್ ಉಸ್ತುವಾರಿ ನೋಡಿಕೊಳ್ಳುತ್ತಿದ್ದರಿಂದ ಈ ರೀತಿ ದಾಳಿ ನಡೆಸಲಾಗಿದೆ ಎಂಬ ಕಾಂಗ್ರೆಸ್ ನವರ ಮಾತು ನಂಬುವುದಕ್ಕೆ ಸಾಧ್ಯವಿಲ್ಲ" ಎಂದರು.

ಜತೆಗೆ ಬಿಜೆಪಿ ಅವರ ಮೇಲೆ ಏಕೆ ದಾಳಿ ಮಾಡ್ತಿಲ್ಲ? ಕಾಂಗ್ರೆಸ್ ನವರನ್ನೇ ಗುರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೂಡ ತಮಾಷೆಯಾಗಿದೆ. ಇದು ಹೇಗೆ ಅಂದರೆ, ಕಳ್ಳನೊಬ್ಬ ತನ್ನ ಮನೆಯ ಮೇಲೆ ಏಕೆ ದಾಳಿ ಮಾಡಿ, ಅರೆಸ್ಟ್ ಮಾಡ್ತೀರಿ? ಅಲ್ಲೊಬ್ಬ ಕಳ್ಳ ಇದ್ದಾನೆ. ಅವನನ್ನೂ ಹಿಡಿಯಿರಿ ಅಂದ ಹಾಗಾಯಿತು ಎಂದರು.
ಇನ್ನು ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಘೋಷಣೆಗೆ ಅವಕಾಶ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಚುನಾವಣೆಗಳು ಹತ್ತಿರ ಬರುತ್ತಿದ್ದ ಹಾಗೆ ಕನ್ನಡ, ಕನ್ನಡ ಬಾವುಟ, ಪ್ರತ್ಯೇಕ ಧರ್ಮ ಎಲ್ಲ ನೆನಪಾಗಿ ಬಿಡುತ್ತದೆ. ಪ್ರತ್ಯೇಕ ಧರ್ಮ ಆಗಲಿ ಎಂದು ನೀವು ಒತ್ತಡ ಹಾಕಿ. ಅದಕ್ಕೆ ಬೇಕಾದ ಅನುಕೂಲ ಮಾಡಿಕೊಡುವುದಾಗಿ ಇವರು ಏಕೆ ಹೇಳುತ್ತಾರೆ ಎಂದು ಪ್ರಶ್ನಿಸಿದರು.
ಹಾಗೆಲ್ಲ ಯಾವುದೇ ಪ್ರತ್ಯೇಕ ಧರ್ಮ ಘೋಷಣೆ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ. ಆ ರೀತಿ ಮಾಡುತ್ತಾ ಹೋದರೆ, ನಾಳೆ ತಲೆಗೊಬ್ಬರು ಹೊಸ ಧರ್ಮ ಆರಂಭಿಸಿಬಿಡುತ್ತಾರೆ ಎಂದು ಅವರು ಹೇಳಿದರು.
-
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications