ಕನ್ನಡ ಕಡ್ಡಾಯಕ್ಕಾಗಿ ಹೋರಾಟ: 'ಕರವೇ' ಆರೋಪಗಳಿಗೆ ಜಿ.ಪರಮೇಶ್ವರ ತಿರುಗೇಟು
ಬೆಂಗಳೂರು, ಡಿಸೆಂಬರ್ 28: ಎಪ್ಪತ್ತು ವರ್ಷ ಆಡಳಿತ ನೀಡಿದ ಕಾಂಗ್ರೆಸ್ ಬೇಕಾದಷ್ಟು ಪಾಠ ಕಲಿತಿದೆ. ಈಗ ಕಲಿಸುವುದು ಬೇಕಾಗಿಲ್ಲ. ಕನ್ನಡ ಕಡ್ಡಾಯಕ್ಕೆ ಬಿಬಿಎಂಪಿ ಅಗತ್ಯ ಸೂಚನೆ ನೀಡಿದೆ. ಈ ಮಧ್ಯೆ ಶಾಪಿಂಗ್ ಮಳಿಗೆಗಳ ಮೇಲೆ ದಾಳಿ ಮಾಡಿರುವುದು ಸರಿಯಲ್ಲ. ಕಾನೂನು ಕೈಗೆತ್ತಿಕೊಂಡಾಗ ಪೊಲೀಸರು ಸೂಕ್ತ ನಿರ್ಧಾರ ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು 'ಕರವೇ' ಆರೋಪಗಳಿಗೆ ತಿರುಗೇಟು ನೀಡಿದರು.
ಬೆಂಗಳೂರಿನಲ್ಲಿನ ವಾಣಿಜ್ಯ ಮಳಿಗೆಗಳು ಶೇಕಡಾ 60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂದು ಬಿಬಿಎಂಪಿ ಸೂಚಿಸಿದೆ. ಇದರ ಬೆನ್ನಲ್ಲೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಬೀದಿಗಿಳಿದಿತ್ತು. ಆಂಗ್ಲ ನಾಮಫಲಕ ಕಿತ್ತು ಹಾಕಿದ್ದರು. ಮಾಲೀಕರಿಗೆ ಪೆಪ್ಪರ್ ಸ್ಪ್ರೇ ಹೊಡೆದಿದ್ದರು, ಬಿಸಿ ಮುಟ್ಟಿಸಿದ್ದರು.

ಈ ವೇಳೆ ಪೊಲೀಸರು ಕರವೇ ಸದಸ್ಯರನ್ನು ತಡೆದಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ವಶಕ್ಕೆ ಪಡೆದವರನ್ನು ಬಿಡುಗಡೆ ಮಾಡಿಲ್ಲ. ಸರ್ಕಾರ, ಪೊಲೀಸರು ಮಾಲ್ಗಳ ಪರವಿದೆ ಎಂದು ಕರವೇ ಆರೋಪಿಸಿತ್ತು. ಇದಕ್ಕೆ ಗೃಹ ಸಚಿವರು ತಿರುಗೇಟು ಕೊಟ್ಟಿದ್ದಾರೆ.
ಪೊಲೀಸರು ಕಾನೂನಾತ್ಮಕ ಕೆಲಸ ಮಾಡಿದ್ದಾರೆ
ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಕನ್ನಡ ರಕ್ಷಣೆ ವಿಚಾರದಲ್ಲಿ ಸರ್ಕಾರ ಕನ್ನಡ ಪರ ಅನೇಕ ನಿರ್ಧಾರ ಕೈಗೊಂಡಿದ್ದೇವೆ. ಕನ್ನಡದಲ್ಲಿ ನಾಮಫಲಕ ಹಾಕಬೇಕು ಎಂಬ ವಿಚಾರ ಕುರಿತು ಅಗತ್ಯ ಸೂಚನೆ ನೀಡಿದೆ. ಈ ಮಧ್ಯೆ ಒತ್ತಾಯ ಪೂರ್ವಕವಾಗಿ ಕರವೇ ಸಂಘಟನೆಯವರು ವಾಣಿಜ್ಯ ಮಳಿಗೆಗಳಲ್ಲಿ ದಾಳಿ ಮಾಡಿದ್ದಾರೆ. ಏನೇ ಆಗಲಿ ಕಾನೂನು ಕೈಗೆತ್ತಿಕೊಳ್ಳಬಾರದು. ಇಂತಹ ಸಂದರ್ಭದಲ್ಲಿ ಪೊಲೀಸರು ಸುಮ್ಮನಿರಲು ಸಾಧ್ಯವಿಲ್ಲ ಎಂದರು.
ಕನ್ನಡ ಕಡ್ಡಾಯ ಬಗ್ಗೆ 'ಕರವೇ' ಅವರು ಸರ್ಕಾರಕ್ಕೆ ಬಿಬಿಎಂಪಿ ಗೆ ತಿಳಿಸಿ ಒತ್ತಾಯಿಸಬಹುದಿತ್ತು. ಅದನ್ನು ಬಿಟ್ಟು ಕಾನೂನು ಕೈಗೆತ್ತಿಕೊಂಡರೆ ನೋಡಿಕೊಂಡು ಪೊಲೀಸರು ಸುಮ್ಮನಿರಬೇಕಿತ್ತಾ?. ಘಟನೆಯಲ್ಲಿ ಪೊಲೀಸರು ಕಾನೂನಾತ್ಮಕ ಕೆಲಸ ಮಾಡಿದ್ದಾರೆ.

ಹೊರಗಿನವರಿಗೆ ನಾವೇನು ಸಂದೇಶ ಕೊಡುತ್ತಿದ್ದೇವೆ?
ಬೆಂಗಳೂರು ವಿಶ್ವಕ್ಕೆ ಮಾದರಿಯಾದ ಪಟ್ಟಣ, ಈ ನಗರದ ಬಗ್ಗೆ ನಮಗೆಲ್ಲ ಹೆಮ್ಮೆ ಇದೆ. ಇಂತಹ ನಗರಕ್ಕೆ ರಾಜ್ಯ ಹೊರ ರಾಜ್ಯದಿಂದ ಬರುತ್ತಾರೆ. ಇಂತಹ ಘಟನೆಗಳಿಂದ ನಾವು ಏನು ಸಂದೇಶ ಕೊಡುತ್ತೇವೆ. ಇಂತಹ ಘಟನೆಗಳಾದಾಗ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಸೂಕ್ತ ಕ್ರಮ ಜರುಗಿಸಿದ್ದಾರೆ ಎಂದು ಕರವೆ ನಡೆ ಖಂಡಿಸಿದರು.
ಸರ್ಕಾರ ಸಹ ಬಿಬಿಎಂಪಿ ಮೂಲಕ ಸೂಚನೆ ನೀಡಿದೆ. ಕರೆವೇ ಅನ್ನು ಪೊಲೀಸರು ಸರಿಯಾಗಿ ನಡೆಸಿಕೊಂಡಿಲ್ಲ ಎಂದಿದ್ದಾರೆ. ಹಾಗಾದರೆ ಹೇಗೆ ನಡೆಸಿಕೊಳ್ಳಬೇಕು? ಪ್ರತಿಭಟನೆ ಮಾಡುತ್ತಿದ್ದರೆ, ಪೊಲೀಸರು ಚರ್ಚೆಗೆ ಅರ್ಧಗಂಟೆ ಸಮಯ ಕೊಡುತ್ತಾರೆ. ಅದರ ನಂತರ ಏನು ಮಾಡಬೇಕು? ಎಂದು ಸಚಿವರು ಪ್ರಶ್ನಿಸಿದರು.
ರಕ್ಷಣೆ ಕೊಡುವುದು ಪೊಲೀಸರ ಕರ್ತವ್ಯ
ಸರ್ಕಾರಕ್ಕೆ ಮನವಿ ಮಾಡುವ ಬದಲು ನೀವೇ ಮಳಿಗೆಗಳ ಮೇಲೆ ದಾಳಿ ಮಾಡಿ, ದಾಂಧಲೆ ಮಾಡಿದಾಗ, ಬೋರ್ಡ್ ಕಿತ್ತು ಹಾಕಿದಾಗ ಶಾಪಿಂಗ್ ಮಾಲ್ ನವರು ಪೊಲೀಸರ ಮುಂದೆ ರಕ್ಷಣೆ ಕೂರುತ್ತಾರೆ. ಅದನ್ನು ನೋಡಿಕೊಂಡು ಪೊಲೀಸರು ಸುಮ್ಮನಿರಲ್ಲ. ಅವರಿಗೂ ರಕ್ಷಣೆ ಕೊಡುವುದು ಪೊಲೀಸರ ಕೆಲಸ ಎಂದರು.
2017ರಲ್ಲಿನ ಕನ್ನಡ ಕಡ್ಡಾಯ ಕಾಯ್ದೆ ಅನುಷ್ಠಾನಕ್ಕಾಗಿ ಸರ್ಕಾರಕ್ಕೆ ಒತ್ತಾಯ ಮಾಡಲಿ. ಅದಕ್ಕಾಗಿ ಮೂರು ತಿಂಗಳ ಸಮಯ ಕೊಡಲಿ. ಅದನ್ನು ಬಿಟ್ಟು ಕಾನೂನು ಕೈಗೆತ್ತಿಕೊಳ್ಳಬಾರದು. ನಮ್ಮ ಸರ್ಕಾರ ಯಾರ ಪರವಾಗಿಯೂ ಇಲ್ಲ. ಇಲ್ಲಿ ಪರ ವಿರೋಧ ಪ್ರಶ್ನೆಯೇ ಇಲ್ಲ. ನಾವು ಕಾನೂನು ಪರವಾಗಿದ್ದೇವೆ. ಕಾಂಗ್ರೆಸ್ ಬೇಕಾದಷ್ಟು ಪಾಠ ಕಲಿತಿದೆ ಎಂದು ಅವರು ಪ್ರಶ್ನೆಗಳಿಗೆ ಉತ್ತರಿಸಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Love Mocktail 3 Row: ಕೃತಿಚೌರ್ಯ ವಿವಾದದ ನಡುವೆ ಸತ್ಯ ಮತ್ತು ನೈತಿಕತೆ ಚರ್ಚೆ: ಮಧು ವೈ.ಎನ್ ಬರಹ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications