ನಾಮಫಲಕದಲ್ಲಿ ಕನ್ನಡ ಕಡ್ಡಾಯ ಯಾವ ಕಾಯ್ದೆಯೆಲ್ಲಿದೆ? ಹೈಕೋರ್ಟ್
ಬೆಂಗಳೂರು, ಸೆಪ್ಟೆಂಬರ್ 15: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಯಾವ ಕಾಯ್ದೆಯಲ್ಲಿದೆ ಎಂದು ಹೈಕೋರ್ಟ್ ಬಿಬಿಎಂಪಿಗೆ ತರಾಟೆ ತೆಗೆದುಕೊಂಡಿದೆ. ಬೆಂಗಳೂರು ನಗರ ವ್ಯಾಪ್ತಿಯ ವಾಣಿಜ್ಯ ಸಂಸ್ಥೆಗಳು ಅಳವಡಿಸುವ ನಾಮಫಲಕಗಳಲ್ಲಿ ಕನ್ನಡ ಪ್ರಧಾನವಾಗಿರಬೇಕು ಎಂದು ಬಿಬಿಎಂಪಿ ಸುತ್ತೋಲೆ ಹೊರಡಿಸಿತ್ತು.
ಈ ಸುತ್ತೋಲೆಯ ರದ್ದುಕೋರಿ ಭಾರತೀಯ ಚಿಲ್ಲರೆ ಮಾರಾಟಗಾರರ ಸಂಘ ಹಾಗೂ ಆದಿತ್ಯ ಬಿರ್ಲಾ ಫ್ಯಾಷನ್ ಮತ್ತು ರೀಟೇಲ್ ಲಿಮಿಟೆಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಕುರಿತು ಅರ್ಜಿ ವಿಚಾರಣೆ ನಡೆಸಿರುವ ನ್ಯಾ. ಜಿ. ನರೇಂದರ್ ಅವರಿದ್ದ ಏಕ ಸದಸ್ಯ ಪೀಠ, ಯಾವ ಕಾನೂನಿನ ಆಧಾರದ ಮೇಲೆ ಈ ಸುತ್ತೋಲೆ ಹೊರಡಿಸಿದ್ದೀರಿ ಎಂದು ವಿವರಣೆ ನೀಡುವಂತೆ ಬಿಬಿಎಂಪಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು.
ನಾಮಫಲಕಗಳ ಮೇಲೆ ಭಾಷೆಯನ್ನು ಪ್ರಚುರಪಡಿಸಲು ವಾಣಿಜ್ಯ ಸಂಸ್ಥೆಗಳ ಮೇಲೆ ಒತ್ತಡ ಹೇರುವುದು ಸರಿಯಾದ ಸಂವಿಧಾನ ಸಲ್ಲ ಎಂದು ಹೇಳಿದೆ. ಅಲ್ಲದೆ ಭಾಷಡಯು ನಮ್ಮ ಸಂಸ್ಕೃತಿಯನ್ನು ಬಿಂಬಿಸುತ್ತದೆ, ಅದನ್ನು ಪ್ರಚುರಪಡಿಸಬೇಕಿದ್ದರೆ ಶಾಲಾ ಕಾಲೇಜುಗಳ ಮೂಲಕ ಭಾಷೆಯ ಶ್ರೇಷ್ಠತೆಯನ್ನು ತಿಳಿಯಪಡಿಸಿ, ಅದನ್ನು ಬಿಟ್ಟು ವಾಣಿಜ್ಯ ಸಂಸ್ಥೆಗಳ ಮೇಲೆ ಏಕೆ ಒತ್ತಡ ಹಾಕುತ್ತಿದ್ದೀರ ಎಂದು ಪ್ರಶ್ನಿಸಿದೆ.

ಶೇ.60ರಷ್ಟು ಕನ್ನಡ ಪದಗಳನ್ನು ಬಳಸಬೇಕಿದ್ದು, ಸ್ಪಷ್ಟವಾಗಿ ಎದ್ದು ಕಾಣುವಂತಿರಬೇಕು, ಶೇ.40ರಷ್ಟು ಅನ್ಯ ಭಾಷೆ ಪದಗಳನ್ನು ಬಳಸಬಹುದೆಂದು ಆದೇಶ ಹೊರಡಿಸಿದೆ ಎಂದು ಅರ್ಜಿದಾರರ ಪರ ವಕೀಲ ಮಾಹಿತಿ ನೀಡಿದ್ದಾರೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications