ನಾಮಫಲಕದಲ್ಲಿ ಕನ್ನಡವೇ ಪ್ರಧಾನ, ಸುತ್ತೋಲೆ ಹಿಂದಕ್ಕೆ?
Recommended Video

ಬೆಂಗಳೂರು, ಅಕ್ಟೋಬರ್ 9: ಬೆಂಗಳೂರಲ್ಲಿ ಎಲ್ಲಾ ಅಂಗಡಿಗಳು, ಮಾಲ್ ಗಳು ಸೇರಿದಂತೆ ಎಲ್ಲಾ ವಾಣಿಜ್ಯ ಸಂಸ್ಥೆಗಳು ಅಳವಡಿಸುವ ನಾಮಫಲಕಗಳು ಪ್ರಧಾನವಾಗಿ ಕನ್ನಡ ಭಾಷೆಯಲ್ಲೇ ಇರಬೇಕು ಎನ್ನುವ ನಿಯಮದಿಂದ ಹಿಂದೆ ಅರಿಯಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ.
ಸುತ್ತೋಲೆಯನ್ನು ರದ್ದುಪಡಿಸುವಂತೆ ಕೋರಿ ಹಲವು ವಾಣಿಜ್ಯ ಸಂಸ್ಥೆಗಳು ಹೈಕೋರ್ಟ್ ಗೆ ತಕರಾರು ಅರ್ಜಿ ಅಲ್ಲಿಸಿದ್ದವು. ಅದಕ್ಕೆ ನ್ಯಾಯಾಲಯ ನಾಮಫಲಕಗಳು ಕನ್ನಡದಲ್ಲಿರಬೇಕು ಎನ್ನುವ ನಿಯಮ ಯಾವ ಕಾಯ್ದೆಯಲ್ಲಿದೆ ಎಂದು ಪ್ರಶ್ನಿಸಿತ್ತು.
ಯಾವ ಕಾನೂನಿನ ಆಧಾರದ ಮೇಲೆ ಇಂತಹ ಸುತ್ತೋಲೆಯನ್ನು ಹೊರಡಿಸಿದ್ದೀರಿ ವಿವರಣೆ ನೀಡುವಂತೆ ನಿರ್ದೇಶನ ನೀಡಿತ್ತು. ಭಾಷೆಯನ್ನು ಬೆಳೆಸಲು ವಾಣಿಜ್ಯ ಸಂಸ್ಥೆಗಳ ಮೇಲೆ ಒತ್ತಡ ಹೇರುವುದು ಹಾಗೂ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಮಾಡುವುದು ಸರಿಯಾದ ವಿಧಾನ ಅಲ್ಲ ಎಂದು ಟೀಕಿಸಿತ್ತು.

ಜು. 27ರಂದು ನಾಮಫಲಕದಲ್ಲಿ ಕನ್ನಡ ಕಡ್ಡಾಯ ಸುತ್ತೋಲೆ ಹೊರಡಿಸಿತ್ತು
ಜುಲೈ 27ರಂದು ನಾಮಫಲಕದಲ್ಲಿ ಕನ್ನಡ ಭಾಷೆಯನ್ನು ಪ್ರಧಾನವಾಗಿ ಬಳಸುವುದನ್ನು ಕಡ್ಡಾಯಗೊಳಿಸಿ ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ.

ಪಾಲಿಕೆ ಸಭೆಯಲ್ಲಿ ನಿರ್ಣಯ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರು ಬಿಬಿಎಂಪಿಗೆ ನಾಮಫಲಕದಲ್ಲಿ ಕನ್ನಡ ಬಳಕೆ ಸಂಬಂಧಿಸಿದಂತೆ ಕೆಲವು ಸಲಹೆ ಸೂಚನೆ ನೀಡಿತ್ತು. ಅದರಂತೆ ಬಿಬಿಎಂಪಿಯ ಪಾಲಿಕೆ ಸಭೆಯಲ್ಲಿ ಈ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡಿ ಶೇ.40ರಷ್ಟು ಅನ್ಯ ಭಾಷೆ ಹಾಗೂ ಶೇ.60 ಕನ್ನಡ ಭಾಷೆಯನ್ನು ನಾಮಫಲಕದಲ್ಲಿ ಬಳಕೆ ಮಾಡಬೇಕು. ತಪ್ಪಿದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲು ಕೌನ್ಸಿಲ್ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಬಿಬಿಎಂಪಿ ಅಡ್ಡಕತ್ತರಿಯಲ್ಲಿ
ಪ್ರಧಾನವಾಗಿ ಕನ್ನಡ ಭಾಷೆ ಬಳಕೆ ಸುತ್ತೋಲೆಯನ್ನು ಯಾವ ಕಾನೂನಿನ ಅಡಿಯಲ್ಲಿ ಹೊರಡಿಸಲಾಗಿದೆ. ಸುತ್ತೋಲೆಗೆ ಕಾನೂನಿನ ಮಾನ್ಯತೆ ಇದೆಯಾ ಎಂದು ನ್ಯಾಯಪೀಠ ಬಿಬಿಎಂಪಿಗೆ ಪ್ರಶ್ನೆ ಮಾಡಿದೆ. ಆದರೆ ಸುತ್ತೋಲೆ ಕಾನೂನಿನ ಅಡಿಯಲ್ಲಿ ಇಲ್ಲ ಎನ್ನುವುದು ಮನದಟ್ಟಾಗಿದೆ. ಸುತ್ತೋಲೆ ವಾಪಸ್ ಪಡೆದರೆ ಕನ್ನಡಪರ ಸಂಘಟನೆಗಳು ಹಾಗೂ ಕನ್ನಡಿಗರ ವಿರೋಧ ಎದುರಿಸಬೇಕಾಗುತ್ತದೆ, ಇಲ್ಲವಾದರೆ, ನ್ಯಾಯಾಲಯದಲ್ಲಿ ಮುಜುಗರ ಅನುಭವಿಸಬೇಕಾದ ಸಂದಿಗ್ಧ ಪರಿಸ್ಥಿತಿಯಲ್ಲಿದೆ.

ನಾಮಫಲಕದಲ್ಲಿ ಕನ್ನಡ ಪ್ರಧಾನವಾಗಿರದಿದ್ದರೆ ಪರವಾನಗಿ ರದ್ದು
ವಾಣಿಜ್ಯ ಸಂಸ್ಥೆಗಳು, ಅಂಗಡಿಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ ಪ್ರಧಾನವಾಗಿ ಕನ್ನಡ ಭಾಷೆ ಇರದಿದ್ದರೆ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ತಿಳಿಸಿತ್ತು. ಹೀಗಾಗಿಯೇ ಅನೇಕ ಸಂಸ್ಥೆಗಳು ಹೈಕೋರ್ಟ್ ಮೊರೆ ಹೋಗಿದ್ದವು.
-
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್












Click it and Unblock the Notifications