ದಿನಪತ್ರಿಕೆ ಸಂಯುಕ್ತ ಕರ್ನಾಟಕಕ್ಕೆ 60ನೇ ಹುಟ್ಟುಹಬ್ಬದ ಸಂಭ್ರಮ
ಬೆಂಗಳೂರು, ಜನವರಿ 28 : ಕರ್ನಾಟಕದ ಪುರಾತನ ಮತ್ತು ಜನಪ್ರಿಯ ದಿನಪತ್ರಿಕೆಗಳಲ್ಲಿ ಒಂದಾಗಿರುವ 'ಸಂಯುಕ್ತ ಕರ್ನಾಟಕ'ದ ಬೆಂಗಳೂರಿನ ಆವೃತ್ತಿ ಆರಂಭವಾಗಿ 60 ವರ್ಷ ಸಂದಿರುವ ಸುಸಂದರ್ಭದಲ್ಲಿ, ಇದರ ಯಶಸ್ಸಿನಲ್ಲಿ ಭಾಗಿಯಾದ ಹಿರಿಯ ಪತ್ರಕರ್ತರನ್ನು ಸ್ಮರಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸರಿಯಾಗಿ ಜನವರಿ 26ಕ್ಕೆ ಸಂಯುಕ್ತ ಕರ್ನಾಟಕದ ಬೆಂಗಳೂರಿನ ಆವೃತ್ತಿ ಶುರುವಾಗಿ 60 ವರ್ಷ (ಜನವರಿ 26, 1959). ಇಂದಿನ ಹಲವಾರು ಪತ್ರಕರ್ತರು ತಮ್ಮ ಪತ್ರಿಕಾ ಜೀವನವನ್ನು ಆರಂಭಿಸಿದ್ದು ಈ ಪತ್ರಿಕೆಯ ಮೂಲಕವೆ. ಉತ್ತಮ ಪತ್ರಕರ್ತರಾಗಿ ಬೆಳೆಯಲು ಕೂಡ ಈ ದಿನಪತ್ರಿಕೆ ವೇದಿಕೆ ಕಲ್ಪಿಸಿಕೊಟ್ಟಿದೆ.
ಈಗಲೂ ಅಷ್ಟೇ ಜನಪ್ರಿಯತೆ ಉಳಿಸಿಕೊಂಡಿರುವ ಸಂಯುಕ್ತ ಕರ್ನಾಟಕ ಜನವರಿ 28, ಸೋಮವಾರ ತನ್ನ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನದ ಖಿಂಚಾ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ 60ನೇ ವರ್ಷದ ಸಮಾರಂಭ ಜರುಗಲಿದೆ. ಇದಕ್ಕೂ ಮೊದಲು 3 ಗಂಟೆಗೆ ಕೃಷ್ಣ ಪ್ರಸಾದ್ ಅವರಿಂದ ಕರ್ನಾಟಕ ಸಂಗೀತ ಕಾರ್ಯಕ್ರಮ ಇರಲಿದೆ.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ, ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಜೆ ಮುಂತಾದವರು ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲೋಕ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಯುಬಿ ವೆಂಕಟೇಶ್ ಅವರು ವಹಿಸಲಿದ್ದಾರೆ.
ಬೆಂಗಳೂರಿನ ಆವೃತ್ತಿ ಆರಂಭವಾಗುವ ಒಂದು ವರ್ಷ ಮೊದಲೇ ಹುಬ್ಬಳ್ಳಿಯಿಂದ ವರದಿಗಾರರಾಗಿ ವೃತ್ತಿಜೀವನ ಆರಂಭಿಸಿದ ಹಿರಿಯ ಪತ್ರಕರ್ತ ಪ್ರಹ್ಲಾದ್ ಕುಳಲಿ ಮುಂತಾದವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುತ್ತಿದೆ. ಪ್ರಹ್ಲಾದ್ ಕುಳಲಿ ಅವರು ಸ್ಥಾನಿಕ ಸಂಪಾದಕರಾಗಿ 1997ರಲ್ಲಿ ನಿವೃತ್ತರಾಗುವ ಮುನ್ನ ಸಂಯುಕ್ತ ಕರ್ನಾಟಕದಲ್ಲಿ 40 ವರ್ಷಕ್ಕೂ ಹೆಚ್ಚು ಸೇವೆ ಸಲ್ಲಿಸಿದ್ದಾರೆ.

ಹಿರಿಯ ಉಪಸಂಪಾದಕರಾಗಿ ಸೇರಿ, ಸ್ಥಾನಿಕ ಸಂಪಾದಕರಾಗಿ ಇಪ್ಪತ್ತೇಳು ವರ್ಷ ಸೇವೆ ಸಲ್ಲಿಸಿ 1985ರಲ್ಲಿ ನಿವೃತ್ತರಾದ ಎಚ್ ಆರ್ ನಾಗೇಶ್ ರಾವ್ ಅವರನ್ನು ಸ್ಮರಿಸಲಾಗುತ್ತಿದೆ. ಎಚ್ ಆರ್ ನಾಗೇಶ್ ರಾವ್ ಅವರ ಪರವಾಗಿ ಅವರ ಮಗ ಖ್ಯಾತ ವಿಜ್ಞಾನಿ ಹಾಲ್ದೊಡ್ಡೇರಿ ಸುಧೀಂದ್ರ ಅವರು ಪುರಸ್ಕಾರ ಸ್ವೀಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವೃತ್ತಪತ್ರಿಕೆ ನಡೆದುಬಂದ ದಾರಿಯನ್ನು ಕೂಡ ನೆನಪಿಸಿಕೊಳ್ಳಲಾಗುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications