ಬಾಹುಬಲಿ-2 ಬಿಡುಗಡೆ ದಿನ ಕನ್ನಡ ಸಂಘಟನೆಗಳಿಂದ ಕರ್ನಾಟಕ ಬಂದ್
ಏಪ್ರಿಲ್ 28ರಂದು ಬಾಹುಬಲಿ ಬಿಡುಗಡೆ ಆಗುವ ದಿನ ಕರ್ನಾಟಕ ಬಂದ್ ಗೆ ಕನ್ನಡಪರವಾದ ಎರಡು ಸಾವಿರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ತಮಿಳು ನಟ ಸತ್ಯರಾಜ್ ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿವೆ
ಬೆಂಗಳೂರು, ಏಪ್ರಿಲ್ 19: ತಮಿಳುನಟ ಸತ್ಯರಾಜ್ ನಿರ್ವಹಿಸಿದ ಕಟ್ಟಪ್ಪ ಪಾತ್ರ ತೆಲುಗಿನ ಬಾಹುಬಲಿ ಸಿನಿಮಾದ ಪ್ರಮುಖ ಪಾತ್ರಗಳಲ್ಲೊಂದು. ಇದೀಗ 'ಕಟ್ಟಪ್ಪನ ನಂಬಿ ಕೆಟ್ನಪ್ಪೋ' ಎನ್ನುವಂತಾಗಿದೆ ಆ ಸಿನಿಮಾ ನಿರ್ಮಾಪಕ-ನಿರ್ದೇಶಕರ ಸ್ಥಿತಿ. ಸತ್ಯರಾಜ್ ಈ ಹಿಂದೆ ನೀಡಿದ ಹೇಳಿಕೆ ಕಾರಣಕ್ಕೆ ಕರ್ನಾಟಕದಲ್ಲಿ ಬಿಡುಗಡೆಗೆ ಅವಕಾಶ ನೀಡಲ್ಲ ಎಂದಿದ್ದ ಕನ್ನಡಪರ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿವೆ.
ಎರಡು ಸಾವಿರದಷ್ಟು ಕನ್ನಡಪರ ಸಂಘಟನೆಗಳು ಸಿನಿಮಾ ಬಿಡುಗಡೆ ದಿನ ಬಂದ್ ನಡೆಸಲು ಬೆಂಬಲ ಸೂಚಿಸಿವೆ. ಈ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತನಾಡಿ, ಕರ್ನಾಟಕ ಹಾಗೂ ಕನ್ನಡಿಗರ ವಿರುದ್ಧವಾಗಿ ಹೇಳಿಕೆ ನೀಡಿದ್ದ ನಟ ಸತ್ಯರಾಜ್ ಕ್ಷಮೆ ಕೇಳುವವರೆಗೆ ಬಾಹುಬಲಿ-2 ಸಿನಿಮಾ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.['ಏ.28ರಂದು 'ಬಾಹುಬಲಿ 2' ಬಿಡುಗಡೆ ದಿನ ಬೆಂಗ್ಳೂರು ಬಂದ್']

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಈ ಹಿಂದೆ ನಡೆದಿದ್ದ ಪ್ರತಿಭಟನೆ ವೇಳೆ ನಟ ಸತ್ಯರಾಜ್ ನೀಡಿದ್ದ ಹೇಳಿಕೆ ವಿಡಿಯೋ ವೈರಲ್ ಆಗಿದೆ. ಬಾಹುಬಲಿ-2 ಸಿನಿಮಾ ಬಿಡುಗಡೆ ದಿನಾಂಕ ಹತ್ತಿರ ಇರುವ ವೇಳೆಯಲ್ಲಿ ಸತ್ಯರಾಜ್ ಬೇಷರತ್ತಾಗಿ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಲಾಗಿದೆ.

"ನಾವು ಆ ಸಿನಿಮಾವನ್ನು ತಿರಸ್ಕರಿಸಲು ನಿರ್ಧರಿಸಿದ್ದೇವೆ. ಕರ್ನಾಟಕ ಹಾಗೂ ಕನ್ನಡಿಗರನ್ನು ನಿಂದನೆ ಮಾಡಿರುವ ತಮಿಳು ನಟ ಸತ್ಯರಾಜ್ ಅಭಿನಯಿಸಿರುವ ಬಾಹುಬಲಿ-2 ಸಿನಿಮಾವನ್ನು ಕರ್ನಾಟಕದಲ್ಲಿ ಯಾರೂ ನೋಡಬಾರದು. ಒಂದು ಲಕ್ಷಕ್ಕಿಂತ ಹೆಚ್ಚು ಕನ್ನಡಿಗರು ಅಂದು ಟೌನ್ ಹಾಲ್ ಬಳಿ ಸೇರಿ ಬೆಂಬಲ ವ್ಯಕ್ತಪಡಿಸಲಿದ್ದಾರೆ" ಎಂದು ವಾಟಾಳ್ ನಾಗರಾಜ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.[ಡಬ್ಬಿಂಗ್ ವಿರುದ್ಧ ದನಿಯೆತ್ತಿದ ಜಗ್ಗೇಶ್, ವಾಟಾಳ್ ನಾಗರಾಜ್]

ಬಾಹುಬಲಿ-2 ಸಿನಿಮಾ ಬಿಡುಗಡೆ ಆಗಲಿರುವ ಏಪ್ರಿಲ್ 28ರಂದು ರಾಜ್ಯದಾದ್ಯಂತ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. "ಸಿನಿಮಾ ಪ್ರದರ್ಶಿಸದಂತೆ ಚಿತ್ರಮಂದಿರಗಲ ಮಾಲೀಕರನ್ನು ಮನವಿ ಮಾಡಿದ್ದೇವೆ. ಕರ್ನಾಟಕದಲ್ಲಿ ಸಿನಿಮಾ ಖರೀದಿಸದಂತೆ ವಿತರಕರನ್ನು ಕೇಳಿಕೊಂಡಿದ್ದೇವೆ" ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.

"ನಾವು ಸಿನಿಮಾದ ವಿರೋಧಿಗಳಲ್ಲ. ಆದರೆ ಸತ್ಯರಾಜ್ ಕಡ್ಡಾಯವಾಗಿ ಕ್ಷಮೆ ಯಾಚಿಸಲೇಬೇಕು" ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ. ಸರಕಾರ ಮಧ್ಯಪ್ರವೇಶಿಸಬೇಕು ಮತ್ತು ಸಿನಿಮಾ ತೆರೆ ಕಾಣುವುದಕ್ಕೆ ತಡೆಯೊಡ್ಡಬೇಕು ಎಂದು ಕೂಡ ಅವರು ಒತ್ತಾಯಿಸಿದ್ದಾರೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ










Click it and Unblock the Notifications