ನ.1ರ ರಾಜ್ಯೋತ್ಸವ ಸಾಂಸ್ಕೃತಿಕ ಮೆರವಣಿಗೆಗೆ ಸಜ್ಜಾಗಿದೆ ಮಲ್ಲೇಶ್ವರ
ಬೆಂಗಳೂರು, ಅಕ್ಟೋಬರ್ 23: ಇನ್ನು ಕೆಲವೇ ದಿನಗಳಲ್ಲಿ ಕನ್ನಡ ಮಾಸ ಆರಂಭವಾಗಲಿದೆ. ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ಈಗಾಗಲೇ ಉದ್ಯಾನನಗರಿ ಸಿಂಗರಿಸಿಕೊಂಡಿದ್ದು, ಬೆಂಗಳೂರಿನ ಮಲ್ಲೇಶ್ವರ ಸಾಂಸ್ಕೃತಿಕ ಮೆರವಣಿಗೆಗೆ ಸಜ್ಜಾಗಿದೆ.
ಕರ್ನಾಟಕದ ಜನರಲ್ಲಿ ಕನ್ನಡದ ಜಾಗೃತಿ, ಅಸ್ಮಿತೆಯನ್ನು ಮೂಡಿಸಿದ 1982 ರ ಗೋಕಾಕ್ ಚಳವಳಿಯ ಸ್ಮರಣೆಗಾಗಿ ಈ ಬಾರಿಯ ನವೆಂಬರ್ ಮೊದಲ ದಿನವನ್ನು(92 ನೇ ಕನ್ನಡ ರಾಜ್ಯೋತ್ಸವ) ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಮಲ್ಲೇಶ್ವರ ಶಾಸಕ ಸಿ.ಎನ್.ಅಶ್ವತ್ಥನಾರಾಯಣ್ ತಿಳಿಸಿದ್ದಾರೆ.

ನವೆಂಬರ್ 1 ರ, ಗುರುವಾರ ಬೆಳಿಗ್ಗೆ 10 ಗಂಟೆಗೆ ಮಲ್ಲೇಶ್ವರ ಆಟದ ಮೈದಾನದಿಂದ, ಸಂಪಿಗೆ ರಸ್ತೆಯ ಮೂಲಕ ಸಿಇಟಿ ಸೆಲ್ ಬಳಿ ಇರುವ ವೃತ್ತದವರೆಗೆ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ಇದರೊಟ್ಟಿಗೆ ಮಲ್ಲೇಶ್ವರ 18 ನೇ ಅಡ್ಡರಸ್ತೆಯ ಸಿಇಟಿ ಸೆಲ್ ಎದುರಿನ ವೃತ್ತಕ್ಕೆ 'ಗೋಕಾಕ್ ಚಳವಳಿ ಸ್ಮರಣಾರ್ಥ' ವೃತ್ತ ಎಂದು ಹೆಸರಿಟ್ಟು, ಈ ವೃತ್ತವನ್ನು ಇದೇ ದಿನ ಲೋಕಾರ್ಪಣೆಗೊಳಿಸಲಾಗುತ್ತಿದೆ. ಗೋಕಾಕ್ ಚಳವಳಿಯ ಹರಿಕಾರ, ಕನ್ನಡದ ವರನಟ ಡಾ.ರಾಜಕುಮಾರ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಗುತ್ತಿದೆ.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಗೋಕಾಕ್ ಚಳುವಳಿ ಸ್ಮರಣಾರ್ಥ ಸಾಂಸ್ಕೃತಿಕ ಮೆರವಣಿಗೆಯೊಂದಿಗೆ ಮಲ್ಲೇಶ್ವರಂನ 18ನೇ ಅಡ್ಡರಸ್ತೆಯಲ್ಲಿ 'ಗೋಕಾಕ್ ಚಳುವಳಿ ಸ್ಮರಣಾರ್ಥ ವೃತ್ತ' ದ ಲೋಕಾರ್ಪಣೆ ಮತ್ತು ವರನಟ ಡಾ. ರಾಜ್ ಕುಮಾರ್ ರವರ ಪುತ್ಥಳಿ ಅನಾವರಣ ಕಾರ್ಯಕ್ರಮ.
— Dr. Ashwathnarayan (@drashwathcn) October 22, 2018
ಸ್ಥಳ: ಸಿಇಟಿ ಸೆಲ್ ಬಳಿ, 18 ನೇ Cross, ಮಲ್ಲೇಶ್ವರಂ
ದಿನಾಂಕ: Nov 1 | 11 AM pic.twitter.com/VlRG4EkGf1
ಈ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ವಿಜಯ ಪ್ರಕಾಶ್ ಮತ್ತು ತಂಡದವರು ಸಂಗಿತ ಸುಧೆ ಹರಿಸಲಿದ್ದು, ಗೋಕಾಕ್ ಚಳವಳಿ ಕುರಿತು ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಸಹೃದಯ ಕನ್ನಡಾಭಿಮಾನಿಗಳು ಬಂದು ಈ ಕನ್ನಡದ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಬೇಕಾಗಿ ಶಾಸಕ ಅಶ್ವತ್ಥನಾರಾಯಣ್ ಅವರು ಕೋರಿದ್ದಾರೆ.
1982 ರಲ್ಲಿ ಸಾಮಾನ್ಯ ಜನತೆಯಲ್ಲೂ ಕನ್ನಡ ಜಾಗೃತಿ ಮೂಡಿಸಿದ್ದ ಗೋಕಾಕ್ ಚಳುವಳಿ, ಡಾ. ರಾಜ್ ಕುಮಾರ್ ರವರ ಮುಂದಾಳತ್ವದ ಪಾಲ್ಗೊಳ್ಳುವಿಕೆಯಿಂದ ಮನೆ ಮನೆಗೂ ತಲುಪುವಂತಾಗಿತ್ತು. ಈ ಯಶಸ್ವಿ ಚಳುವಳಿಯನ್ನು ಮೆಲುಕು ಹಾಕಿ, ಕನ್ನಡದ ವೈಭವದ ಚರಿತ್ರೆಯ ಪುಟವನ್ನು ಇಂದಿನ ಜನಾಂಗಕ್ಕೆ ಪರಿಚಯಿಸಬೇಕಿದೆ.#KannadaRajyotsava #Kannada #DrRajkumar pic.twitter.com/GHmtUjQiI5
— Dr. Ashwathnarayan (@drashwathcn) October 22, 2018
ಗೋಕಾಕ್ ಚಳವಳಿಯ ಮಹತ್ವವನ್ನು ಕಿರುವಿಡಿಯೋ ಮೂಲಕ ತಿಳಿಸಿರುವ ಅಶ್ವತ್ಥನಾರಾಯಣ್ ಅವರು
"1982 ರಲ್ಲಿ ಸಾಮಾನ್ಯ ಜನತೆಯಲ್ಲೂ ಕನ್ನಡ ಜಾಗೃತಿ ಮೂಡಿಸಿದ್ದ ಗೋಕಾಕ್ ಚಳುವಳಿ, ಡಾ. ರಾಜ್ ಕುಮಾರ್ ರವರ ಮುಂದಾಳತ್ವದ ಪಾಲ್ಗೊಳ್ಳುವಿಕೆಯಿಂದ ಮನೆ ಮನೆಗೂ ತಲುಪುವಂತಾಗಿತ್ತು. ಈ ಯಶಸ್ವಿ ಚಳುವಳಿಯನ್ನು ಮೆಲುಕು ಹಾಕಿ, ಕನ್ನಡದ ವೈಭವದ ಚರಿತ್ರೆಯ ಪುಟವನ್ನು ಇಂದಿನ ಜನಾಂಗಕ್ಕೆ ಪರಿಚಯಿಸಬೇಕಿದೆ" ಎಂದು ಟ್ವೀಟ್ ಮಾಡಿದ್ದಾರೆ.
ನ.1 ರ ಕಾರ್ಯಕ್ರಮದಲ್ಲಿ ವಿವಿಧ ಸಾಹಿತಿಗಳು, ನಟರು ಸೇರಿದಂತೆ ಖ್ಯಾತನಾಮರು ಭಾಗವಹಿಸಲಿದ್ದಾರೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications