ಬಿಎಸ್ವೈ ಸರ್ಕಾರ ಬಹುಮತ ಪಡೆದರೆ, ಅಕಾಡೆಮಿ ಅಧ್ಯಕ್ಷರ ನಿರ್ಗಮನ
ಬೆಂಗಳೂರು, ಜುಲೈ 26: "ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದರೆ ದೇಶ ತೊರೆಯುವೆ, ಪ್ರಶಸ್ತಿ ಹಿಂತಿರುಗಿಸುವೆ...", ಮುಂತಾದ ಅಸಹಿಷ್ಣುತೆಗಳ ಗಾಳಿ ಈಗ ಕರ್ನಾಟಕವನ್ನು ತಲುಪಿದೆ.
ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ವಿಶ್ವಾಸಮತ ಕಳೆದುಕೊಂಡ ಬಳಿಕ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಅಧಿಕಾರಕ್ಕೇರಲು ಮುಂದಾಗಿದೆ. ಈ ನಡುವೆ ಸರ್ಕಾರ ಅಸ್ತಿತ್ವಕ್ಕೆ ಬರುವ ಮೊದಲೇ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ನಿರ್ಗಮನದ ಸುಳಿವು ನೀಡಿದ್ದಾರೆ.
"ಹೊಸ ಸರ್ಕಾರ ತನ್ನ ಬಹುಮತ ಮಾಡಿದ ತಕ್ಷಣವೇ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುತ್ತೇನೆ" ಎಂದು 'ಅವಧಿ' ವೆಬ್ ಸೈಟ್ ನ ವಿಡಿಯೋ ಸಂವಾದದಲ್ಲಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅರವಿಂದ ಮಾಲಗತ್ತಿ ಘೋಷಿಸಿದ್ದಾರೆ.

'ಅವಧಿ' ಸಾಹಿತ್ಯ ಪತ್ರಿಕೆ ಪ್ರಧಾನ ಸಂಪಾದಕ ಜಿ ಎನ್ ಮೋಹನ್ ನಡೆಸಿಕೊಟ್ಟ ವಿಡಿಯೋ ಸಂವಾದದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅರವಿಂದ ಮಾಲಗತ್ತಿ, "ಹೊಸ ಸರ್ಕಾರ ಬಂದ ತಕ್ಷಣ ರಾಜೀನಾಮೆ ನೀಡಬೇಕು ಎನ್ನುವ ನಿರ್ಬಂಧವೇನೂ ಇಲ್ಲ. ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಸಮಿತಿ ನೀಡಿದ ಶಿಫಾರಸು ಕೂಡ ಯಾವುದೇ ಅಧ್ಯಕ್ಷರು 3 ವರ್ಷದ ತಮ್ಮ ಅವಧಿ ಸಂಪೂರ್ಣಗೊಳಿಸುವ ಬಗ್ಗೆ ಒತ್ತು ನೀಡಿದೆ. ಆದರೆ, ನಾನು ನೈತಿಕತೆಯ ಪ್ರಶ್ನೆಯನ್ನಿಟ್ಟಿಕೊಂಡು ರಾಜೀನಾಮೆ ನೀಡುತ್ತೇನೆ" ಎಂದು ಹೇಳಿದರು. ವಿಡಿಯೋ ತುಣುಕು ಈ ಸುದ್ದಿಯೊಂದಕ್ಕೆ ಲಗತ್ತಿಸಲಾಗಿದೆ, ಆಸಕ್ತರು ವೀಕ್ಷಿಸಬಹುದು.
2017ರಿಂದ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಮುದ್ದೇಬಿಹಾಳ ಮೂಲದ ಮಾಲಗತ್ತಿ, ಕಥೆ, ಕವನ, ಕಾದಂಬರಿ, ನಾಟಕ, ಸಂಶೋಧನೆ, ಸಂಪಾದನೆ ಮುಂತಾದ ಸಾಹಿತ್ಯ ಪ್ರಕಾರಗಳಲ್ಲಿ 65ಕ್ಕೂ ಅಧಿಕ ಕೃತಿಗಳನ್ನು ಹೊರ ತಂದಿದ್ದಾರೆ. ಜಾನಪದ ಗಾಯಕ, ನಟರಾಗಿ ಕೂಡಾ ಕಾಣಿಸಿಕೊಂಡಿದ್ದಾರೆ.
-
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ












Click it and Unblock the Notifications