Get Updates
Get notified of breaking news, exclusive insights, and must-see stories!

ಜೂನ್‌ನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಶತಮಾನೋತ್ಸವ

Kannada Sahitya parishat
ಬೆಂಗಳೂರು, ಮೇ 5: ಕನ್ನಡ ಸಾಹಿತ್ಯ ಪರಿಷತ್‌ ಶತಮಾನೋತ್ಸವ ಸಮಾರಂಭದ ಉದ್ಘಾಟನಾ ಕಾರ್ಯ‌ಕ್ರಮ ಜೂನ್‌ ತಿಂಗಳಿನಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಪುಂಡಲೀಕ ಹಾಲಂಬಿ ತಿಳಿಸಿದ್ದಾರೆ.

ಧಾರವಾಡದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕಾರ್ಯ‌ಕ್ರಮವನ್ನು ಉದ್ಘಾಟಿಸಲಿದ್ದು, ಎರಡು ದಿನಗಳ ಕಾಲ ನಡೆಯಲಿರುವ ಈ ಕಾರ್ಯ‌ಕ್ರಮದಲ್ಲಿ ಹಿಂದಿನ, ಇಂದಿನ ಮತ್ತು ಭವಿಷ್ಯದ ಕನ್ನಡ ಭಾಷೆಗೆ ಸಂಬಂಧಿಸಿದ ವಿಚಾರಗೋಷ್ಠಿಗಳು ನಡೆಯಲಿವೆ. ಶತಮಾನೋತ್ಸವದ ಸಮಾರೋಪ ಕಾರ್ಯ‌ಕ್ರಮ ಮೈಸೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಹಾಲಂಬಿ ಹೇಳಿದರು.[ಕನ್ನಡ ಸಾಹಿತ್ಯ ಪರಿಷತ್ತು ನಡೆದ ಬಂದ ದಾರಿ]

ಕನ್ನಡ ಸಾಹಿತ್ಯ ಪರಿಷತ್‌ ನೂರು ವರ್ಷದ ಹೆಜ್ಜೆ ಗುರುತನ್ನು ವಿವರಿಸುವ ಸಾಕ್ಷ್ಯಚಿತ್ರವನ್ನು ಸಂಗೀತಾ ನಿರ್ದೇಶಕ ಹಂಸಲೇಖಾ ನಿರ್ದೆಶಿಸಿದ್ದಾರೆ. ಸಮಾರಂಭದ ಪ್ರಯುಕ್ತ, ಎರಡು ದಿನ ಬೆಂಗಳೂರಿನಲ್ಲಿ ಹಲ್ಮಿಡಿ ಹಬ್ಬವನ್ನು ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಶತಮಾನತ್ಸೋವ ಸಮಾರಂಭ:ಕನ್ನಡ ಸಾಹಿತ್ಯ ಪರಿಷತ್‌ನ ಶತಮಾನೋತ್ಸವ ಸಮಾರಂಭವನ್ನು 2014-15ರ ಸಾಲಿನಲ್ಲಿ ಒಂದು ವರ್ಷಗಳ ಕಾಲ ರಾಜ್ಯದ ನಾನಾ ಭಾಗಗಳಲ್ಲಿ ನಡೆಯಲಿದೆ. ಈ ಸಮಾರಂಭಕ್ಕೆ ರಾಜ್ಯ ಸರ್ಕಾರ 10 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿದೆ. ಅನುದಾನದಲ್ಲಿ ಬೆಂಗಳೂರಿನಲ್ಲಿ 5 ಕೋಟಿ ರೂಪಾಯಿಯಲ್ಲಿ ಶತಮಾನೋತ್ಸವ ಭವನ ನಿರ್ಮಾಣವಾಗಲಿದೆ.

ಒಂದು ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಕನ್ನಡ ಸಾಹಿತ್ಯದ ಕಾವ್ಯ, ನಾಟಕ, ಸಣ್ಣಕಥೆ ಮುಂತಾದ ಕನ್ನಡ ಸಾಹಿತ್ಯದ ಸಂಪುಟಗಳ ಪ್ರಕಟಣೆ, ಒಂದು ಕೋಟಿ ರೂ. ವೆಚ್ಚದಲ್ಲಿ 3 ಮೌಲಿಕ ಗ್ರಂಥಗಳು ಪ್ರಕಟಣೆಯಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+