ಕನ್ನಡ ವಿಜ್ಞಾನ ಬರಹಗಾರರಿಗೆ ಸಮ್ಮೇಳನ ಕಮ್ ಕಾರ್ಯಾಗಾರ
ಬೆಂಗಳೂರು, ಏ,.22: ಕನ್ನಡ ವಿಜ್ಞಾನ ಬರಹಗಾರರು ವ್ಯವಸ್ಥಿತವಾಗಿ ಕೆಲಸ ಮಾಡಿದರೆ ವಿಜ್ಞಾನ ಸಾಹಿತ್ಯವನ್ನು ಸರಿಯಾದ ರೀತಿಯಲ್ಲಿ ಬೆಳೆಸಲು ಸಾಧ್ಯ ಎಂಬ ಆಶಯದಿಂದ ಮೇ 16ರಂದು ಬೆಂಗಳೂರಿನಲ್ಲಿ ಕನ್ನಡ ವಿಜ್ಞಾನ - ತಂತ್ರಜ್ಞಾನ ಬರಹಗಾರರ ಸಮ್ಮೇಳನ ಮತ್ತು ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ವಿಜ್ಞಾನ ಸಂವಹನ ಕ್ಷೇತ್ರದ ಪರಿಣತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಸಕ್ತರಿಗೆ ಮಾರ್ಗದರ್ಶನ ನೀಡಲಿದ್ದಾರೆ.
ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ ಶಾಸ್ತ್ರಗಳಲ್ಲಿ ಅಭೂತಪೂರ್ವ ಬೆಳವಣಿಗೆಗಳು ನಡೆಯುತ್ತಿವೆ. ಇವುಗಳನ್ನು ಕುರಿತು ಕನ್ನಡದಲ್ಲಿ ಬರೆಯುವವರ ಸಂಖ್ಯೆ ವಿರಳವಾಗಿದೆ. ವಿಶ್ವಕೋಶಗಳು, ವಿಕಿಪೀಡಿಯಾ, ಪಠ್ಯಪುಸ್ತಕಗಳು, ಇ-ಪುಸ್ತಕಗಳು, ವಿಜ್ಞಾನ ಪತ್ರಿಕೆಗಳು, ಜನಪ್ರಿಯ ಪತ್ರಿಕೆಗಳಲ್ಲಿ ವಿಜ್ಞಾನ ಲೇಖನಗಳು, ಬ್ಲಾಗ್ ಬರಹಗಳು, ವಿಜ್ಞಾನ ಕಥಾಸಾಹಿತ್ಯ, ... ಹೀಗೆ ವಿಜ್ಞಾನ ಬರಹಗಾರರಿಗೆ ಲಭ್ಯವಾಗಿರುವ ಮಾಧ್ಯಮಗಳು ಹಲವಾರು. [ಅಂತರಿಕ್ಷದಲ್ಲಿವೆ ಒಟ್ಟು 8 ವಾಸಯೋಗ್ಯ ಭೂಮಿಗಳು!]
ಕಾರ್ಯಕ್ರಮ ಬಾಗ್ಮನೆ ಟೆಕ್ ಪಾರ್ಕ್ನಲ್ಲಿರುವ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಚೇರಿಯಲ್ಲಿ ನಡೆಯಲಿದ್ದು ತಾಣದಲ್ಲಿ ಮುಂಚಿತವಾಗಿಯೇ ನೋಂದಾಯಿಸಿಕೊಂಡ ಆಸಕ್ತರು ಇದರಲ್ಲಿ ಭಾಗವಹಿಸಬಹುದು. ಕಾರ್ಯಕ್ರಮದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇಲ್ಲ. ನೋಂದಾಯಿಸಲು ಇಲ್ಲಿ ಕ್ಲಿಕ್ ಮಾಡಿ
ಕಾರ್ಯಕ್ರಮ ಆಯೋಜಕರು
* ಡಾ. ಸಿ. ಪಿ. ರವಿಕುಮಾರ್ ,ಡಾ. ಯು.ಬಿ. ಪವನಜ,ಟಿ.ಜಿ. ಶ್ರೀನಿಧಿ,ಸುಧೀಂದ್ರ ಹಾಲ್ದೊಡ್ಡೇರಿ, ರವಿಕಿರಣ್ ಎ.
* ಸಂಪರ್ಕ [email protected]
ಸಹಕಾರ: IEEE ಬೆಂಗಳೂರು ವಿಭಾಗ, ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಸಂಸ್ಥೆ
* ಕನ್ನಡ ವಿಜ್ಞಾನ /ತಂತ್ರಜ್ಞಾನ ಬರಹಗಾರರ ಸಮ್ಮೇಳನ/ಕಾರ್ಯಾಗಾರ - 2015
* ಮೇ 16, ಶನಿವಾರ
* ಸ್ಥಳ - ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಚೇರಿ, ಬಾಗ್ಮನೆ ಟೆಕ್ ಪಾರ್ಕ್, ಸಿ ವಿ ರಾಮನ್ ನಗರ, ಬೆಂಗಳೂರು 560093.

ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ ಶಾಸ್ತ್ರಗಳಲ್ಲಿ ಅಭೂತಪೂರ್ವ ಬೆಳವಣಿಗೆಗಳು ನಡೆಯುತ್ತಿವೆ. ಇವುಗಳನ್ನು ಕುರಿತು ಕನ್ನಡದಲ್ಲಿ ಬರೆಯುವವರ ಸಂಖ್ಯೆ ವಿರಳವಾಗಿದೆ. ವಿಶ್ವಕೋಶಗಳು, ವಿಕಿಪೀಡಿಯಾ, ಪಠ್ಯಪುಸ್ತಕಗಳು, ಇ-ಪುಸ್ತಕಗಳು, ವಿಜ್ಞಾನ ಪತ್ರಿಕೆಗಳು, ಜನಪ್ರಿಯ ಪತ್ರಿಕೆಗಳಲ್ಲಿ ವಿಜ್ಞಾನ ಲೇಖನಗಳು, ಬ್ಲಾಗ್ ಬರಹಗಳು, ವಿಜ್ಞಾನ ಕಥಾಸಾಹಿತ್ಯ, ... [ವಿಜ್ಞಾನ, ತಂತ್ರಜ್ಞಾನ ಬಿಟ್ಟು ಅಭಿವೃದ್ಧಿ ಅಸಾಧ್ಯ : ಮೋದಿ]
ಹೀಗೆ ವಿಜ್ಞಾನ ಬರಹಗಾರರಿಗೆ ಲಭ್ಯವಾಗಿರುವ ಮಾಧ್ಯಮಗಳು ಹಲವಾರು. ಕನ್ನಡ ವಿಜ್ಞಾನ ಬರಹಗಾರರು ವ್ಯವಸ್ಥಿತವಾಗಿ ಕೆಲಸ ಮಾಡಿದರೆ ವಿಜ್ಞಾನ ಸಾಹಿತ್ಯವನ್ನು ಸರಿಯಾದ ರೀತಿಯಲ್ಲಿ ಬೆಳೆಸಲು ಸಾಧ್ಯ ಎಂಬ ಆಶಯದಿಂದ ಈ ಶಿಬಿರವನ್ನು ಆಯೋಜಿಸಲಾಗುತ್ತಿದೆ. ಈಗಾಗಲೇ ವಿಜ್ಞಾನ ಸಾಹಿತ್ಯ ಬರೆಯುತ್ತಿರುವವರಿಗೆ ಆದ್ಯತೆ.
ಶಿಬಿರಾರ್ಥಿಗಳಿಗೆ ಸೂಚನೆಗಳು
* ಕಾರ್ಯಕ್ರಮದಲ್ಲಿ ಭಾಗವಹಿಸಲು ಯಾವ ಶುಲ್ಕವಿಲ್ಲ.
* ಮುಂಚಿತವಾಗಿ ನೋಂದಣಿ ಮಾಡುವುದು ಕಡ್ಡಾಯ.
* ನಿಮ್ಮನ್ನು ಮೇ 7ರ ಮುನ್ನ ಇ-ಮೇಲ್ ಮೂಲಕ ಸಂಪರ್ಕಿಸಲಾಗುವುದು.
* ಕಾರ್ಯಕ್ರಮ ಇರುವ ಸ್ಥಳ ಎಲ್ಆರ್ಡಿಈ ಕಚೇರಿಯ ಬಳಿ ಇದೆ; ಬೆಂಗಳೂರಿನ ಹಳೆಯ ವಿಮಾನ ನಿಲ್ದಾಣಕ್ಕೆ ಹತ್ತಿರವಾಗುತ್ತದೆ.
[ವಿಶ್ವ ಸೃಷ್ಟಿಸಿದ ದೇವಕಣ ವಿಶ್ವವನ್ನೇ ನಾಶ ಮಾಡಬಲ್ಲದೆ?]
* ಬೆಳಗಿನ ಉಪಾಹಾರ, ಊಟ ಮತ್ತು ಕಾಫಿಯ ವ್ಯವಸ್ಥೆ ಇರುತ್ತದೆ.
* ಬರುವ/ಹೋಗುವ ವೆಚ್ಚವನ್ನು ದಯವಿಟ್ಟು ನೀವೇ ವಹಿಸಿಕೊಳ್ಳಬೇಕು.
* ಕಾರ್ಯಕ್ರಮದಲ್ಲಿ ನೀವು ಬರೆದ ಪುಸ್ತಕಗಳ/ಲೇಖನಗಳ/ಬ್ಲಾಗ್ ಬರಹಗಳ ಪ್ರದರ್ಶನಕ್ಕೆ ಅವಕಾಶವಿದೆ;
* ಎಷ್ಟು ಪುಸ್ತಕ ತರುತ್ತೀರಿ ಎಂದು ಮುಂಚೆ ತಿಳಿಸಿದರೆ ಅನುಕೂಲ.
* ಲೇಖನ ಬರೆಯುವ ಶಿಬಿರಕ್ಕಾಗಿ ಮೊದಲೇ ನೀವು ಬರೆಯುವ ವಿಷಯದ ಬಗ್ಗೆ ಮಾಹಿತಿ ಕಲೆ ಹಾಕಿಕೊಂಡು ಬರಬೇಕು.
* ಚರ್ಚೆ ಸಮಯದಲ್ಲಿ ಕೇಳಬೇಕೆಂದುಕೊಂಡ ಪ್ರಶ್ನೆಗಳನ್ನು ಗುರುತು ಹಾಕಿಕೊಂಡು ಬರುವುದು ಅಥವಾ ಮುಂಚಿತವಾಗಿ ಆಯೋಜಕರಿಗೆ ಕಳಿಸುವುದು ಒಳ್ಳೆಯದು.
(ಒನ್ ಇಂಡಿಯಾ ಸುದ್ದಿ)












Click it and Unblock the Notifications