ಪೊಲೀಸರ ಮೇಲೆ ಹಲ್ಲೆ ಮಾಡಿದ 'ಕನ್ನಡ ಸೇನೆ' ಪುಂಡರು
ಬೆಂಗಳೂರು, ನವೆಂಬರ್ 21 ; ಪುಂಡ ಕನ್ನಡ ಸೇನೆ ಕಾರ್ಯಕರ್ತರು ಪೊಲೀಸರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಮಹಾಲಕ್ಷ್ಮಿ ಬಡಾವಣೆಯಲ್ಲಿ ನಡೆದಿದೆ.
ಮಹಾಲಕ್ಷ್ಮಿ ಬಡಾವಣೆಯ ಸೋಮೇಶ್ವರ ಬಡಾವಣೆಯಲ್ಲಿ ಕನ್ನಡ ಸೇನೆ ಕಾರ್ಯಕರ್ತರು ಕನ್ನಡ ರಾಜ್ಯೋತ್ಸವ ಮಾಡಿ ಜೋರಾಗಿ ಹಾಡು ಹಾಕಿ, ಕುಡಿದು ಗಲಾಟೆ ಮಾಡುತ್ತಿದ್ದರು. ಇದನ್ನು ಪ್ರಶ್ನಿಸಿದ ಬೀಟ್ ಪೊಲೀಸರ ಮೇಲೆ ಈ ಪುಂಡರ ತಂಡ ಹಲ್ಲೆ ಮಾಡಿದೆ.

ಹೆಡ್ ಕಾನ್ಸ್ಟೇಬಲ್ ಸೋಮಶೇಖರ್, ಪೇದೆ ಮಂಜಪ್ಪ ಅವರುಗಳು ಪುಂಡ ಕನ್ನಡ ಸೇನೆ ಕಾರ್ಯಕರ್ತರನ್ನು "ಗಲಾಟೆ ಮಾಡ್ಬೇಡಿ ಎಂದು ಹೇಳಿದ್ದರು' ಅಷ್ಟೆ ಆದರೆ ಇಷ್ಟಕ್ಕೆ ಕೋಪ ಗೊಂಡ ಆಗಲೆ ಕಂಠಪೂರ್ತಿ ಕುಡಿದಿದ್ದ ಕನ್ನಡ ಸೇನೆ ಮಹಾಲಕ್ಷ್ಮಿ ಲೇಔಟ್ ಎಪಿಎಂಸಿ ಘಟಕದ ಅದ್ಯಕ್ಷ ಗೊವಿಂದರಾಜು ಮತ್ತು ಮಗ ಸುರೇಶ್, ಖಜಾಂಚಿ ವಾಜಿರಳ್ಳಿ ಬಾಲು ,ಮತ್ತು ಚಂದ್ರು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ.
ಅಲ್ಲಿಯೇ ಬಿದ್ದ ದೊಣ್ಣೆಯಿಂದ ಪೇದೆ ಮಂಜಪ್ಪ ಮತ್ತು ಸೋಮಶೇಖರ್ ಅವರುಗಳಿಗೆ ಮನಸೋಇಚ್ಛೆ ಬಡಿದು, ಅವರ ಸಮವಸ್ತ್ರ ಹರಿದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪಿಎಸ್ಐ ವೆಂಕಟರಮಣಪ್ಪ ಮತ್ತು ಪೇದೆ ಉಮೇಶ್ ಅವರ ಮೇಲೂ ಎಗರಾಡಿದ ಪುಂಡ ಕನ್ನಡ ಸೇನೆ ಕಾರ್ಯಕರ್ತರ ಗುಂಫು ಎಸ್.ಐ ವೆಂಕಟರಮಪ್ಪ ಅವರನ್ನು 'ನೀನು ಯಾವ ಪೊಲೀಸ್ ಹೋಗಲೇ' ಎಂದೆಲ್ಲಾ ತುಚ್ಛವಾಗಿ ಮಾತನಾಡಿದ್ದಾರೆ.
ನಂತರ ಮಹಾಲಕ್ಷ್ಮಿ ಲೇಔಟ್ ಇನ್ಸ್ಪೆಕ್ಟರ್ ಲೋಹಿತ್ ಸ್ಥಳಕ್ಕಾಗಮಿಸಿ, ಗೋವಿಂದರಾಜು , ಸುರೇಶ್ , ಚಂದ್ರ ಅವರುಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ದ IPC ಸೆಕ್ಷನ್ 43, 504, 332, 353 ಅಡಿಯಲ್ಲಿ ಕೇಸು ದಾಖಲಿಸಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications