ತಮಿಳು ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ ನೀಗಿಸಲು ಕ್ರಮ: ಸಿಎಂ

ಬೆಂಗಳೂರು, ಜನವರಿ 29: ನಗರದಲ್ಲಿನ ತಮಿಳು ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ ನೀಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಸಂತ ಕವಿ ತಿರುವಳ್ಳುವರ್ ಅವರ ದಿನದ ಅಂಗವಾಗಿ ಹಲಸೂರಿನಲ್ಲಿರುವ ತಿರುವಳ್ಳುವರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮುಖ್ಯಮಂತ್ರಿಯವರು ಮಾತನಾಡಿದರು.

ಬೆಂಗಳೂರಿನಲ್ಲಿ ತಮಗೆ ಜಾಗ ನೀಡುವಂತೆ ತಮಿಳು ಸಂಘ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದೆ. ಸರ್ಕಾರಿ ಜಾಗವನ್ನು ಗುರುತಿಸಿ ಸಂಘಕ್ಕೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

CM

ಬೆಂಗಳೂರು ಹಾಗೂ ಚನ್ನೈನಲ್ಲಿ ತಿರುವಳ್ಳುವರ್ ಅವರ ಪ್ರತಿಮೆ ಇದೆ. ತಿರುವಳ್ಳುವರ್ ಅವರ ಪ್ರತಿಮೆ ತಮಿಳುನಾಡು ಹಾಗೂ ಕರ್ನಾಟಕದ ಬಾಂಧವ್ಯವನ್ನು ಬೆಸೆದಿದೆ. ಭಾಷೆ ಮನುಷ್ಯನ ಅಭಿವ್ಯಕ್ತಿ ಸಾಧನ. ಭಾಷೆ ಎಂಬುದು ಭಾವನೆಗಳನ್ನು ಕೆರಳಿಸಬಾರದು. ಬಾಂಧವ್ಯ ಬೆಸೆಯಬೇಕು.

ನಮ್ಮ ರಾಜ್ಯದಲ್ಲಿರುವ ತಮಿಳು ಭಾಷಿಕರು ಕನ್ನಡ ಕಲಿತು ಕನ್ನಡಿಗರ ಜೊತೆಗೆ ಉತ್ತಮ ಬಾಂಧವ್ಯದಿಂದ ಇದ್ದಾರೆ. ಈ ಸಂದರ್ಭದಲ್ಲಿ ತಮಿಳು ಭಾಷಿಕರು ಹಾಗೂ ರಾಜ್ಯದ ಜನತೆಗೆ ತಿರುವಳ್ಳುವರ್ ದಿನದ ಶುಭಾಷಯ ಕೋರುತ್ತೇನೆ.

ಮುಖ್ಯಮಂತ್ರಿಯಾದ ಬಳಿಕ ಪ್ರತಿವರ್ಷ ಇಲ್ಲಿಗೆ ಬಂದು ತಿರುವಳ್ಳುವರ್ ಅವರಿಗೆ ಗೌರವ ಸಲ್ಲಿಸುತ್ತೇನೆ. 9 ವರ್ಷದ ಹಿಂದೆ ಪ್ರತಿಮೆ ಆನಾವರಣ ಆದಾಗಲೂ ಪ್ರತಿಪಕ್ಷ ನಾಯಕನಾಗಿ ಇಲ್ಲಿಗೆ ಬಂದಿದ್ದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+