'ನಾನು ಮಲಾಲಾ' ಕನ್ನಡ ಪುಸ್ತಕ ಬಿಡುಗಡೆ
ಬೆಂಗಳೂರು, ಅ. 18 : ಇಡೀ ರಾಷ್ಟ್ರವೇ ತಾಲಿಬಾನ್ ಕಪಿಮುಷ್ಠಿಯಲ್ಲಿ ನಲುಗುತ್ತಿದ್ದಾಗ, ಏಕಾಂಗಿಯಾಗಿ ಭಯೋತ್ಪಾದನೆಯ ವಿರುದ್ಧ ದನಿಯೆತ್ತಿದ ಪಾಕಿಸ್ತಾನದ ವೀರ ಬಾಲಕಿ ಮಲಾಲಾ ಯೂಸಫ್ಝಾಯಿ ಆತ್ಮಕಥೆ 'ಐ ಆಮ್ ಮಲಾಲಾ' ಪುಸ್ತಕದ ಕನ್ನಡ ಅವತರಣಿಕೆ 'ನಾನು ಮಲಾಲಾ' ಅ.19, ಭಾನುವಾರ ಬೆಂಗಳೂರಿನಲ್ಲಿ ಬಿಡುಗಡೆಯಾಗುತ್ತಿದೆ.
2014ನೇ ಸಾಲಿನ ನೊಬೆಲ್ ಶಾಂತಿ ಪುರಸ್ಕಾರವನ್ನು ಮಲಾಲಾ ಪಡೆದಿರುವ ಸಂದರ್ಭದಲ್ಲಿಯೇ ಮಲಾಲಾ ಆತ್ಮಕಥೆ ಕನ್ನಡದಲ್ಲಿ ಬಿಡುಗಡೆಯಾಗುತ್ತಿರುವುದು ವಿಶೇಷ. ಕ್ರಿಸ್ಟಿನಾ ಲ್ಯಾಂಬ್ ಮೂಲ ನಿರೂಪಣೆಯಿರುವ ಪುಸ್ತಕವನ್ನು ಕನ್ನಡಕ್ಕೆ ಭಾಷಾಂತರಿಸಿರುವುದು ಪತ್ರಕರ್ತ ಬಿ.ಎಸ್. ಜಯಪ್ರಕಾಶ ನಾರಾಯಣ.

ಕುಮಾರಕೃಪಾ ರಸ್ತೆ, ಶಿವಾನಂದ ಸರ್ಕಲ್ ಬಳಿಯಿರುವ ಚಿತ್ರಕಲಾ ಪರಿಷತ್ತಿನಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಖ್ಯಾತ ಕವಿ ಸಿದ್ದಲಿಂಗಯ್ಯ ಅವರು ಬಿಡುಗಡೆ ಮಾಡಲಿದ್ದಾರೆ. ಪ್ರಸಿದ್ಧ ಲೇಖಕ ಬೋಳುವಾರು ಮೊಹಮ್ಮದ್ ಕುಂಞ ಮತ್ತು ಸಂಸ್ಕೃತಿ ಚಿಂತಕರಾದ ಡಾ. ಜಿ.ಬಿ. ಹರೀಶ ಅವರು ಉಪಸ್ಥಿತರಿರಲಿದ್ದಾರೆ.
ರಾಜಾಜಿನಗರದ ಆಕೃತಿ ಪುಸ್ತಕ ಪ್ರಕಟಿಸಿರುವ ಈ ಪುಸ್ತಕದ ಬೆಲೆ 250 ರು. ಮಾತ್ರ. [ನೊಬೆಲ್ ಪುರಸ್ಕಾರ ಬಂದಿದ್ದು ಹೇಗೆ?]
ಲಂಡನ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪಾಕಿಸ್ತಾನದ 19 ವರ್ಷದ ದಿಟ್ಟ ಯುವತಿ ಮಲಾಲಾ ಮತ್ತು ಭಾರತದ ಮಕ್ಕಳ ಹಕ್ಕಿಗಾಗಿ ಹೋರಾಟ ನಡೆಸುತ್ತಿರುವ 60 ವರ್ಷದ ಕೈಲಾಶ್ ಸತ್ಯಾರ್ಥಿ ಅವರು ಜಂಟಿಯಾಗಿ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications