ಕನ್ನಡ ಕಿರುತೆರೆ ನಟಿ ಶೃತಿ ಅನುಮಾನಾಸ್ಪದ ರೀತಿಯಲ್ಲಿ ಸಾವು
ಬೆಂಗಳೂರು, ಮಾ. 01: ಕಿರುತೆರೆ ನಟಿ ಶೃತಿ (24) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಸೋಮವಾರ ಸ್ನೇಹಿತಯೊಬ್ಬರ ಜೊತೆಗೆ ತೆರಳಿದ್ದರು. ಮಂಗಳವಾರ ಬೆಳಗ್ಗೆ ಕಾಚೋಹಳ್ಳಿ ಬಳಿ ಇರುವ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶೃತಿ ಅವರ ಶವ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಶೃತಿ ಅವರ ಸ್ನೇಹಿತ ಶ್ರೀಕಾಂತ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಅವನು ಮತ್ತೆ ಶ್ರಾವಣಿ ಧಾರಾವಾಹಿಯಲ್ಲಿ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದ ಶೃತಿ ಅವರನ್ನು ಸೋಮವಾರ ಅವರ ಸ್ನೇಹಿತ ಶ್ರೀಕಾಂತ್ ಅವರ ಜೊತೆ ತೆರಳಿದ್ದರು. ಇಬ್ಬರು ಪಾರ್ಟಿಯೊಂದರಲ್ಲಿ ಪಾಲ್ಗೊಂಡಿದ್ದರು. ನಂತರ ಶ್ರೀಕಾಂತ್ ಅವರ ಮನೆಗೆ ಹೋಗಿದ್ದ ಶೃತಿ ತನ್ನ ಮನೆಗೆ ಮರಳಿರಲಿಲ್ಲ. ಈ ಪಾರ್ಟಿಯಲ್ಲಿ ಶ್ರೀಕಾಂತ್ ಹಾಗು ಶೃತಿ ನಡುವೆ ಗಲಾಟೆಯಾಗಿತ್ತು ಎಂಬ ಮಾಹಿತಿ ಇದೆ. [ಕನ್ನಡ ಚಿತ್ರರಂಗಕ್ಕೆ ಕಾಡುತ್ತಿರುವ ಆತ್ಮಹತ್ಯೆ ಎಂಬ ಭೂತ!]

ಸ್ನೇಹಿತನ ಜತೆಗೆ ಹೋದ ಮಗಳು ಹಿಂತಿರುಗಿ ಬಾರದಿದ್ದಾಗ ಆತಂಕಗೊಂಡ ಶೃತಿ ಮನೆಯವರು ಕಾಚೋಹಳ್ಳಿಗೆ ಬಂದು ನೋಡಿದಾಗ ಶೃತಿ ಶವವಾಗಿ ಪತ್ತೆಯಾಗಿದ್ದಾರೆ.
ನೆಲಮಂಗಲದ ಕಾಚೋಹಳ್ಳಿಯಲ್ಲಿ ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಸುವರ್ಣ ಟಿವಿಯಲ್ಲಿ ಪ್ರಸಾರವಾಗುವ ಅವನು ಮತ್ತೆ ಶ್ರಾವಣಿ ಧಾರಾವಾಹಿಯಲ್ಲಿ ಯಾವಾಗ ಶೃತಿ ನಟಿಸಿದ್ದರು ಎಂಬುದರ ಬಗ್ಗೆ ಕೂಡಾ ಸದ್ಯಕ್ಕೆ ಸ್ಪಷ್ಟನೆ ಸಿಕ್ಕಿಲ್ಲ.
ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಅಸಹಜ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಶೃತಿ ಅವರಿಗೆ ಉಮೇಶ್ ಎಂಬುವವರ ಜೊತೆ ಮದುವೆಯಾಗಿದ್ದು, ಈ ದಂಪತಿಗೆ ಹೆಣ್ಣು ಮಗುವೂ ಕೂಡ ಇದೆ. ಸದ್ಯ ಶೃತಿ ಕುಟುಂಬಸ್ಥರು ಆಕೆಯ ಸಾವು ಆತ್ಮಹತ್ಯೆಯಲ್ಲಾ ಕೊಲೆ ಎಂದು ಆರೋಪ ಮಾಡಿದ್ದು, ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಶೃತಿ ಅವರ ಶವವನ್ನು ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಂತರ ಹೆಚ್ಚಿನ ಮಾಹಿತಿ ಸಿಗಲಿದೆ. ಶೃತಿ ಕುಟುಂಬದವರು ನೀಡಿದ ದೂರಿನ ಅನ್ವಯ ಶ್ರೀಕಾಂತ್ ಎಂಬುವವರ ವಿರುದ್ಧ ಐಪಿಸಿ ಸೆಕ್ಷನ್ 306 ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.
-
KD Song Controversy: ಸೆರಗ ಸರ್ಸೆ ಹಾಡು ವಿವಾದ: ಪ್ರೇಮ್ ವಿರುದ್ಧ ದೂರು, ನೋಟಿಸ್ ಬೆನ್ನಲ್ಲೇ ಹಿಂದಿ ಹಾಡು ಡಿಲೀಟ್ -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications