ಬ್ಲ್ಯಾಕ್ ಮೇಲ್: ಕನ್ನಡ ಟಿವಿ ಚಾನಲ್ ಸಿಇಒ ಬಂಧನ
ಉದ್ಯಮಿಯೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಖಾಸಗಿ ಚಾನಲ್ ಸಿಇಒ ಒಬ್ಬರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ
ಬೆಂಗಳೂರು, ಏಪ್ರಿಲ್ 15: ಉದ್ಯಮಿಯೊಬ್ಬರಿಂದ 10 ಕೋಟಿ ರೂ. ಬೇಡಿಕೆ ಇಟ್ಟು, ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಖಾಸಗಿ ಚಾನಲ್ ವೊಂದರ ಸಿ ಇ ಒ ಲಕ್ಷ್ಮಿಪ್ರಸಾದ್ ವಾಜಪೇಯಿ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಬ್ಲ್ಯಾಕ್ ಮೇಲ್ ಹಣವನ್ನು ಪಡೆಯುತ್ತಿದ್ದ ವೇಳೆ 42 ವರ್ಷ ವಯಸ್ಸಿನ ಲಕ್ಷ್ಮಿ ಪ್ರಸಾದ್ ಅವರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಇವರ ವಿರುದ್ಧ ಕಮರ್ಶಿಯಲ್ ಸ್ಟ್ರೀಟ್ ಮತ್ತು ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲೂ ಕೇಸು ದಾಖಲಿಸಲಾಗಿತ್ತು.

ಬ್ಲ್ಯಾಕ್ ಮೇಲ್ ನಿಂದ ರೋಸಿ ಹೋಗಿದ್ದ ಉದ್ಯಮಿ ಕೋರಮಂಗಲ ಪೊಲೀಸ್ ಠಾಣೆಗೆ ದೂರುನೀಡಿದ್ದರು. ಐಪಿಸಿ ಸೆಕ್ಷನ್ 384, 385, 506 ಅಡಿಯಲ್ಲಿ ಸುಲಿಗೆ ಆರೋಪದಡಿಯಲ್ಲಿ ವಾಜಪೇಯಿ ಅವರನ್ನು ಬಂಧಿಸಲಾಗಿದೆ.
ವಾಜಪೇಯಿ ಅವರಿಗೆ ಸಹಕರಿಸಿದ ಆರೋಪದ ಮೇಲೆ ಮಿಥುನ್ ಎಂಬುವವರನ್ನೂ ಬಂಧಿಸಲಾಗಿದೆ.
ಈ ಉದ್ಯಮಿಗೆ ಮಾತ್ರವಲ್ಲ, ಈಗಾಗಲೇ ಹಲವರಿಗೆ ಲಕ್ಷ್ಮಿ ಪ್ರಸಾದ್ ಇದೇ ರೀತಿ ಬ್ಲ್ಯಾಕ್ ಮೇಲ್ ಮಾಡಿದ್ದರು ಎಂಬ ವಿಷಯವೂ ತಿಳಿದುಬಂದಿದೆ.
More From
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications