ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬ್ಲ್ಯಾಕ್ ಮೇಲ್: ಕನ್ನಡ ಟಿವಿ ಚಾನಲ್ ಸಿಇಒ ಬಂಧನ

ಉದ್ಯಮಿಯೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಖಾಸಗಿ ಚಾನಲ್ ಸಿಇಒ ಒಬ್ಬರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ

By ಒನ್ ಇಂಡಿಯಾ ಪ್ರತಿನಿಧಿ
|
Google Oneindia Kannada News

ಬೆಂಗಳೂರು, ಏಪ್ರಿಲ್ 15: ಉದ್ಯಮಿಯೊಬ್ಬರಿಂದ 10 ಕೋಟಿ ರೂ. ಬೇಡಿಕೆ ಇಟ್ಟು, ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಖಾಸಗಿ ಚಾನಲ್ ವೊಂದರ ಸಿ ಇ ಒ ಲಕ್ಷ್ಮಿಪ್ರಸಾದ್ ವಾಜಪೇಯಿ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಬ್ಲ್ಯಾಕ್ ಮೇಲ್ ಹಣವನ್ನು ಪಡೆಯುತ್ತಿದ್ದ ವೇಳೆ 42 ವರ್ಷ ವಯಸ್ಸಿನ ಲಕ್ಷ್ಮಿ ಪ್ರಸಾದ್ ಅವರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಇವರ ವಿರುದ್ಧ ಕಮರ್ಶಿಯಲ್ ಸ್ಟ್ರೀಟ್ ಮತ್ತು ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲೂ ಕೇಸು ದಾಖಲಿಸಲಾಗಿತ್ತು.

Kannada TV Channel CEO Lakshmi Prasad Vajpeyee held in Bengaluru

ಬ್ಲ್ಯಾಕ್ ಮೇಲ್ ನಿಂದ ರೋಸಿ ಹೋಗಿದ್ದ ಉದ್ಯಮಿ ಕೋರಮಂಗಲ ಪೊಲೀಸ್ ಠಾಣೆಗೆ ದೂರುನೀಡಿದ್ದರು. ಐಪಿಸಿ ಸೆಕ್ಷನ್ 384, 385, 506 ಅಡಿಯಲ್ಲಿ ಸುಲಿಗೆ ಆರೋಪದಡಿಯಲ್ಲಿ ವಾಜಪೇಯಿ ಅವರನ್ನು ಬಂಧಿಸಲಾಗಿದೆ.

ವಾಜಪೇಯಿ ಅವರಿಗೆ ಸಹಕರಿಸಿದ ಆರೋಪದ ಮೇಲೆ ಮಿಥುನ್ ಎಂಬುವವರನ್ನೂ ಬಂಧಿಸಲಾಗಿದೆ.

ಈ ಉದ್ಯಮಿಗೆ ಮಾತ್ರವಲ್ಲ, ಈಗಾಗಲೇ ಹಲವರಿಗೆ ಲಕ್ಷ್ಮಿ ಪ್ರಸಾದ್ ಇದೇ ರೀತಿ ಬ್ಲ್ಯಾಕ್ ಮೇಲ್ ಮಾಡಿದ್ದರು ಎಂಬ ವಿಷಯವೂ ತಿಳಿದುಬಂದಿದೆ.

English summary
Kannada TV Channel CEO Lakshmi Prasad Vajpeyee held in Bengaluru. Koramangala Police filed case against him under IPC section 384, 385, 506, Punishment for extortion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X