Lohitashwa Passed Away : ಕನ್ನಡ ಹಿರಿಯ ನಟ ಲೋಹಿತಾಶ್ವ ವಿಧಿವಶ
ಬೆಂಗಳೂರು, ನವೆಂಬರ್ 8: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ(80) ಮಂಗಳವಾರ ವಿಧಿವಶರಾಗಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟರಾಗಿದ್ದ ಅವರು ಕುಮಾರಸ್ವಾಮಿ ಲೇಔಟ್ದಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಆಗಸ್ಟ್ 5, 1942ರಲ್ಲಿ ತುಮಕೂರಿನ ತೊಂಡಗೆರೆ ಗ್ರಾಮದಲ್ಲಿ ಜನಿಸಿದರು. ನಾಟಕಕಾರಾಗಿದ್ದ ನಟ ಲೋಹಿತಾಶ್ವ ಅವರು ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯಲ್ಲಿ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿದರು. ಬಳಿಕ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕರ್ತವ್ಯ ಆರಂಭಿಸಿದರು. ಜೊತೆಗೆ ನಟನೆಯಲ್ಲೂ ಅಭಿರುಚಿ ಹೊಂದಿದ್ದ ಲೋಹಿತಾಶ್ವ ಅವರು ನಾಟಕಕಾರನಾಗಿ ಚಿರಪರಿಚಿತರಾಗಿದ್ದರು.
ಲೋಹಿತಾಶ್ವ ಅವರು 1971ರಲ್ಲಿ ವತ್ಸಲಾ ಎನ್ನುವವರನ್ನು ವಿವಾಹವಾದರು. ಮೂವರು ಮಕ್ಕಳ ಮುದ್ದಿನ ತಂದೆಯಾಗಿರುವ ಲೋಹಿತಾಶ್ವ ಅವರ ಪುತ್ರ ಶರತ್ ಲೋಹಿತಾಶ್ವ ಅವರು ಕೂಡ ಕನ್ನಡ ಚಿತ್ರರಂಗದಲ್ಲಿ ಜನಪ್ರಿಯತೆ ಪಡೆದಿದ್ದಾರೆ.

ತಮ್ಮ ಧ್ವನಿ ಮೂಲಕವೇ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದ ಲೋಹಿತಾಶ್ವ ಅವರು ಈವರೆಗೂ ಒಟ್ಟು ಐದು ನೂರಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳಲ್ಲಿ ಹಾಗೂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಕನ್ನಡ ಧಾರಾವಾಹಿಗಳಲ್ಲಿ ಇತಿಹಾಸ ಸೃಷ್ಟಿಸಿದ್ದ ನಟ ಶಂಕರ್ ನಾಗ್ ಅಭಿನಯದ ಮಾಲ್ಗುಡಿ ಡೇಸ್ ಧಾರಾವಾಹಿಯಲ್ಲಿ ಲೋಹಿತಾಶ್ವ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಗಿರೀಶ್ ಕಾಸರವಳ್ಳಿಯವರ ಗೃಹಭಂಗ, ಜಿ.ವಿ ಅಯ್ಯರ್ ನಿರ್ದೇಶನದ ನಾಟ್ಯರಾಣಿ ಶಕುಂತಲಾ, ಕೆ.ಎಂ ಚೈತನ್ಯಾ ನಿರ್ದೇಶನದ ಓಂ ನಮೋ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಲೋಹಿತಾಶ್ವ ಅವರು ಕರ್ನಾಟಕದ ಮನೆ ಮಾತಾಗಿದ್ದರು.
1981ರ ಮುನಿಯನ ಮಾದರಿ, ಸಾಂಗ್ಲಿಯಾನ, ಅಭಿಮನ್ಯು, ದಾದಾ, ಎ.ಕೆ 47, ಗೀತಾ, ಇಂದ್ರಜಿತ್, ಜಯಸಿಂಹ, ಕಾಡಿನ ರಾಜ, ಲಾಕಪ್ ಡೆತ್, ಕಲಾವಿದ, ಚಿನ್ನಾ, ಮಿಡಿದ ಹೃದಯಗಳು, ಮೈಸೂರು ಜಾಣ, ರೆಡಿಮೇಡ್ ಗಂಡ, ಎಸ್.ಪಿ ಸಾಂಗ್ಲಿಯಾನ ಭಾಗ-2, ಸ್ನೇಹಲೋಕ, ಸುಂದರ ಕಾಂಡ, ತುಂಬಿದ ಮನೆ, ಸವ್ಯಾ ಸಾಚಿ, ಶಾಂತಿ ನಿವಾಸ, ಸಮಯದ ಗೊಂಬೆ, ನೀ ಬರೆದ ಕಾದಂಬರಿ, ಹಲೋ ಡ್ಯಾಡಿ, ಏಕಲವ್ಯ, ಆಪತ್ಭಾಂಧವ, ಚಾಣಕ್ಯ, ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ ಕನ್ನಡ ಮೇರು ನಟರ ಜೊತೆ ತೆರೆ ಹಂಚಿಕೊಂಡಿದ್ದರು. ಇನ್ನು ಕಿಚ್ಚ ಸುದೀಪ್ ಅಭಿನಯದ ಚಂದು ಸಿನಿಮಾ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಸಾರಥಿ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.
ಹವ್ಯಾಸಿ ರಂಗ ಕಲಾವಿದರಾಗಿರುವ ಲೋಹಿತಾಶ್ವ ಅವರು 47 ಮಾವಳ್ಳಿ ಸರ್ಕಲ್, ಭರತ ದರ್ಶನ, ಚಸ್ನಾಳ ದುರಂತ, ದಂಗೆ ಮುಂಚಿನ ದಿನಗಳು, ಹುಲಿಯ ನೆರಳು, ಹುಟ್ಟಾವ ಬಡಿದರೇ, ಕತ್ತಲೆ ದಾರಿ ದೂರ, ಹುಲಿಯ ನೆರಳು, ಮೆರವಣಿಗೆ ಸೇರಿದಂತೆ ಅನೇಕ ನಾಟಕಗಳಲ್ಲಿ ನಟಿಸಿದ್ದಾರೆ. 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಲೋಹಿತಾಶ್ವ ಅವರು ಕರ್ನಾಟಕ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಹಾಗೂ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.
-
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications