ಕನ್ನಡ ವಿಕಿಪೀಡಿಯಗೆ 10, ಬೆಳವಣಿಗೆ ಸಾಲದು : ಪ್ರೊ .ಜಿವಿ
ಬೆಂಗಳೂರು, ನ.17: ಕನ್ನಡ ನೆಟ್ಟಿಗರ ಜ್ಞಾನದಾಹವನ್ನು ತಣಿಸುತ್ತಿರುವ ಕನ್ನಡ ವಿಕಿಪೀಡಿಯ 10 ವಸಂತಗಳನ್ನು ಪೂರೈಸಿರುವ ಸಂತಸವನ್ನು ನವೆಂಬರ್ 17 ರಂದು ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜಿನ ಡಾ. ಎಚ್ ನರಸಿಂಹಯ್ಯ ಸಭಾಂಗಣದಲ್ಲಿ ಹಂಚಿಕೊಳ್ಳಲಾಯಿತು.
ದಶಮಾನೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿದ್ದ ಡಾ. ಯುಆರ್ ಅನಂತಮೂರ್ತಿ ಹಾಗೂ ರವಿ ಹೆಗಡೆ ಅವರು ಕಾರಣಾಂತರದಿಂದ ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ. ಮತ್ತೊಬ್ಬ ಮುಖ್ಯ ಅತಿಥಿಗಳಾದ ನಾಡೋಜ ಪ್ರೊ.ಜಿ. ವೆಂಕಟಸುಬ್ಬಯ್ಯ ಅವರು ಸಭೆಯನ್ನು ಉದ್ದೇಶಿಸಿ ಹೀಗೆ ಮಾತನಾಡಿದರು :
'ಕನ್ನಡ ವಿಕಿಪೀಡಿಯದ ಬೆಳವಣಿಗೆ ಸಾಲದು. ನಾಡಿನ ಯುವ ಜನತೆ ಮತ್ತಷ್ಟು ಉತ್ಸುಕರಾಗಿ ಲೇಖನಗಳನ್ನು ಸೇರಿಸಿ ಕನ್ನಡ ವಿಕಿಪೀಡಿಯವನ್ನು ಮಾಹಿತಿಯೋಗ್ಯ ತಾಣವಾಗಿ ಮಾರ್ಪಡಿಸಿ' ಎಂದು ನಾಡೋಜ ಪ್ರೊ.ಜಿ. ವೆಂಕಟಸುಬ್ಬಯ್ಯ ಯುವಜನತೆಗೆ ಕರೆ ನೀಡಿದರು.
ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಸಭಾಂಗಣದಲ್ಲಿ ನಡೆದ ಕನ್ನಡ ವಿಕಿಪೀಡಿಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಪ್ರೊ.ಜಿ. ವೆಂಕಟಸುಬ್ಬಯ್ಯ ಅವರು, 'ಕನ್ನಡ ವಿಕಿಪೀಡಿಯವನ್ನು ಹತ್ತು ಪೂರೈಸಿದ ಮಾತ್ರಕ್ಕೆ ವಿಕಿಪೀಡಿಯ ಮುಂದುವರೆಯುತ್ತದೆ ಎನ್ನುವ ಭಾವನೆ ಬೇಡ. ಪ್ರೀತಿಯಿಂದ ಕಟ್ಟಿದ ಒಂದು ಸಂಸ್ಥೆ ಮುಂದುವರೆಯಬೇಕಾದರೆ ಅದಕ್ಕೆ ಬಹಳಷ್ಟು ಜನರ ಸಹಕಾರ ಬೇಕು. ಈ ಸಹಕಾರ ಈಗ ಕನ್ನಡ ವಿಕಿಪೀಡಿಯಕ್ಕೆ ಅಗತ್ಯವಿದೆ. ನನಗೆ ಈಗಾಗಲೇ ನೂರು ವರ್ಷವಾಗಿದೆ. ಆದರೂ ನನ್ನಿಂದಾಗುವ ಸಹಾಯವನ್ನು ನೀಡಲು ಸಿದ್ದ. ಕನ್ನಡ ವಿಕಿಪೀಡಿಯಕ್ಕೆ ನನ್ನ ಬೆಂಬಲ ಯಾವತ್ತೂ ನಿರಂತರ' ಎಂದರು.
'ಇಂದು ಇಂಟರ್ನೆಟ್ನಲ್ಲಿ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಸಾವಿರಾರು ಮಾಹಿತಿಗಳು ಸಿಗುತ್ತದೆ.ಇವುಗಳಲ್ಲಿ ನಿಖರವಾಗಿರುವ ಮಾಹಿತಿ ಎಲ್ಲಾ ತಾಣಗಳಲ್ಲಿ ಸಿಗುವುದು ಕಷ್ಟ. ಹೀಗಾಗಿ ಅಯಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕನ್ನಡದ ಸಾಧಕರು ತಮ್ಮ ಕರ್ತವ್ಯವೆಂದು ಭಾವಿಸಿ ಕನ್ನಡ ವಿಕಿಪೀಡಿಯದಲ್ಲಿ ಮಾಹಿತಿ ಸೇರಿಸುವ ಕಾರ್ಯಕ್ಕೆ ಮುಂದಾಗಬೇಕು' ಎಂದು ವಿಜ್ಞಾನಿ ಅನಂತರಾಮು ಅಭಿಪ್ರಾಯಪಟ್ಟರು.
ಕನ್ನಡ ವಿಕಿಪೀಡಿಯದ ಸಂಪಾದಕ ಯು.ಬಿ. ಪವನಜ ಮಾತನಾಡಿ, 'ಪೆಟ್ರೋಲ್ ಉಳಿಸಲು ಕಡಿಮೆ ಪೆಟ್ರೋಲ್ ಬಳಸಿ ಎಂದು ಹೇಳುತ್ತೇವೆ. ಆದರೆ ಕನ್ನಡ ಉಳಿಸಲು ಏನು ಮಾಡಬೇಕು ಎಂಬ ಪ್ರಶ್ನೆಗೆ ಉತ್ತರ ಸಿಗುವುದು ಕಷ್ಟ. ಆದರೆ ವಿಶ್ವದ ಮಾಹಿತಿಗಳು ನಮ್ಮ ಭಾಷೆಯಲ್ಲಿ ಸಿಕ್ಕಿದಾಗ ಮಾತ್ರ ಕನ್ನಡ ಉಳಿಸಬಹುದು. ಕಥೆ, ಕವನ ಇತ್ಯಾದಿ ಸಾಹಿತ್ಯದ ಜೊತೆಗೆ ಈಗ ಮಾಹಿತಿ ಸಾಹಿತ್ಯವನ್ನು ಬರೆಯುವ ಮಾಹಿತಿ ಸಾಹಿತಿಗಳ ಅಗತ್ಯವಿದೆ. ಈ ಸಾಹಿತಿಗಳಿಗೆ ವಿಕಿಪೀಡಿಯ ಒಂದು ಉತ್ತಮ ವೇದಿಕೆ.ಈ ವೇದಿಕೆಯನ್ನು ಬಳಸಿ ಕನ್ನಡ ವಿಕಿಪೀಡಿಯವನ್ನು ಉತ್ತಮ ಮಾಹಿತಿ ಕೋಶವನ್ನಾಗಿ ರೂಪಿಸಬೇಕಾಗಿದೆ' ಎಂದು ಹೇಳಿದರು.
ನಿರ್ದೇಶಕ ಅಭಯ್ ಸಿಂಹ ಮಾತನಾಡಿ. 'ನನ್ನ ಅಜ್ಜ ಜಿ.ಟಿ ನಾರಾಯಣರಾಯರು ಬರೆದಿರುವ ವಿಜ್ಞಾನಕ್ಕೆ ಸಂಬಂಧಿಸಿ ಬರೆದಿರುವ ಲೇಖನಗಳು ಕ್ರಿಯೆಟಿವ್ ಕಾಮನ್ಸ್ ಲೈಸನ್ಸ್ನಿಂದಾಗಿ ವಿಕಿಪೀಡಿಯದಲ್ಲಿ ಲಭ್ಯವಾಗಿದೆ.ಈ ಲೈಸನ್ಸ್ ಮೂಲಕ ಈಗಾಗಲೇ ಮುದ್ರಣಗೊಂಡಿರುವ ಮತ್ತಷ್ಟು ಲೇಖನಗಳು ವಿಕಿಪೀಡಿಯದಲ್ಲಿ ಸೇರುವಂತಾಗಬೇಕು' ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ವಿಕಿಪೀಡಿಯದಲ್ಲಿ ಅತಿ ಹೆಚ್ಚಾಗಿ ಲೇಖನಗಳನ್ನು ಸಂಪಾದನೆ ಮಾಡಿದ ಲೇಖಕರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಬಳಿಕ ವಿಕಿಪೀಡಿಯಕ್ಕೆ ಹೊಸ ಲೇಖನ ಸೇರಿಸುವ ಬಗ್ಗೆ ಓಂ ಶಿವಪ್ರಕಾಶ ಪ್ರಾತ್ಯಕ್ಷಿಕೆ ನೀಡಿದರು. ಕ್ರಿಯೇಟಿವ್ ಕಾಮನ್ಸ್ ವಿಚಾರದ ಬಗ್ಗೆ ಕಿರಣ್ ರವಿಕುಮಾರ ಉಪನ್ಯಾಸ ನೀಡಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral













Click it and Unblock the Notifications