ಸಾಹಿತಿ, ರಂಗಭೂಮಿ ಕಲಾವಿದೆ ವಿಜಯಮ್ಮಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಬೆಂಗಳೂರು, ಡಿಸೆಂಬರ್ 18: ಸಾಹಿತಿ, ಲೇಖಕಿ, ರಂಗಭೂಮಿ ಕಲಾವಿದೆ ಡಾ.ವಿಜಯಾ (ವಿಜಯಮ್ಮ) ಅವರಿಗೆ 2019 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಾನ್ ಪಿಕ್ಸನ್ ನ ಕನ್ನಡ ಭಾಷಾ ವಿಭಾಗದಲ್ಲಿ ಅವರ 'ಕುದಿ ಎಸರು' ಆತ್ಮಕಥೆಗೆ ಈ ಪ್ರಶಸ್ತಿ ಸಂದಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದೆ. ಇವರ ಜೊತೆ ದೇಶದ 21 ಭಾಷೆಯ 23 ಲೇಖಕರು, ಸಾಹಿತಿಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮೂಲತಃ ದಾವಣಗೆರೆ ಜಿಲ್ಲೆಯವರಾದ ವಿಜಯಮ್ಮ ಅವರು ಬೆಂಗಳೂರಿನಲ್ಲಿ ನೆಲಸಿದ್ದಾರೆ. ಇಳಾ ಎಂಬ ಪುಸ್ತಕ ಪ್ರಕಾಶನ ಮೂಲಕ 200 ಕ್ಕೂ ಹೆಚ್ಚು ಲೇಖಕರ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಶ್ರೀರಂಗರ ನಾಟಕಗಳ ಕುರಿತು ಪಿ ಎಚ್ ಡಿ ಪಡೆದಿರುವ ವಿಜಯಮ್ಮ, ರಂಗಭೂಮಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Kannada Writer Vijayamma Selected For Sahitya Academy Prize 2019

ಪ್ರಶಸ್ತಿಯೂ 1 ಲಕ್ಷ ರುಪಾಯಿ ನಗದು ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ. ಫೆಬ್ರುವರಿ 25, 2020 ರಂದು ನವದೆಹಲಿಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಸದ್ಯ ಕನ್ನಡಿಗ, ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+