ಕನ್ನಡತಿ ಉತ್ಸವ-2022: ಅವಳ ಹೆಜ್ಜೆಯಲ್ಲಿ ರ್ಯಾಂಪ್ ವಾಕ್
ಬೆಂಗಳೂರು, ನ.13: ''ಹೆಣ್ಣು ಒಂದು ಹೆಜ್ಜೆ ಮುಂದೆ ಇಟ್ಟರೆ ಸಮಾಜ ಒಂದು ಹಂತ ಮೇಲಕ್ಕೇರುತ್ತದೆ. ಎಲ್ಲಾ ಮಹಿಳೆಯರಲ್ಲೂ ಒಂದಿಲ್ಲೊಂದು ಕನಸು ಅಥವಾ ಕಲೆ ಅಡಗಿರುತ್ತದೆ. ಅವುಗಳಿಗೆ ಸರಿಯಾದ ಪೋಷಣೆ ನೀಡುವುದು ಕುಟುಂಬದ ಹೊಣೆ" ಎಂದು ʼಅವಳ ಹೆಜ್ಜೆʼ ಸಂಸ್ಥಾಪಕಿ ಶಾಂತಲಾ ದಾಮ್ಲೆ ಹೇಳಿದ್ದಾರೆ.
ಕನ್ನಡತಿ ಉತ್ಸವ-2022 ರ ಅಂಗವಾಗಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನಲ್ಲಿ ನಡೆದ ʼಮಿಸ್ ಮಹಾಲಕ್ಷ್ಮೀʼ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಿಳೆಯರಿಗೆ ಪಾರಿತೋಷಕ ವಿತರಿಸಿ ಶಾಂತಲಾ ದಾಮ್ಲೆ ಮಾತನಾಡುತ್ತಿದ್ದರು.
"ಮಹಿಳೆಗೆ ಅವಕಾಶ ದೊರಕಿಸಿಕೊಡುವುದು ಸಮಾಜದ ಎಲ್ಲರ ಜವಾಬ್ದಾರಿಯಾಗಿದೆ. ಹೆಣ್ಣು ಮಕ್ಕಳು ಆಟದ ಮೈದಾನದಿಂದ ಬೋರ್ಡ್ ರೂಮಿನವರೆಗೂ ಎಲ್ಲಾ ಕ್ಷೇತ್ರಗಳಲ್ಲಿ ಹಬ್ಬಿ ಬೆಳೆಯಬೇಕೆಂಬುದು ನನ್ನ ಹಂಬಲ" ಎಂದು ಶಾಂತಲಾ ದಾಮ್ಲೆ ತಿಳಿಸಿದ್ದಾರೆ.

ಫ್ಯಾಷನ್ ಶೋನಲ್ಲಿ 7 ವರ್ಷದಿಂದ ಮೊದಲುಗೊಂಡು 75 ವರ್ಷ ವಯೋಮಾನದವರೆಗಿನ ಮಹಿಳೆಯರು ಭಾಗವಹಿಸಿದ್ದರು. ತಮ್ಮ ತಮ್ಮ ಕನಸು, ಕಸುಬು ಮತ್ತು ಕಲೆಯನ್ನು ಕ್ರಿಯಾಶೀಲವಾಗಿ ವಿವಿಧ ಉಡುಗೆ ತೊಡುಗೆಗಳ ಮೂಲಕ ರ್ಯಾಂಪ್ ಮೇಲೆ ಪ್ರದರ್ಶಿಸಿದರು.
ವೈದ್ಯೆ, ವಕೀಲೆ, ಫಾರ್ಮಾಸಿಸ್ಟ್, ಕೇಶ ವಿನ್ಯಾಸಕಿ, ಬಾಹ್ಯಾಕಾಶ ವಿಜ್ಞಾನಿ, ವನ್ಯಜೀವಿ ಛಾಯಾಗ್ರಾಹಕಿ, ಸಮಾಜ ಸೇವೆ, ಕಸೂತಿ, ಶಿಕ್ಷಣ, ಫ್ಯಾಷನ್ ಡಿಸೈನಿಂಗ್, ಮಾಡಲಿಂಗ್, ಜಿಮ್, ಯೋಗ, ಸಾಹಿತ್ಯ, ಗಾಯನ, ಭರತನಾಟ್ಯ, ಕಥಕ್, ಯಕ್ಷಗಾನ, ಚಿತ್ರಕಲೆ, ನಾಟಕ, ಟ್ರೆಕ್ಕಿಂಗ್, ಆಭರಣ ವಿನ್ಯಾಸ ಮುಂತಾದ ಕ್ಷೇತ್ರಗಳನ್ನು ಈ ಮಹಿಳೆಯರು ಪ್ರತಿನಿಧಿಸಿದರು.
ಇದರೊಂದಿಗೆ, ʼಹಳೆ ಬೇರು ಹೊಸ ಚಿಗುರುʼ ಶೀರ್ಷಿಕೆಯಡಿ ಹೆಣ್ಣು ಸಂತತಿಯ ಮೂರು ನಾಲ್ಕು ತಲೆಮಾರಿನ ಒಂದೇ ಕುಟುಂಬದ ಮಹಿಳೆಯರು ಒಟ್ಟಾಗಿ ರ್ಯಾಂಪ್ ವಾಕ್ ಮಾಡಿ ತಮ್ಮ ಬಾಂಧವ್ಯವನ್ನು ಪ್ರದರ್ಶಿಸಿದ್ದಾರೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ










Click it and Unblock the Notifications