ಬೆಂಗಳೂರಿನಲ್ಲಿ ಅವಳ ಹೆಜ್ಜೆಯಿಂದ 'ಕನ್ನಡತಿ ಉತ್ಸವ'
ಬೆಂಗಳೂರು, ಡಿಸೆಂಬರ್ 05 : ಅವಳ ಹೆಜ್ಜೆ ತಂಡವು ಡಿ.8 ರಿಂದ ಮೂರು ದಿನಗಳ ಕಾಲ 'ಕನ್ನಡತಿ ಉತ್ಸವ' ಎನ್ನುವ ವಿಶಿಷ್ಟ ಕಾರ್ಯಕ್ರಮವನ್ನು ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ರಂಗೋಲಿ-ಮೆಟ್ರೋ ಆರ್ಟ್ ಸೆಂಟರ್ ನಲ್ಲಿ ಆಯೋಜಿಸಿದೆ.
ಸಂವಾದಗಳು, ಜನಪದ ಸಂಗೀತ, ಸಾಕ್ಷ್ಯಚಿತ್ರ, ಹಾಸ್ಯ ಪ್ರದರ್ಶನ ಹೀಗೆ ಹಲವಾರು ವಿಭಿನ್ನ ಕಾರ್ಯಕ್ರಮಗಳು ಪ್ರೇಕ್ಷಕರನ್ನು ಬರಸೆಳೆಯುವುದರಲ್ಲಿ ಸಂಶಯವಿಲ್ಲ. ಉತ್ಸವವನ್ನು ಕವಿ ಹಾಗೂ ಅಭಿನೇತ್ರಿ ಪದ್ಮಾವತಿ ರಾವ್ ಉದ್ಘಾಟಿಸಲಿದ್ದಾರೆ. ಭಾರತೀಯ ಥ್ರೋಬಾಲ್ ತಂಡದ ಕ್ಯಾಪ್ಟನ್ ಕೃಪಾ ಪ್ರಸಾದ್ ಪಾಲ್ಗೊಳ್ಳಲಿದ್ದಾರೆ.

ವರ್ಣಚಿತ್ರ, ಕವಿತೆ, ಲೇಕನ ಮತ್ತು ಪುಸ್ತಕಗಳ ಪ್ರದರ್ಶನ ಮೂರು ದಿನವೂ ನಡೆಯಲಿದ್ದು, ಬೆಳಗ್ಗೆ 11 ರಿಂದ ಸಂಜೆ7 ರವರೆಗೆ ತೆರೆದಿರುತ್ತದೆ. ಕಿರು ಚಲನಚಿತ್ರಗಳು, ನೇರ ಪ್ರದರ್ಶನಗಳು ಮತ್ತು ಸಂವಾದ ಸರಣಿಯು ನಡೆಯಲಿದೆ. ಡಿಸೆಂಬರ್ ೮ರಂದು ಉದ್ಯಮಿಗಳ ಗತ್ತು ಕುರಿತು ಸಂವಾದ ನಡೆಯಲಿದೆ, ಸ್ತ್ರೀ ನಾಟಕ ಮಂಡಳಿ ಕುರಿತು ಸಾಕ್ಷ್ಯಚಿತ್ರ ಪ್ರದರ್ಶನಗೊಳ್ಳಲಿದೆ ಅದರೊಂದಿಗೆ ಕುಡಿತಿನಿಯ ಅಕ್ಕನಾಗಮ್ಮ ಅವರಿಂದ ಜನಪದ ಸಂಗೀತ ಮೂಡಿಬರಲಿದೆ.
ಡಿಸೆಂಬರ್ 9 ರಂದು ವಿಮೋಚನಾ ಸಂಸ್ಥೆಯಿಂದ 'ಸಾಂಗ್ ಆಫ್ ದಿ ಸೈಕಿ' ಸಾಕ್ಷ್ಯಚಿತ್ರ ಪ್ರದರ್ಶನ ಜರುಗಲಿದ್ದು, ಪಕ್ಷಗಳನ್ನು ಮಿತಿಮೀರಿದ ರಾಜಕೀಯ ಎಂಬ ವಿಷಯಾಧಾರಿತ ಸಂವಾದ, ಇದರೊಂದಿಗೆ ಜಿ.ಎಸ್. ಶಾರದಾ ಅವರಿಂದ ಜಾದೂ ಪ್ರದರ್ಶನ ಆಯೋಜನೆಗೊಂಡಿದೆ.
ಇನ್ನು ಕೊನೆಯ ದಿನವಾದ ಡಿಸೆಂಬರ್ 10 ರಂದು ದೀಪದ ಮಲ್ಲಿಗೆ ತಂಡದಿಂದ ರಕ್ತಾಕ್ಷಿ ನಾಟಕ ನಡೆಯಲಿದ್ದು, ಮಾರ್ಗದರ್ಶಕರನ್ನು ಹುಡುಕುತ್ತಾ ಎನ್ನುವ ವಿಷಯ ಕುರಿತು ಸಂವಾದ, ಕಾಲುವೆಯಾ ಕಾಲ ನೃತ್ಯ ದರ್ಪಣ ಹಾಗೂ ರಂಗಲಕ್ಷ್ಮೀಯರಿಂದ ಹಾಸ್ಯ ಪ್ರದರ್ಶನಗೊಳ್ಳಲಿದೆ.ಗೌಡ ದೂರು
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications