ತಮಿಳುನಾಡಿನಲ್ಲಿ ಕನ್ನಡದಲ್ಲಿ ಮಾತಾಡಿದ್ರೆ 1,000 ರು ದಂಡ!
ಬೆಂಗಳೂರು, ಜುಲೈ 01: ನಮ್ಮ 'ಪಕ್ಕದ ಮನೆ ತಮಿಳುನಾಡಲ್ಲಿ ಮಾತ್ರ ಕನ್ನಡ ಮಾತನಾಡಿದ್ರೆ ದಂಡ ಹಾಕುತ್ತಾರೆ.. ಕೇಳುವುದಕ್ಕೆ ಅಚ್ಚರಿ, ಆಘಾತ ಎನಿಸುವ ಘಟನೆಯ ಬಗ್ಗೆ ಪತ್ರಕರ್ತ, ಕನ್ನಡ ಪರ ಚಿಂತಕ ಕಿರಿಕ್ ಕೀರ್ತಿ ಅವರು ತಮ್ಮ ಫೇಸ್ ಬುಕ್ ಪುಟದಲ್ಲಿ ಹಂಚಿಕೊಂಡಿದ್ದಾರೆ.
ಜಯ ಭಾರತ ಜನನಿಯ ತನುಜಾತೆ.. ಜಯ ಹೇ ಕರ್ನಾಟಕ ಮಾತೆ' ಎಂದು ಕುವೆಂಪು ಅವರು ದೇಶದ ವೈವಿಧ್ಯತೆ, ಭಾಷೆ ವೈವಿಧ್ಯತೆ, ನಾವೆಲ್ಲರೂ ಭಾರತ ಮಾತೆ ಮಕ್ಕಳು ಎಂಬ ಪಾಠ ಹೇಳಿಕೊಟ್ಟಿದ್ದಾರೆ. ಕರ್ನಾಟಕದ ಶಾಲೆಗಳಲ್ಲೂ, ಕನ್ನಡಿಗರಲ್ಲೂ ಇದೇ ಭಾವನೆ ಇದೆ. ಆದರೆ, ಇತ್ತೀಚೆಗೆ ಮಂಜುನಾಥ್ ಶೆಟ್ಟಿ ಎಂಬುವವರು ಪಾಂಡಿಚೇರಿಯಲ್ಲಿ ಕನ್ನಡದಲ್ಲಿ ಮಾತನಾಡಿ, 1,000 ರು ದಂಡ ತೆತ್ತಿದ್ದಾರಂತೆ. ಈ ಬಗ್ಗೆ ತಮ್ಮ ಫೇಸ್ ಬುಕ್ ಪುಟದಲ್ಲಿ ತಮ್ಮ ಗೋಳನ್ನು ತೋಡಿಕೊಂಡಿದ್ದಾರೆ. [ಅಮ್ಮ ಆಲಯಂ, ಜಯಲಲಿತಾರಿಗೊಂದು ದೇಗುಲ]

ಕಳೆದ ವಾರ ನಾನು ಪಾಂಡಿಚೇರಿಗೆ ಪ್ರವಾಸಕ್ಕೆಂದು ಹೋಗಿದ್ದೆ. ಅಲ್ಲಿಂದ ವಾಪಸ್ ಬರುವಾಗ ವೆಲ್ಲೂರಿನ ಆರ್ ಟಿಒ ಚೆಕ್ ಪೋಸ್ಟ್ ನಲ್ಲಿ ನನ್ನ ವಾಹನ ತಡೆದು ನಿಲ್ಲಿಸಿದರು. ಬೇರೆ ರಾಜ್ಯದ ನೋಂದಣಿ ಸಂಖ್ಯೆ ಇದ್ದಿದ್ದರಿಂದ ನಾನು ಹಾಗೂ ನನ್ನ ಸ್ನೇಹಿತ ತೆರಿಗೆ ಹಣ ಕಟ್ಟಲು ಮುಂದಾದೆವು.[ವಲಸಿಗರೇ ತೊಲಗಿ ಅಭಿಯಾನಕ್ಕೆ ಭರ್ಜರಿ ಬೆಂಬಲ]
ಆದರೆ, ನಾನು ಅಲ್ಲಿದ್ದ ಮಹಿಳಾ ಅಧಿಕಾರಿ ಜತೆ ಕನ್ನಡದಲ್ಲಿ ಮಾತನಾಡುತ್ತಿದ್ದಂತೆ ಆಕೆ ಗರಂ ಆದರು. ಇದು ತಮಿಳುನಾಡು, ಇಲ್ಲಿ ನೀನು ಕನ್ನಡದಲ್ಲಿ ಹೇಗೆ ಮಾತನಾಡುತ್ತೀಯ ಎಂದು ದಬಾಯಿಸಿದ್ದಲ್ಲದೆ, ನನಗೆ 1,000 ರು ದಂಡ ಹಾಕಿ ರಸೀತಿ ಹರಿದುಕೊಟ್ಟರು.[ಬಿಬಿಎಂಪಿ ಕಾಲ್ ಸೆಂಟರ್ ವಿರುದ್ಧ - ಐಟಿ ಬಿಟಿ ಕನ್ನಡಿಗರ ಟ್ವಿಟ್ಟರ್ ಸಮರ]
ಯಾವ ಕಾನೂನಿನ ಯಾವ ಸೆಕ್ಷನ್ ನಲ್ಲಿ ಈ ರೀತಿ ದಂಡ ವಿಧಿಸಬಹುದು ಗೊತ್ತಿಲ್ಲ. ನನ್ನ ತಪ್ಪಾದರೂ ಏನು ಎಂದು ಬರೆದುಕೊಂಡಿದ್ದಾರೆ.

ಇದನ್ನು ಹಂಚಿಕೊಂಡಿರುವ ಕಿರಿಕ್ ಕೀರ್ತಿ ಅವರು, ನಾವೆಲ್ಲರೂ ಭಾರತೀಯರು, ಯಾವ ಭಾಷೆ ಬೇಕಾದ್ರೂ ಮಾತಾಡ್ಲಿ ಬಿಡಿ ಎನ್ನುವ ವಿಶಾಲ ಹೃದಯದವರು ಒಮ್ಮೆ ಇಲ್ಲೊಮ್ಮೆ ನೋಡಿ ಎಂದು ಪ್ರಶ್ನಿಸಿದ್ದಾರೆ. ಫೇಸ್ ಬುಕ್ ನಲ್ಲಿ ಐನೂರಕ್ಕೂ ಅಧಿಕ ಲೈಕ್ಸ್, 162ಕ್ಕೂ ಅಧಿಕ ಬಾರಿ ಹಂಚಿಕೆ 42ಕ್ಕೂ ಅಧಿಕ ಕಾಮೆಂಟ್ ಗಳು ಬಂದಿವೆ. ಕೀರ್ತಿ ಫೇಸ್ ಬುಕ್ ಪುಟದ ಲಿಂಕ್ ಇಲ್ಲಿದೆ
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications