ನಮ್ಮ ನಾಡು- ನಮ್ಮ ಭಾಷೆ- ನಮ್ಮ ಹೆಮ್ಮೆ ಎಂದ ಡಿಕೆಶಿಗೆ ಕನ್ನಡಿಗರಿಂದ ಕ್ಲಾಸ್!
ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಕನ್ನಡ ವಿಚಾರವಾಗಿ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಮಾಡಿರುವ ಪೋಸ್ಟ್ ಭಾರೀ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಇತ್ತೀಚಿನ ದಿನಗಳಲ್ಲಿ ಡಿ.ಕೆ ಶಿವಕುಮಾರ್ ಅವರು ಬೆಂಗಳೂರು ಹಾಗೂ ಕರ್ನಾಟಕದಲ್ಲಿರುವ ಬಿಹಾರದವರ ಪರವಾಗಿ ಬ್ಯಾಟಿಂಗ್ ಮಾಡಿರುವುದು. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಈಚೆಗೆ ಬಿಹಾರದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿರುವ ಬಿಹಾರಿಗರಿಗೆ ಮೂರು ದಿನಗಳ ಕಾಲ ವೇತನ ಸಹಿತ ರಜೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದರು.
ಇದೀಗ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ನಮ್ಮ ನಾಡು- ನಮ್ಮ ಭಾಷೆ- ನಮ್ಮ ಹೆಮ್ಮೆ
ಕಲಿತವರಿಗೆ ಅಮೃತ,
ನೆನೆದವರಿಗೆ ನೆರಳು,
ಅಂಧರಿಗೆ ದಾರಿದೀಪ,
ಅಪ್ಪಿಕೋ ಕನ್ನಡವ.
ಇದು ನಮ್ಮ ಕನ್ನಡದ ಹಬ್ಬ 💛❤️ ಎಂದು ಡಿ.ಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದು, ಇದಕ್ಕೆ ಕನ್ನಡಿಗರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಹಾಗೂ ಕರ್ನಾಟಕದಲ್ಲಿರುವ ವಲಸಿಗರ ಪರವಾಗಿ ಮಾತನಾಡಿ ಇದೀಗ ಕನ್ನಡ... ಕನ್ನಡ ಎಂದು ಟ್ವೀಟ್ ಮಾಡಿದರೆ ಸಾಕೇ ಎಂದು ಕನ್ನಡಿಗರು ಪ್ರಶ್ನೆ ಮಾಡಿದ್ದಾರೆ.

ಈ ಟ್ವೀಟ್ಗೆ ಕನ್ನಡಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮನು ಎನ್ನುವವರು, ಕನ್ನಡ ಶಾಲೆಗಳನ್ನು ಉಳಿಸದೆ ಶಿಕ್ಷಣದಲ್ಲಿ ಕನ್ನಡ ನುಡಿ ಕಡ್ಡಾಯ ಮಾಡದೆ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡದೆ ಈ ರೀತಿ ಬರೆದುಕೊಂಡರೆ ಏನು ಉಪಯೋಗವಿದೆ ಹೇಳಿ ಎಂದು ಪ್ರಶ್ನೆ ಮಾಡಿದ್ದಾರೆ. ರಕ್ಷಿತ್ ಎನ್ನುವವರು, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಿ. ನವೆಂಬರ್ ಕನ್ನಡಿಗರಾಗದೆ ನಂಬರ್ ಒನ್ ಕನ್ನಡಿಗರಾಗಿ ಸರ್ ಎಂದಿದ್ದಾರೆ. ಇದೇ ರೀತಿ ಹಲವರು ರಿಯಾಕ್ಟ್ ಮಾಡಿದ್ದಾರೆ.
MES ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ದಿನವನ್ನು ಕಪ್ಪು ದಿನ ಎಂದು ಆಚರಣೆ ಮಾಡುವವರೆಗೂ ನೀವು ಏನು ಮಾಡುತ್ತಿದ್ದೀರಿ?, ಕರ್ನಾಟಕದಲ್ಲಿ ಇರೋ ಬಿಹಾರಿಗಳು ಇನ್ನೂ ಇಲ್ಲೇ ಇದ್ದಾರೆ.. ಹೀಗೆ ಆದ್ರೆ ಚುನಾವಣೆ ಗೆಲ್ಲೋದು ಕಷ್ಟ, ಅದರ ಬಗ್ಗೆ ಗಮನ ಹರಿಸಿ. ಕನ್ನಡ, ಕನ್ನಡಿಗ ಎಲ್ಲಾ ಆಮೇಲೆ ನೋಡಿದ್ರೆ ಆಯ್ತು ಎಂದು ಮತ್ತೊಬ್ಬ ನೆಟ್ಟಿಗರು ಪರೋಕ್ಷ ವ್ಯಂಗ್ಯವಾಡಿದ್ದಾರೆ.
ಪ್ರದೀಪ್ ಸಾಗರ್ ಎನ್ನುವವರು, ಇಲ್ಲಿ ನಮ್ಮ ನಾಡು ನಮ್ಮ ಹೆಮ್ಮೆ ಅನ್ನೋದು, ಬಿಹಾರದವರಿಗೆ ನಿವೇಶನ ಕೊಡೋದು ಎಂದೂ ಕನ್ನಡಿಗರು ಪ್ರಶ್ನೆ ಮಾಡಿದ್ದಾರೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ











Click it and Unblock the Notifications