ಕನ್ನಡಿಗರಿಗೆ ಅನ್ಯಾಯ, ಕಾರಣ ನೀಡದೆ ಕೆಲಸದಿಂದ ಗೇಟ್ ಪಾಸ್
ಬೆಂಗಳೂರು, ಮಾರ್ಚ್ 13: ನಗರದಲ್ಲಿರುವ ಎಂಎನ್ಸಿಗಳ ಕನ್ನಡ ವಿರೋಧಿ ಧೋರಣೆ ಮುಂದುವರೆದಿದೆ. ಎಲೆಕ್ಟ್ರಾನಿಕ್ ಸಿಟಿಯ ಸಂಸ್ಥೆಯೊಂದು ಏಕಾ-ಏಕಿ ಕನ್ನಡಿಗ ನೌಕರರನ್ನು ಕೆಲಸದಿಂದ ವಜಾಗೊಳಿಸಿದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಎಲೆಕ್ಟ್ರಾನಿಕ್ ಸಿಟಿಯ MRO TECH ಸಂಸ್ಥೆಯಲ್ಲಿ ಈ ರೀತಿಯ ಅನ್ಯಾಯ ನಡೆದಿದ್ದು, ಕನ್ನಡಿಗರಾದ 50 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಕಾರಣ ನೀಡದೇ ಸಂಸ್ಥೆಯಿಂದ ಏಕಾ-ಏಕಿ ಹೊರ ಹಾಕಲಾಗಿದೆ.
ಹಿಂದಿ ಮತ್ತು ತಮಿಳು ಮೂಲದ ನೌಕರರನ್ನು ಮಾತ್ರ ಸಂಸ್ಥೆಯಲ್ಲಿ ಉಳಿಸಿಕೊಂಡು ಸ್ಥಳೀಯರಾದ ಕನ್ನಡದ ನೌಕರರಿಗೆ ಮಾತ್ರ ಗೇಟ್ ಪಾಸ್ ನೀಡಿರುವುದು ನೌಕರರನ್ನು ಕೆರಳಿಸಿದೆ. ಈ ಎಲ್ಲಾ ಯುವಕರು ಏಜೆನ್ಸಿ ಮೂಲಕ ಸಂಸ್ಥೆಗೆ ಸೇರಿದ್ದರು. ಆದರೆ ಈಗ ಸಂಸ್ಥೆಯ ಕನ್ನಡ ವಿರೋಧಿ ನೀತಿಯಿಂದ ಬೀದಿಗೆ ಬಂದಿದ್ದಾರೆ.

ಈ ನೌಕರರು ಕೆಲಸಕ್ಕೆ ಸೇರಬೇಕಾದರೆ ಸಂಸ್ಥೆಯು ಆಫರ್ ಲೆಟರ್ , ಐಡಿ ಕಾರ್ಡ್ ಸಹ ಕೊಟ್ಟಿರಲಿಲ್ಲ, ಅಷ್ಟೆ ಅಲ್ಲ ನೌಕರರಿಗೆ ಕಾನೂನು ರೀತ್ಯಾ ನೀಡಬೇಕಾದ ಭತ್ಯೆಗಳು ಮುಂತಾದವುಗಳನ್ನು ನೀಡದೇ ಹಾಗೆಯೇ ದುಡಿಸಿಕೊಳ್ಳುತ್ತಿದ್ದರು ಆದರೆ ಈಗ ವಿನಾ ಕಾರಣ ಕನ್ನಡಿಗರನ್ನು ಸಂಸ್ಥೆಯಿಂದ ಹೊರ ಹಾಕಲಾಗಿದೆ.

ಕೆಲಸದಿಂದ ತೆಗೆದುದ್ದನ್ನು ವಿರೋಧಿಸಿ ನೌಕರರು ಇಂದು ಕಂಪೆನಿ ಮುಂದೆ ಜಮಾಯಿಸಿ ಪ್ರತಿಭಟನೆ ಮಾಡಿದರು. ಸಂಸ್ಥೆಯ ವ್ಯವಸ್ಥಾಪಕರೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸಿದರಾದರೂ ಅದು ಸಾಧ್ಯವಾಗಲಿಲ್ಲ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications