ಈ ಭಾಗಕ್ಕೆ ಯಾವುದೇ ಕಾರಣಕ್ಕೂ ನಮ್ಮ ಮೆಟ್ರೋ ವಿಸ್ತರಣೆ ಬೇಡ: ಕನ್ನಡಿಗರ ಆಗ್ರಹ!
ಕನ್ನಡಿಗರ ವಿರೋಧದ ನಡುವೆಯೂ ಕರ್ನಾಟಕ - ತಮಿಳುನಾಡಿನ ಸಮೀಪದ ಪ್ರದೇಶಗಳಲ್ಲಿ ನಮ್ಮ ಮೆಟ್ರೋ ವಿಸ್ತರಣೆಗೆ ಮುಂದಾಗಿರುವುದಕ್ಕೆ ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ತಮಿಳುನಾಡಿನ ಹೊಸೂರಿಗೆ ನಮ್ಮ ಮೆಟ್ರೋ ವಿಸ್ತರಣೆ ಮಾಡಬೇಕು ಎನ್ನುವ ಪ್ರಸ್ತಾವನೆಗೆ ಕನ್ನಡಿಗರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೆ ಇಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಭಾರೀ ಅಸಮಾಧಾನಕ್ಕೆ ಕಾರಣವಾಗಿದೆ.
ಕರ್ನಾಟಕ ದೃಷ್ಟಿಯಿಂದ ಈ ನಿರ್ಧಾರವು ಪ್ರಶಸ್ತವಾಗಿದೆ. ಯಾವ ಕಾರಣಕ್ಕೂ ಬೊಮ್ಮಸಂದ್ರದಿಂದ ಅತ್ತಿಬೆಲೆ/ಹೊಸೂರು ಕಡೆಗೆ #ನಮ್ಮ_ಮೆಟ್ರೊ ಹೋಗಲೇ ಬಾರದು. ಹಾಗೇನಾದರೂ ಆದರೆ, ಬೆಂಗಳೂರು ಮತ್ತು ತನ್ಮೂಲಕ ಕರ್ನಾಟಕದ ಔದ್ಯಮಿಕ ಬೆಳವಣಿಗೆಗೆ ನಮ್ಮ ರಾಜ್ಯ ಸರ್ಕಾರವೇ ಎಳ್ಳು-ನೀರು ಬಿಟ್ಟಂತಾಗುತ್ತದೆ. ಬಿಜೆಪಿ ಸರ್ಕಾರವಿದ್ದಾಗ ಆಗಿನ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೊಸೂರು ಭಾಗದ ತಮಿಳುನಾಡಿನ ಲೋಕಸಭಾ ಸದಸ್ಯರನ್ನು ಕರೆದುಕೊಂಡು ಹೋಗಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಬೊಮ್ಮಸಂದ್ರದಿಂದ ಹೊಸೂರಿಗೆ ಮೆಟ್ರೊ ವಿಸ್ತರಣೆ ಆಗಲೆಂದು ಡಿಪಿಆರ್ ಮಾಡಿಸಲು ಒಪ್ಪಿಗೆ ಕೊಡಿಸಿದ್ದರು.

ಕನ್ನಡಪರರು ಸಮಯೋಚಿತವಾಗಿ ವರ್ತಿಸಿ ವ್ಯಾಪಕವಾಗಿ ಖಂಡಿಸಿದ್ದರು. ಈಗಲಾದರೂ ನಮ್ಮ ರಾಜ್ಯದ ರಾಜಕೀಯ ನಾಯಕರುಗಳು ಎಚ್ಚೆತ್ತುಕೊಳ್ಳಲಿ. ಇಷ್ಟೇ ಸಾಲದು. ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಮರುಜೀವ ಕೊಡಬೇಕು. ಇಲ್ಲವಾದರೆ ತಮಿಳುನಾಡು ಸರ್ಕಾರ ಹೊಸೂರಿನಲ್ಲಿ ವಿಮಾನ ನಿಲ್ದಾಣ ಮಾಡಿ ನಮಗೆ ಮರ್ಮಾಘಾತ ಕೊಡುವುದು ನಿಶ್ಚಿತ ಎಂದು ಸಿ.ಎಸ್.ಲಕ್ಷ್ಮೀಶ ಎನ್ನುವವರು ಧ್ವನಿ ಎತ್ತಿದ್ದಾರೆ. ಈಗಾಗಲೇ ಮೆಟ್ರೋ ಯೆಲ್ಲೋ ಲೈನ್ನಿಂದಾಗಿ ತಮಿಳುನಾಡಿಗೆ ಸಾಕಷ್ಟು ಅನುಕೂಲವಾಗಿದೆ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಈ ರೀತಿ ಇರುವಾಗಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸಕಾರಾತ್ಮಕವಾಗಿ ಈ ವಿಚಾರವಾಗಿ ಮಾತನಾಡಿರುವುದು ಭಾರೀ ವಿರೋಧಕ್ಕೆ ಕಾರಣವಾಗಿದೆ.
ಪ್ರಸ್ತಾವನೆ ಕೈಬಿಡಲಾಗಿತ್ತು: ಇನ್ನು ಸರಿಯಾಗಿ ಇಂದಿಗೆ ಒಂದು ವರ್ಷದ ಮುಂಚೆ ಬೆಂಗಳೂರು ನಮ್ಮ ಮೆಟ್ರೋ ಯೋಜನೆಯನ್ನು ತಮಿಳುನಾಡಿಗೆ ವಿಸ್ತರಿಸಬೇಕು ಎನ್ನುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರವು ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಗೆ ಕನ್ನಡಿಗರಿಂದ ತೀವ್ರವಾದ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ ಅಂದೇ ನಾವು ತಮಿಳುನಾಡಿನ ಭಾಗಕ್ಕೆ ನಮ್ಮ ಮೆಟ್ರೋ ಯೋಜನೆಯನ್ನು ವಿಸ್ತರಣೆ ಮಾಡುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿತ್ತು. ಆದರೆ, ಇದೀಗ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ನಮ್ಮ ಮೆಟ್ರೋ ಯೋಜನೆಯನ್ನು ಅತ್ತಿಬೆಲೆ ವರೆಗೂ ವಿಸ್ತರಣೆ ಮಾಡುವುದಕ್ಕೆ ಪರಿಶೀಲನೆ ಮಾಡುವುದಾಗಿ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ











Click it and Unblock the Notifications