ಮರಾಠಿ ಸಂಘಟನೆಗಳ ವಿರುದ್ಧ ಕ್ರಮಕ್ಕೆ ಕನ್ನಡಪರ ಸಂಘಟನೆ ಒಕ್ಕೂಟ ಆಗ್ರಹ
ಬೆಂಗಳೂರು, ಅಕ್ಟೋಬರ್ 27: ಎಂಇಎಸ್ ಮರಾಠಿ ಸಂಘಟನೆಯು ರಾಜ್ಯವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದೆ ಒಂದೊಮ್ಮೆ ನವೆಂಬರ್ 1ರಂದು ನಡೆಯುವ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಜಿಪಿ ವಿಶ್ವನಾಥ್ ಹೇಳಿದ್ದಾರೆ.
ನ.1ರ ರಾಜ್ಯೋತ್ಸವ ಸಾಂಸ್ಕೃತಿಕ ಮೆರವಣಿಗೆಗೆ ಸಜ್ಜಾಗಿದೆ ಮಲ್ಲೇಶ್ವರ
ಶನಿವಾರ ಪ್ರೆಸ್ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕನ್ನಡ ರಾಜ್ಯೋತ್ಸವದ ದಿನದಂದು ಬೆಳಗಾವಿಯಲ್ಲಿ ಕರಾಳ ದಿನವನ್ನು ಮರಾಠಿ ಸಂಘಟನೆಗಳು ನಡೆಸಲು ನಿರ್ಧರಿಸಿವೆ ಯಾವುದೇ ಕಾರಣಕ್ಕೂ ಅವರಿಗೆ ಅವಕಾಶ ನೀಡಬಾರದು ಒಂದೊಮ್ಮೆ ಅವಕಾಶ ನೀಡಿದ್ದೇ ಆದಲ್ಲಿ ಸಂಘಟನೆಗೆ ಮಸಿ ಬಳಿಯುವ ಕೆಲಸವನ್ನು ನಾವು ಮಾಡಬೇಕಾಗುತ್ತದೆ ಎಂದರು.
ಬೆಳಗಾವಿಯೇ 2ನೇ ರಾಜಧಾನಿಯಾಗಲಿ, ಅದಕ್ಕೂ ಮುನ್ನ ಮುಖ್ಯಮಂತ್ರಿಗಳೇ..
ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕರಾಳ ದಿನಾಚರಣೆಗೆ ಅನುಮತಿ ನೀಡಬಾರದು, ಎಂಇಎಸ್ ಸಂಘಟನೆ ರಾಜ್ಯದಲ್ಲಿ ನಿಷೇಧ ಮಾಡಬೇಕು, ಕರಾಳ ದಿನಕ್ಕೆ ಒಂದೊಮ್ಮೆ ಅನುಮತಿ ನೀಡಿದರೆ ಉಗ್ರ ಹೋರಾಟ ನಡೆಸಲಾಗುತ್ತದೆ.
ಬೆಳಗಾವಿ: ಎಂಇಎಸ್ ಶಾಸಕನಿಂದ ಕಾಂಗ್ರೆಸ್ ನಾಯಕಿಗೆ ಆವಾಜ್
ನವೆಂಬರ್ 1ರಂದು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಿಂದ ಬೆಳಗಾವಿ ಚೆನ್ನಪ್ಪ ಸರ್ಕಲ್ ವರೆಗೆ ಜಾತಾ ಹಮ್ಮಿಕೊಳ್ಳಲಾಗಿದೆ. ಕನ್ನಡ ರಾಜ್ಯೋತ್ಸವ ಆಚರಣೆಗೆ ತೊಂದರೆ ನೀಡಲು ಮುಂದಾದರೆ ಉಗ್ರ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.