Get Updates
Get notified of breaking news, exclusive insights, and must-see stories!

Bengaluru Karaga: ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ, 5 ಲಕ್ಷಕ್ಕೂ ಹೆಚ್ಚು ಜನರ ನಿರೀಕ್ಷೆ

ಬೆಂಗಳೂರು, ಏಪ್ರಿಲ್. 06: ಐತಿಹಾಸಿಕ ಬೆಂಗಳೂರಿನ ಪ್ರಮುಖ ಕರಗ ಉತ್ಸವಕ್ಕೆ 5 ಲಕ್ಷಕ್ಕೂ ಹೆಚ್ಚು ಜನರು ಸಾಕ್ಷಿಯಾಗುವ ನಿರೀಕ್ಷೆಯಿದೆ. ಕರಗಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಹಿಂದೂ ಪಂಚಾಂಗದ ಪ್ರಕಾರ ಚಿತ್ರ ಪೌರ್ಣಮಿಯಂದು ಗುರುವಾರ ಮಧ್ಯರಾತ್ರಿ ತಿಗಳರಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಲಿದೆ.

ಈಗಾಗಲೇ ಗುರುವಾರ ಬೆಳಗ್ಗೆ 10.30 ಕ್ಕೆ ಕಬ್ಬನ್ ಪಾರ್ಕ್‌ನಲ್ಲಿರುವ ಕರಗದ ಕುಂಟೆಯಲ್ಲಿ ದ್ರೌಪದಿ ದೇವಿಗೆ ಅರಿಶಿನ ಬಣ್ಣದ ಸೀರೆ ಉಟ್ಟು ಬಳೆಗಳನ್ನು ತೊಟ್ಟ ಕರಗ ಹೊತ್ತ ಅರ್ಚಕರು ಗಂಗಾಪೂಜೆ ಸಲ್ಲಿಸಿದ್ದಾರೆ. ಇಲ್ಲಿಂದ ಹಸಿ ಕರಗವನ್ನು ಮಂಟಪಕ್ಕೆ ತಂದು ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಗುರುವಾರ ಮಧ್ಯರಾತ್ರಿ 12.30ಕ್ಕೆ ಕರಗದ ಮೆರವಣಿಗೆ ದೇವಸ್ಥಾನದಿಂದ ಹೊರ ಬರಲಿದೆ.

Bengaluru Karaga: More Than 5 lakh People to Witness Karaga Festival

ಪ್ರತಿ ವರ್ಷ ಲಕ್ಷಾಂತರ ಮಂದಿ ಕರಗವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಈ ಇತಿಹಾಸ ಪ್ರಸಿದ್ಧ ಕರಗವನ್ನು ಕೊರೊನಾ ಸಮಯದಲ್ಲಿ ಜನರ ದರ್ಶನಕ್ಕೆ ಅವಕಾಶ ನಿಡದೇ ನಡೆಸಲಾಗಿತ್ತು. ಕೋವಿಡ್ ಬಳಿಕ ಮತ್ತೆ ಕರಗ ಉತ್ಸವಕ್ಕೆ ಹೊಸ ಚೈತನ್ಯ ಬಂದಿದ್ದು, ಜನರು ಉತ್ಸಾಹದಿಂದ ಈ ಹಬ್ಬದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಲಕ್ಷಾಂತರ ಜನರು ಭಾಗವಹಿಸುವ ಕಾರಣ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಲಾಗಿದೆ. ಕರಗ ಮೆರವಣಿಗೆಗೆ ಸುಮಾರು 6 ರಿಂದ 8 ಲಕ್ಷ ಜನರು ಸೇರುವ ನಿರೀಕ್ಷೆಯಿದೆ ಎಂದು ಕರಗಹ ಸಮಿತಿ ಮಾಹಿತಿ ನೀಡಿದೆ.

ಹೆಚ್ಚಿನ ಜನ ಸೇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಕರಗ ಉತ್ಸವಕ್ಕೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಲವು ಕಡೆಗಳಲ್ಲಿ ಸಿಸಿ ಕ್ಯಾಮರಾಗಳ ಅಳವಡಿಸಲಾಗಿದೆ. ಕರಗ ಹೊರಡುವ ಮಾರ್ಗದ ರಸ್ತೆ, ಪಾದಚಾರಿ ಮಾರ್ಗಗಳು, ಒಳಚರಂಡಿಗಳ ದುರಸ್ಥಿ ಕಾರ್ಯ ನಡೆಸಲಾಗಿದೆ. ಉತ್ಸವಕ್ಕೆ ಬರುವ ಸಾರ್ವಜನಿಕರ ಉಪಯೋಗಕ್ಕಾಗಿ ಇ-ಶೌಚಾಲಯಗಳ ವ್ಯವಸ್ಥೆ ಮಡಲಾಗಿದೆ. ಸಂಚಾರ ದಟ್ಟಣೆಯಾಗದಂತೆ ವಾಹನಗಳ ನಿಲುಗಡೆಗೆ ಸ್ಥಳಗಳನ್ನು ನಿಗದಿ ಪಡಿಸಲಾಗಿದೆ.

Bengaluru Karaga: More Than 5 lakh People to Witness Karaga Festival

ಪುಷ್ಪ ಕರಗವನ್ನು ಕಳೆದ 12 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಅರ್ಚಕ ಜ್ಞಾನೇಂದ್ರ ವಹ್ನಿಕುಲ ಗೌಡ ಅವರು ಈ ಬಾರಿಯೂ ನೆರವೇರಿಸಲಿದ್ದಾರೆ. ಕರಗದ ಮೆರವಣಿಗೆಯು ಕಬ್ಬನ್‌ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ, ಬಳೆಪೇಟೆ, ದೊಡ್ಡಪೇಟೆ, ಕುಂಬಾರಪೇಟೆ, ಗೊಲ್ಲರಪೇಟೆ, ಹಲಸೂರು, ಕೆಆರ್‌ಮಾರುಕಟ್ಟೆ, ಕಾಟನ್‌ಪೇಟೆ ಮತ್ತಿತರ ಪ್ರದೇಶಗಳಲ್ಲಿ ಸುಮಾರು 38 ಕಿ.ಮೀ. ಸಂಚರಿಸಲಿದೆ. 10 ಸಾವಿರಕ್ಕೂ ಹೆಚ್ಚು ಮಹಿಳಾ ಭಕ್ತರು ಆರತಿ ದೀಪೋತ್ಸವವನ್ನು ನೆರವೇರಿಸಲಿದ್ದಾರೆ.

ಹಜರತ್ ತವಕ್ಕಲ್ ಮಸ್ತಾನ್ ಸಾಹೇಬ್ ದರ್ಗಾಕ್ಕೆ ಕೆಗ ತೆರಳುವುದಕ್ಕೆ ಕೆಲವು ಬಲಪಂಥೀಯ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ. ಆದರೆ, ಇದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿರುವ ಪದ್ಧತಿಯಾಗಿದ್ದು, ಧಾರ್ಮಿಕ ಸೌಹಾರ್ದತೆಯ ದ್ಯೋತಕವಾಗಿದ್ದು, ಯಾವುದೇ ಬದಲಾವಣೆಯಿಲ್ಲದೆ ಆಚರಣೆ ಮುಂದುವರಿಯಲಿದೆ ಎಂದು ಬೆಂಗಳೂರು ಕರಗ ಸಮಿತಿ ಸ್ಪಷ್ಟಪಡಿಸಿದೆ.

ಕರಗ ಮೆರವಣಿಗೆ ನಡೆಯುವ ದಾರಿಯಲ್ಲಿ ಹಿಂದೂ ದೇವಾಲಯಗಳಿಗೆ ಹೇಗೆ ಭೇಟಿ ನೀಡುತ್ತದೋ ಹಾಗೆಯೇ ಕರಗ ದರ್ಗಾಕ್ಕೂ ಭೇಟಿ ನೀಡಲಿದೆ ಎಂದು ಬೆಂಗಳೂರು ಕರಗ ಸಮಿತಿ ಸದಸ್ಯರು ತಿಳಿಸಿದ್ದಾರೆ. ಯಾವುದೇ ರಾಜಕೀಯ ಭಾಷಣ ಅಥವಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಬಾರದು ಎಂದು ಸಂಘಟಕರಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+