ಕನ್ನಡಿಗರಿಗೆ ಉದ್ಯೋಗ ಮೀಸಲು ಮಸೂದೆ: ಉದ್ಯಮಿಗಳ ವಿರುದ್ಧ ಕರವೇ ಪ್ರತಿಭಟನೆ
ಬೆಂಗಳೂರು, ಜುಲೈ 18: ಕರ್ನಾಟಕ ಸರ್ಕಾರವು ರಾಜ್ಯದ ಖಾಸಗಿ ವಲಯದಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿಗೆ ತರುವ ಮಸೂದೆ ಅನುಮೋದಿಸಿತ್ತು. ಆದರೆ ಅದನ್ನು ವಿರೋಧಿಸಿದ್ದ ಉದ್ಯಮಿಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸೇರಿದಂತೆ ಕನ್ನಡಪರ ಹೋರಾಟಗಾರು, ಕಾರ್ಯಕರ್ತರು ಗುರುವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಚಿತ್ರ ನಿರ್ಮಾಪಕ, ಕನ್ನಡಪರ ಹೋರಾಟಗಾರ ಸಾ.ರಾ.ಗೋವಿಂದು ಅವರ ನೇತೃತ್ವದಲ್ಲಿ ಹಾಗೂ ಕರವೇ ಪ್ರಮುಖರು ಮತ್ತು ಕನ್ನಡಪರ ಕಾರ್ಯಕರ್ತರು ಕೂಡಿಕೊಂಡು ಮಲ್ಲೇಶ್ವರಂ ನಲ್ಲಿರುವ ಕುವೆಂಪು ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಹಾಗೂ ಉದ್ಯಮಿಗಳ ವಿರುದ್ಧ ಆಕ್ರೋಶ ಹೊರ ಹಾಕಿದರು.

ಕರ್ನಾಟಕದ ಖಾಸಗಿ ರಂಗದಲ್ಲಿ ಕನ್ನಡಿಗರಿಗೆ ಶೇಕಡಾ 50-75ರಷ್ಟು ಉದ್ಯೋಗ ಕಡ್ಡಾಯ ಮೀಸಲಿಡುವ ಮಸೂದೆಯನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿತ್ತು. ಅಧಿವೇಶನದಲ್ಲಿ ಮಂಡನೆ ಮಾಡಿ ಒಪ್ಪಿಗೆ ಪಡೆಯುವುದಿತ್ತು.
ಉದ್ಯಮಿಗಳ ವಿರೋಧ: ಮಸೂದೆ ವಾಪಾಸ್
ಅಷ್ಟರಲ್ಲಾಗಲೇ ಉದ್ಯಮಿಗಳಾದ ಕಿರಣ್ ಮಜುಂದಾರ್ ಹಾಗೂ ಮೋಹನ್ ದಾಸ್ ಪೈ ಅವರು ಸರ್ಕಾರದ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಬೆದರಿದ ರಾಜ್ಯ ಸರ್ಕಾರ, ಸಂಭಾವ್ಯ ವಿರೋಧ ತಡೆಗೆಯಲು ಅನುಮೋದನೆ ನೀಡಿದ್ದ ಬಿಲ್ ಗೆ ತಡೆ ನೀಡಿದ್ದಾರೆ. ಇದು ಪ್ರಾಥಮಿಕ ಹಂತದಲ್ಲಿದೆ ಮುಂದಿನ ಸಂಪುಟ ಸಭೆಯಲ್ಲಿ ಕೂಲಂಕುಷವಾಗಿ ಚರ್ಚಿಸಿ ಅಂತಿಮ ನೀರ್ಧಾರಕ್ಕೆ ಬರಲಾಗುವುದು ಎಂದು ಖುದ್ದು ಸಿದ್ದರಾಮಯ್ಯ ಅವರೇ ಹೇಳಿದರು. ಇದನ್ನು ಸಂಪುಟ ಸದಸ್ಯರು ಸ್ವಾಗತಿಸಿದ್ದಾರೆ.

ಕನ್ನಡಿಗರ ಪರವಾದ ನಿಲುವು, ನಿರ್ಧಾರ ಕೈಗೊಂಡ ಸಂದರ್ಭದಲ್ಲಿ ಈ ಉದ್ಯಮಿಗಳು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದನ್ನು ಖಂಡಿಸಿ ಕರವೇ ಕಾರ್ಯಕರ್ತರು ಹಾಗೂ ಕನ್ನಡಪರ ಹೋರಾಟಗಾರರು ನಗರದಲ್ಲಿ ಪ್ರತಿಭಟಿಸಿದರು. ಮಸೂದೆ ವಾಪಸ್ ಮಾಡದೇ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.
ಕನ್ನಡಿಗರ ಸ್ವಾಭಿಮಾನ ಕೆಣಕಿದ ಉದ್ಯಮಿದಾರರಿಗೆ ಧಿಕ್ಕಾರ
ಕನ್ನಡ ನೆಲದಲ್ಲಿ ಕನ್ನಡಿಗರೇ ಸಾರ್ವಭೌಮರು. ಕನ್ನಡ ನಾಡಿನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಲು ಇತರರ ಹಂಗೇಕೆ ಎಂದು ಸರ್ಕಾರವನ್ನು ಪ್ರಶ್ನಿಸಿದರು. 'ಕನ್ನಡಿಗರ ಸ್ವಾಭಿಮಾನ ಕೆಣಕಿದ ಉದ್ಯಮಿದಾರರಿಗೆ ಧಿಕ್ಕಾರ' ಎಂದು ನಾಮಫಲಕ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ಅಷ್ಟರಲ್ಲಾಗಲೇ ಸ್ಥಳದಲ್ಲಿದ್ದ ಪೊಲೀಸರು ಸುರಕ್ಷತಾ ದೃಷ್ಟಿಯಿಂದ, ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಘಟನೆ ನಡೆಯಿತು. ಈ ವೇಳೆ ಕನ್ನಡ ಚಳವಳಿಗಾರರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದದ್ದು ಕಂಡು ಬಂತು.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications