'ಹಿಂದಿ ದಿವಸ್' ವಿರುದ್ಧ ಬೆಂಗಳೂರಿನಲ್ಲಿ ಕರವೇ ಪ್ರತಿಭಟನೆ
ಬೆಂಗಳೂರು, ಸೆಪ್ಟಂಬರ್ 13: ಕೇಂದ್ರ ಸರ್ಕಾರವು ಕರ್ನಾಟಕ ಸೇರಿದಂತೆ ಹಿಂದಿಯೇತರ ರಾಜ್ಯಗಳಲ್ಲಿ ಸೆಪ್ಟಂಬರ್ 14ರಂದು ನಡೆಸುವ 'ಹಿಂದಿ ದಿವಸ್' ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಯಲಿದೆ.
ಸೆಪ್ಟಂಬರ್ 14ರಂದು ಬೆಳಗ್ಗೆ 11ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರ ಟಿ.ಎ.ನಾರಾಯಣಗೌಡ ಬಣದಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಲಿದೆ. ಕರ್ನಾಟಕದಲ್ಲಿ ಹಿಂದಿ ದಿವಸ್ ಆಚರಣೆ ವಿರುದ್ಧ ಕರವೇ, ಬೆಂಗಳೂರಿನ ಬನವಾಸಿ ಬಳಗ ಸೇರಿದಂತೆ ವಿವಿಧ ಸಂಘಟನೆಗಳಿಂದ ಹಲವು ಕಾರ್ಯಕ್ರಮ, ಪ್ರತಿಭಟನೆ ಆಯೋಜಿಸಲಾಗಿದೆ.
ಈ ಪ್ರಕಟಣೆ ಹೊರಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರ ಟಿ.ಎ. ನಾರಾಯಣಗೌಡರು, ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ದೇಶ ರಚನೆಯಾಗಿದೆ. ಸ್ವಾತಂತ್ರ್ಯಾ ನಂತರ ಆಡಳಿತಕ್ಕೆ ಬಂದ ಎಲ್ಲ ಪಕ್ಷಗಳ ಕೇಂದ್ರ ಸರ್ಕಾರಗಳು ಹಿಂದಿಯೇತರ ರಾಜ್ಯಗಳಲ್ಲಿ 'ಹಿಂದಿ ದಿವಸ್' ಹೆಸರಿನಲ್ಲಿ ಸೆಪ್ಟಂಬರ್ ತಿಂಗಳು 'ಹಿಂದಿ ಸಪ್ತಾಹ' ವನ್ನು ಆಚರಿಸುತ್ತಾ ಬಂದಿದೆ ಎಂದರು.

ಹಿಂದಿ ವಿರುದ್ಧ ಕರವೇ 25 ವರ್ಷ ಪ್ರತಿಭಟನೆ
ಇದೇ ವಿಚಾರವಾಗಿ ಕಳೆದ 25 ವರ್ಷಗಳ ಕರ್ನಾಟಕ ರಕ್ಷಣಾ ವೇದಿಕೆ ಕೇಂದ್ರ ಸರ್ಕಾರದ ಹಿಂದಿ ಸಪ್ತಾಹ ವಿರೋಧಿಸಿ ಹೋರಾಟ, ಪ್ರತಿಭಟನೆಗಳನ್ನು ಮಾಡಿಕೊಂಡು ಬಂದಿದೆ. ಇದು ಮುಂದುವರಿದಿದ್ದು, ಬುಧವಾರ ಸಹ ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಸರ್ಕಾರ ಹಿಂದಿಯೇತರ ಕರ್ನಾಟಕ ರಾಜ್ಯದಲ್ಲಿ ಹಿಂದಿ ದಿವಸ್ ಆಚರಿಸಬಾರದು ಎಂದು ಅವರು ಆಗ್ರಹಿಸಿದರು.
ಸೆಪ್ಟೆಂಬರ್ 14ರಂದು 'ಹಿಂದಿ ದಿವಸ್' ಆಚರಣೆ ಕುರಿತು ಬೆಂಗಳೂರಿನ ಬನವಾಸಿ ಬಳಗ ವತಿಯಿಂದ ಹಿಂದಿ ಹೇರಿಕೆಯ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಗರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ 'ಹಿಂದಿ ಹೇರಿಕೆ ಮತ್ತು ನುಡಿ ಸಮಾನತೆ: ಒಂದು ಮಾತುಕತೆ' ಸಮಾರಂಭ ನಡೆಯಿತು. 'ಹಿಂದಿ ಹೇರಿಕೆ ಮೂರು ಮಂತ್ರ- ನೂರು ತಂತ್ರ' ಹೊತ್ತಿಗೆಯ ಬರಹಗಾರರ ಆನಂದ್ ಅವರೊಂದಿಗೆ ಮಾತುಕತೆ ನಡೆಯಿತು.

ಒಂದು ಭಾಷೆ ಮೆಲಿಟ್ಟರೆ ಇತರ ಭಾಷೆಗೆ ಕಂಟಕ
ಈ ವೇಳೆ ಮಾತನಾಡಿದ ಆನಂದ್ ಅವರು, ಸಮಾನತೆಯೇ ಜೀವಾಳವಾದ ಭಾರತೀಯ ಸಂವಿಧಾನಕ್ಕೆ ಅಂಟಿಕೊಂಡಿರುವ ಅಸಮಾನತೆಯ ಕಳಂಕವೆಂದರೆ ಭಾರತದ ಇಂದಿನ ಭಾಷಾನೀತಿ. ಬಹುಭಾಷಿಕ ನಾಡುಗಳಲ್ಲಿ ಯಾವುದೇ ಒಂದು ಭಾಷೆಯನ್ನು ಇತರವುಗಳಿಗಿಂತ ಮೇಲೇರಿಸಿದರ, ಅದು ಉಳಿದ ನುಡಿಗಳಿಗೆ ಕಂಟಕವಾಗುವ ಅಪಾಯವಿದೆ. ಭಾರತದ ಸ್ಥಿತಿ ಹೀಗೆ ಆಗಿದೆ ಎಂದು ಅವರು ವಿವರಿಸಿದರು.
ಈ ಹಿನ್ನೆಲೆಯಲ್ಲಿ ಯಾವ ಅಸಮಾನತೆಯನ್ನು ಭಾರತ ಸರ್ಕಾರ ಹಬ್ಬವೆಂಬಂತೆ ಆಚರಿಸಿಕೊಂಡು ಬರುತ್ತಿದೆಯೋ ಅದರ ಕೆಡುಕುಗಳನ್ನು ಸರಿಪಡಿಸಿಕೊಳ್ಳುವ ಬಗ್ಗೆ ಪ್ರಜ್ಞಾವಂತ ಭಾರತೀಯರೆಲ್ಲರೂ ಆಲೋಚಿಸಬೇಕಾಗಿದೆ. ನುಡಿ ಸಮಾನತೆಯನ್ನು ಎತ್ತಿ ಹಿಡಿಯುವ ಭಾಷಾನೀತಿಯ ಬಗ್ಗೆ ನಾವೆಲ್ಲರೂ ಇಂದು ಅರಿಯಬೇಕು. ಅದರ ಕುರಿತು ಮಾತನ್ನಾಡುವ ಅಗತ್ಯ ಮೊದಲಿಗಿತಂಲೂ ಈಗ ಹೆಚ್ಚಾಗಿದೆ ಎಂದು ಅವರು ಪ್ರತಿಪಾದಿಸಿದರು
ಹಿಂದಿ ವಿರೋಧದ ನಡುವೆ ಕನ್ನಡವನ್ನು ಕಟ್ಟಿಕೊಳ್ಳಲು ನುಡಿ ಹಮ್ಮುಗೆಯೊಂದನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯ ಇರುವುದನ್ನು ನಾವಿಂದು ಮನಗಾಣಬೇಕಿದೆ. ಈ ನಿಟ್ಟಿನಲ್ಲಿ 'ನುಡಿ ಹಮ್ಮುಗೆ:ಇದು ಕನ್ನಡಕ್ಕೊಂದು ಕೈದೀವಿಗೆ' ಎಂಬ ಕೃತಿ ಬಿಡುಗಡೆಗೊಳಿಸಲಾಯಿತು ಎಂದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications