ರಾಜಧಾನಿಯಲ್ಲಿ ಅನ್ನದಾತರ ಪ್ರತಿಭಟನೆ: ಆಳುವ ಜನರಿಗೆ ವಿವೇಕ ಬರಲಿ: ಕರವೇ ಗೌಡ್ರ ಪೋಸ್ಟ್
ಬೆಂಗಳೂರು, ನ 30: ನೂತನ ಕೃಷಿ ಕಾಯಿದೆಗಳನ್ನು ವಿರೋಧಿಸಿ ರಾಜಧಾನಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮತ್ತು ಸರಕಾರ ಅದನ್ನು ನಿಭಾಯಿಸುತ್ತಿರುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಬೇಸರ ವ್ಯಕ್ತ ಪಡಿಸಿದ್ದಾರೆ.
ಈ ಬಗ್ಗೆ ನಾರಾಯಣ ಗೌಡ್ರು ಸಾಮಾಜಿಕ ತಾಣದಲ್ಲಿ ಬರೆದಿದ್ದು ಹೀಗೆ, "ದೇಶದ ಅನ್ನದಾತ ರೈತರು ಕೇಂದ್ರ ಸರ್ಕಾರದ ಮೂರು ಹೊಸ ಕೃಷಿ ಕಾನೂನುಗಳನ್ನು ಹಿಂದಕ್ಕೆ ಪಡೆಯಲು ಒತ್ತಾಯಿಸಿ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಸಿದ ಹೊಟ್ಟೆಗಳಿಗೆ ಅನ್ನ ನೀಡುವ ರೈತರ ಕೂಗಿಗೆ ಒಕ್ಕೂಟ ಸರ್ಕಾರ ಕಿವಿಗೊಡಬೇಕು" ಎಂದು ಗೌಡ್ರು ಆಗ್ರಹಿಸಿದ್ದಾರೆ.
"ಕಾನೂನುಗಳನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು. ಕೃಷಿ ಕ್ಷೇತ್ರವನ್ನು ಕಾರ್ಪೊರೇಟ್ ಶಕ್ತಿಗಳ ಕೈಗೆ ನೀಡುವ ಅಪಾಯಕಾರಿ ಅಂಶಗಳು ಹೊಸದಾಗಿ ಜಾರಿಯಾದ ಕೃಷಿ ಕಾನೂನುಗಳಲ್ಲಿ ಇವೆ ಎಂಬುದು ರೈತರ ಆರೋಪ. ರೈತರು ಯಾರ ಅಡಿಯಾಳಾಗಿರಲು ಇಷ್ಟಪಡುವುದಿಲ್ಲ. ಕಾರ್ಪೊರೇಟ್ ಶಕ್ತಿಗಳು ತಮ್ಮನ್ನು ನಿಯಂತ್ರಿಸುವುದು ಅವರಿಗೆ ಬೇಕಾಗಿಲ್ಲ".

"ದೆಹಲಿ ಹೊರವಲಯ, ಗಡಿಗಳಲ್ಲಿ ಲಕ್ಷಾಂತರ ರೈತರು ಚಳಿಗೆ, ಕೋವಿಡ್ ಗೆ ಬೆದರದೇ ಬೀಡುಬಿಟ್ಟಿದ್ದಾರೆ. ಅವರ ಮೇಲೆ ಪೊಲೀಸರು ಜಲಫಿರಂಗಿಗಳನ್ನು ಬಳಸಿದ್ದಾರೆ. ಪೊಲೀಸರ ದೌರ್ಜನ್ಯಗಳನ್ನು ಸಹಿಸಿಯೂ ರೈತರು ಅಲ್ಲಿಂದ ಕದಲುತ್ತಿಲ್ಲ. ಒಕ್ಕೂಟ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಬಾರದು.
ರೈತನು ಉಳಿದರಷ್ಟೇ ದೇಶ ಉಳಿಯಲು ಸಾಧ್ಯ" ಎಂದು ನಾರಾಯಣ ಗೌಡ್ರು ಹೇಳಿದ್ದಾರೆ. "ನೆರೆ, ಬರದಂಥ ಪ್ರಕೃತಿ ವಿಕೋಪಗಳಿಂದ ರೈತ ಕಂಗೆಟ್ಟಿದ್ದಾನೆ. ಹೀಗಿರುವಾಗ ರೈತರನ್ನು ಖಾಸಗಿ ಕಂಪೆನಿಗಳ ಜೀತಕ್ಕೆ ತಳ್ಳುವ ಕಾನೂನುಗಳ ಅವಶ್ಯಕತೆಯಾದರೂ ಏನಿತ್ತು? ಎರಡು ಮೂರು ಖಾಸಗಿ ಕಂಪೆನಿಗಳಿಗಾಗಿ ಕೋಟ್ಯಂತರ ರೈತರು ನರಳುವಂತಾಗಿದೆ".
"ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳುವ ಮುನ್ನ ಒಕ್ಕೂಟ ಸರ್ಕಾರ ಎಚ್ಚೆತ್ತುಕೊಂಡು ಅವರ ಬೇಡಿಕೆ ಈಡೇರಿಸಬೇಕು. ಇಂಥ ಚಳವಳಿಗಳು ಕಾಡ್ಗಿಚ್ಚಿನಂತೆ ಇಡೀ ದೇಶ ಆವರಿಸಿಕೊಂಡರೆ, ಸರ್ಕಾರ ಏನೂ ಮಾಡಲು ಆಗದು. ಈ ವಿವೇಕ ಆಳುವ ಜನತೆಗೆ ಬರಲಿ" ಎಂದು ನಾರಾಯಣ ಗೌಡ್ರು, ಸಾಮಾಜಿಕ ತಾಣದ ಮೂಲಕ ಒತ್ತಾಯಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications