ಹಂ.ಪ.ನಾ ವಿರುದ್ಧದ ಪೊಲೀಸ್ ವಿಚಾರಣೆ ಖಂಡಿಸಿ ಜ.25ಕ್ಕೆ ಕರವೇಯಿಂದ ಖಂಡನಾ ಸಭೆ
ಬೆಂಗಳೂರು, ಜನವರಿ 24: ಸಂಶೋಧಕ ಹಂ.ಪ.ನಾಗರಾಜಯ್ಯ ಅವರ ಬಳಿ ಪೊಲೀಸರು ನಡೆದುಕೊಂಡ ರೀತಿಯನ್ನು ಕರ್ನಾಟಕ ರಕ್ಷಣಾ ವೇದಿಕೆ ಖಂಡಿಸಿದೆ.
ಮಂಡ್ಯ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಭಾಷಣದಲ್ಲಿ ರೈತರಿಗೆ ಸ್ಪಂದಿಸದ ಒಕ್ಕೂಟ ಸರ್ಕಾರವನ್ನು, ಪ್ರಧಾನಮಂತ್ರಿಗಳನ್ನು ಟೀಕಿಸಿದರೆಂಬ ಕಾರಣಕ್ಕೆ ನಾಡಿನ ಹಿರಿಯ ಸಾಹಿತಿ, ಸಂಶೋಧಕ ಹಂ.ಪ.ನಾಗರಾಜಯ್ಯ ಅವರನ್ನು ಪೊಲೀಸ್ ಠಾಣೆಗೆ ಕರೆಯಿಸಿ, ಹೇಳಿಕೆ ಪಡೆದು ಅಪಮಾನಿಸಲಾಗಿದೆ.
ಸುಳ್ಳು ದೂರೊಂದರ ಬಗ್ಗೆ ಪ್ರಾಥಮಿಕ ತನಿಖೆಯನ್ನೂ ಮಾಡದೆ, ಯಾವ ಸಾಕ್ಷ್ಯಾಧಾರಗಳೂ ಇಲ್ಲದೆ ಇದ್ದರೂ 85 ವರ್ಷ ವಯಸ್ಸಿನ ಹಿರಿಯರಾದ ಹಂಪನಾ ಅವರಿಗೆ ಪೊಲೀಸ್ ಠಾಣೆಗೆ ಬರುವಂತೆ ಮಾನಸಿಕ ಕಿರುಕುಳ ನೀಡಲಾಗಿದೆ. ಇದು ಅಕ್ಷಮ್ಯ.

ಈ ಘಟನೆಯನ್ನು ಒಂದು ಆಕಸ್ಮಿಕ ಘಟನೆ ಎಂದು ಪ್ರತ್ಯೇಕವಾಗಿ ನೋಡಲು ಸಾಧ್ಯವಿಲ್ಲ. ಸಾಹಿತಿಗಳು, ಸಂಶೋಧಕರು, ಪತ್ರಕರ್ತರು, ಕಲಾವಿದರು, ಹೋರಾಟಗಾರರನ್ನು ಪೊಲೀಸ್ ಬಲ ಬಳಸಿ ಹತ್ತಿಕ್ಕುವ ದಮನಕಾರಿ ಚಟುವಟಿಕೆಗಳು ದೇಶಾದ್ಯಂತ ನಡೆಯುತ್ತಲೇ ಇವೆ. ನಮ್ಮ ಕರ್ನಾಟಕದಲ್ಲೂ ಈ ದುಷ್ಟಕಾಲ ಆರಂಭವಾದಂತಿದೆ.
ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಗಟ್ಟಿಯಾದ ಧ್ವನಿಯಲ್ಲಿ ಈ ಘಟನೆಯನ್ನು ಖಂಡಿಸಬೇಕಿದೆ, ಸಾಹಿತ್ಯ-ಸಾಂಸ್ಕೃತಿಕ ಜಗತ್ತನ್ನು ಪೊಲೀಸ್ ಬಲದಿಂದ ಹತ್ತಿಕ್ಕಲು ನಾವು ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ಸಾರಬೇಕಿದೆ.
ಈ ಹಿನ್ನೆಲೆಯಲ್ಲಿ 25-1-2021 ಸಂಜೆ 4-30 ಗಂಟೆಗೆ ಬೆಂಗಳೂರಿನ ಗಾಂಧಿನಗರದ 5ನೇ ಮುಖ್ಯರಸ್ತೆಯ ಹೋಟೆಲ್ ಜಿಯಾನ್ ಸಭಾಂಗಣದಲ್ಲಿ ಖಂಡನಾ ಸಭೆ ಏರ್ಪಡಿಸಿದ್ದೇವೆ. ನಾಡಿನ ಹೆಸರಾಂತ ಸಾಹಿತಿಗಳು, ನಿವೃತ್ತ ನ್ಯಾಯಮೂರ್ತಿಗಳು, ಪ್ರಾಜ್ಞರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
Recommended Video
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications