Get Updates
Get notified of breaking news, exclusive insights, and must-see stories!

ಕಾರ್ಗಿಲ್ ಯೋಧ ಕರ್ನಲ್ ಎಂ.ಬಿ. ರವೀಂದ್ರನಾಥ್ ನಿಧನ

ಬೆಂಗಳೂರು, ಏಪ್ರಿಲ್ 09: ಕಾರ್ಗಿಲ್ ಯೋಧ ಕರ್ನಲ್ ಎಂ.ಬಿ.ರವೀಂದ್ರನಾಥ್ (63) ಭಾನುವಾರ ಬೆಂಗಳೂರಿನ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ರವೀಂದ್ರನಾಥ್ ಅವರು ಮೂಲತಃ ದಾವಣಗೆರೆಯವರಾಗಿದ್ದರು. ಜಯನಗರದ 7ನೇ ಬ್ಲಾಕ್‌ನಲ್ಲಿ ವಾಸವಾಗಿದ್ದರು. ಕಾರ್ಗಿಲ್ ಯುದ್ಧದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರವೀಂದ್ರನಾಥ್, ಟೈಗರ್ ಹಿಲ್ಸ್ ತುಕಡಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ದಾವಣಗೆರೆಯ ವಿದ್ಯಾನಗರದ ನಿವಾಸಿಯಾಗಿದ್ದ ಇವರು ಸಮಾಜ ಸೇವಕ ಹೊಳೆಸಿರಿಗೆರೆ ಬಸಪ್ಪ ಅವರ ಪುತ್ರ. ಸೇನೆಯಿಂದ ನಿವೃತ್ತರಾಗಿ ಬೆಂಗಳೂರಿನಲ್ಲಿ ನೆಲೆಸಿದ್ದರು.

Kargil war hero passes away in Bengaluru

ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿರುವ ಮಾಜಿ ಯೋಧ ಮೂಲತಃ ಹರಿಹರ ತಾಲೂಕು ಹೊಳೆಸಿರಿಗೆರೆ ಗ್ರಾಮದವರು. ಟೈಗರ್ ಹಿಲ್ಸ್ ನಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ರವೀಂದ್ರನಾಥ್ ಗೆ 1999ರ ಆಗಸ್ಟ್ 15ರಂದು ವೀರಚಕ್ರ ಪ್ರಶಸ್ತಿ ನೀಡಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+