ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಗತ್ ಸಿಂಗ್ ಪಠ್ಯ ಮರು ಸೇರ್ಪಡೆ, ಎಲ್ಲರ ಹೋರಾಟದ ಫಲ: ಎಚ್‌.ಎನ್. ಸಿತಾರಾ

|
Google Oneindia Kannada News

ಬೆಂಗಳೂರು, ಮೇ.23: "ರಾಜ್ಯದ ಪ್ರಜ್ಞಾವಂತ ಜನತೆ, ಬುದ್ಧಿಜೀವಿಗಳು, ಶಿಕ್ಷಣ ತಜ್ಞರು ಹಾಗೂ ಬಹುಮುಖ್ಯವಾಗಿ ವಿದ್ಯಾರ್ಥಿಗಳ ವ್ಯಾಪಕ ವಿರೋಧ ಹಾಗೂ ಹಲವು ಪ್ರತಿಭಟನೆಗಳ ಫಲವಾಗಿ ಹತ್ತನೇ ತರಗತಿ ಪಠ್ಯಕ್ಕೆ ಭಗತ್ ಸಿಂಗ್ ಕುರಿತ ಪಾಠವನ್ನು ಈಗ ಮರು ಸೇರ್ಪಡೆ ಮಾಡಲಾಗಿದೆ," ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ ರಾಜ್ಯ ಕಚೇರಿ ಕಾರ್ಯದರ್ಶಿ ಸಿತಾರಾ ಹೆಚ್.ಎನ್. ಹೇಳಿದರು.

ಈ ಜಯ ಜನತೆಯ ಹೋರಾಟಕ್ಕೆ ಸಂದ ಜಯ. ಆದರೆ, ಪಠ್ಯದಲ್ಲಿ ವಿವೇಕಾನಂದರ ಮಾನವೀಯ ಮೌಲ್ಯಗಳನ್ನು ಸಾರುವ ಪಾಠ, ಪಿ ಲಂಕೇಶ್, ಎ. ಎನ್. ಮೂರ್ತಿ ರಾವ್ ಹಾಗೂ ಸಾರಾ ಅಬೂಬಕ್ಕರ್ ಅವರ ಪ್ರಗತಿಪರ ಲೇಖನಗಳು, ನಾರಾಯಣಗುರು ಮತ್ತು ಇನ್ನಿತರ ಪ್ರಗತಿಪರ ಚಿಂತಕರ ಪಠ್ಯ ಹಾಗೂ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ ಸಾರುವ ಪಠ್ಯಗಳನ್ನು ಸೇರಿಸುವ ವರೆಗೂ ಈ ವಿಜಯದಿಂದ ಸ್ಫೂರ್ತಿ ಪಡೆದ ಪ್ರಜ್ಞಾವಂತ ಜನ ಹೋರಾಟ ಮುಂದುವರೆಸಬೇಕು.

ಈ ಹಿಂದೆ ಪಠ್ಯ ಪುಸ್ತಕ ಪರಿಷ್ಕರಣೆ ನೆಪದಲ್ಲಿ, ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ಕುರಿತು ಹಾಗೂ ಕೆಲವು ನೈತಿಕ ಮೌಲ್ಯಗಳನ್ನು ಬಿತ್ತುವ ಪಾಠಗಳನ್ನು ಹತ್ತನೇ ತರಗತಿ ಪಠ್ಯ ಕ್ರಮದಿಂದ ತೆಗೆದು ಹಾಕಲಾಗಿತ್ತು. ಅಷ್ಟೇ ಅಲ್ಲದೆ, ಪಠ್ಯದಲ್ಲಿ ಹಳೆಯ, ಪ್ರಾಚೀನ ಗೊಡ್ಡು ಸಂಪ್ರದಾಯವಾದಿ ವಿಚಾರಗಳನ್ನು ಬಿತ್ತುವ ಆರ್ಎಸ್ಎಸ್ ನ ಸ್ಥಾಪಕರಾದ ಹೆಡ್ಗೇವಾರ್ ಅವರ ಭಾಷಣವನ್ನು 'ಆದರ್ಶ ಪುರುಷ ಯಾರು?' ಎಂಬ ಶೀರ್ಷಿಕೆಯಡಿಯಲ್ಲಿ ತುರುಕಿಸಲಾಗಿತ್ತು.

karnataka 10th std text book Bhagath Singh re-inclusion is welcoming

ಇಂತಹ ಪರಿಷ್ಕರಣೆಯ ವಿರುದ್ಧ ರಾಜ್ಯಾದ್ಯಂತ ವಿರೋಧಗಳ ಧ್ವನಿ ಕೇಳಿಬಂದವು. ದೇಶದ ಸ್ವಾತಂತ್ರ್ಯಕ್ಕಾಗಿ ನೇಣುಗಂಬ ಏರಿದ ಕ್ರಾಂತಿಕಾರಿ ಭಗತ್ ಸಿಂಗ್ ರ ಕುರಿತ ಪಾಠವನ್ನು ಮರು ಸೇರ್ಪಡೆ ಮಾಡಲು ರಾಜ್ಯದ ವಿದ್ಯಾರ್ಥಿಗಳು, ಜನ ಸಾಮಾನ್ಯರು ಸರ್ಕಾರಕ್ಕೆ ಒತ್ತಾಯಿಸಿ, ಪ್ರತಿಭಟನೆಗಳು ನಡೆಸಲಾಗಿತ್ತು. ಈ ಹಿನ್ನೆಲೆಯನ್ನು ಗಮನಿಸಿದಾಗ, ಜನ ಹೋರಾಟದ ಒತ್ತಡದಿಂದಲೇ ರಾಜ್ಯ ಸರ್ಕಾರ ಭಗತ್ ಸಿಂಗ್ ಅವರ ಪಾಠವನ್ನು ಮರು ಸೇರ್ಪಡೆ ಮಾಡಲಾಗಿದೆ ಎನ್ನುವುದು ಅತ್ಯಂತ ಸ್ಪಷ್ಟವಾಗುತ್ತದೆ.

karnataka 10th std text book Bhagath Singh re-inclusion is welcoming

Recommended Video

RCB ತಂಡಕ್ಕೆ ಮುಂಬೈ ಮೇಲೆ ಫುಲ್ ಲವ್! | #Cricket | Oneindia Kannada

ಒಂದು ಪ್ರಜಾತಾಂತ್ರಿಕ ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯ ಪುಸ್ತಕಗಳು ಯಾವುದೇ ಪಕ್ಷದ ಸಿದ್ಧಾಂತಗಳಿಂದ ನಿಯಂತ್ರಿಸಲ್ಪಡಬಾರದು ಹಾಗೂ ಸ್ಥಾಪಿತ ಸತ್ಯಗಳು, ಪ್ರಜಾತಾಂತ್ರಿಕ, ವೈಜ್ನಾನಿಕ, ಧರ್ಮ ನಿರಾಪೇಕ್ಷ ವಿಚಾರಗಳು ಪಠ್ಯದ ಮೂಲಕ ವಿದ್ಯಾರ್ಥಿಗಳನ್ನು ತಲುಪಬೇಕು. ಅಂತಹ ಒಂದು ವಾತಾವರಣ ಸೃಷ್ಟಿಯಾಗುವವರೆಗೂ ನಮ್ಮ ಸಂಘಟಿತ ಹೋರಾಟ ಮುಂದುವರೆಸುವುದಾಗಿ ತಿಳಿಸಿದರು.

English summary
all india democratic student oganisations Secretary of State Sitara HM said the education system should not be controlled by any party ideology, Bhagat Singh lesson in the 10th grade textbook is credited to all those who fought in the state,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X