ಆಮ್ ಆದ್ಮಿ ಪಕ್ಷದಿಂದ 'ಅಯ್ಯೋ ನಮ್ಮಪ್ಪ, ದುಡಿಯೋದೆ ತಪ್ಪಾ?' ಜಾಥಾ
ಬೆಂಗಳೂರು,ಜನವರಿ,30: ಆಮ್ ಆದ್ಮಿ ಪಕ್ಷವು ಮೋಟಾರು ವಾಹನ ಕಾಯ್ದೆಯ 8ನೇ ನಿಯಮ ವಿರೋಧಿಸಿ 'ಅಯ್ಯೋ ನಮ್ಮಪ್ಪ, ದುಡಿಯೋದೆ ತಪ್ಪಾ?' ಎಂಬ ಜಾಥಾವನ್ನು ನಗರದ ಸಂತ ಜೋಸೆಫರ ಇಂಡಿಯನ್ ಹೈ ಸ್ಕೂಲ್ ಮೈದಾನದಲ್ಲಿ ಜನವರಿ 31ರ ಭಾನುವಾರದಂದು ಹಮ್ಮಿಕೊಂಡಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ "ಅಯ್ಯೋ ನಮ್ಮಪ್ಪ, ದುಡಿಯೋದೆ ತಪ್ಪಾ?" ಈ ಜಾಥಾದಲ್ಲಿ ಪಾಲ್ಗೊಳ್ಳಲ್ಲಿದ್ದು, ಸಂಪೂರ್ಣ ಬೆಂಬಲ ನೀಡಲಿದ್ದಾರೆ. ಜೊತೆಗೆ ನಗರದ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆ ಒಕ್ಕೂಟ ಕೂಡ ಕೈಜೋಡಿಸಿದೆ.

ಆಮ್ ಆದ್ಮಿ ಪಕ್ಷವೂ ಮೋಟಾರು ವಾಹನ ಕಾಯ್ದೆಯ 8ನೇ ನಿಯಮವನ್ನು ತಗೆದುಹಾಕುವಂತೆ ಸರ್ಕಾರಕ್ಕೆ ಕಳೆದ ವರ್ಷದ ನವೆಂಬರ್ 9ರಂದು ಒತ್ತಾಯಿಸಿತ್ತು. ಆದರೆ ಇವರ ಮನವಿಗೆ ಮಣಿಯದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಆಮ್ ಆದ್ಮಿ ಪಕ್ಷ ಈ ಜಾಥಾಕ್ಕೆ ಮುಂದಾಗಿದೆ.
ಮೋಟಾರು ವಾಹನ ಕಾಯಿದೆಯ 8ನೇ ನಿಯಮ ಏನು?
ಪ್ಯಾಸೆಂಜರ್ ಅಥವಾ ಗೂಡ್ಸ್ ಆಟೋ, ಟ್ಯಾಕ್ಸಿ, ಬಸ್, ಲಾರಿ ಮುಂತಾದ ಹಳದಿ ಬೋರ್ಡ್ ವಾಹನಗಳನ್ನು ಚಲಾಯಿಸಲು ಬೇಕಾದ "ಹಳದಿ ಬ್ಯಾಡ್ಜ್ ಲೈಸೆನ್ಸ್" ಪಡೆಯಲು 8ನೇ ಕ್ಲಾಸ್ ಪಾಸ್ ಕಡ್ಡಾಯ ಎಂಬ ಕಾನೂನಿದೆ. ಈ ನಿಯಮದಿಂದ ಸಾಮಾನ್ಯವರ್ಗದವರು ಜೀವನ ನಡೆಸಲು ಕಷ್ಟವಾಗುತ್ತದೆ. ಹಾಗಾಗಿ ಇದನ್ನು ವಿರೋಧಿಸಿ ಈ ಜಾಥಾ ಏರ್ಪಡಿಸಿದ್ದೇವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲರು ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ಪೃಥ್ವಿ ರೆಡ್ಡಿ ಹೇಳಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications