ಭೂ ತಿದ್ದುಪಡಿ ವಿಧೇಯಕದ ಹಿಂದೆ ಭೂ ಮಾಫಿಯಾ ಕೈವಾಡ; ಆರೋಪ
ಬೆಂಗಳೂರು ಮಾರ್ಚ್ 3; ಕರ್ನಾಟಕ ಭೂ ಸುಧಾರಣೆಗಳ (ತಿದ್ದುಪಡಿ) ವಿಧೇಯಕ 2020 ಸರ್ಕಾರ ವಿಧಾನಸಭೆಯಲ್ಲಿ ತರಾತುರಿಯಲ್ಲಿ ಮಂಡಿಸಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ಸದಂ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಸದನವು ಗೊಂದಲದಲ್ಲಿ ಮುಳುಗಿರುವಾಗ, ಪ್ರತಿಪಕ್ಷಗಳು ಧರಣಿಯಲ್ಲಿ ತೊಡಗಿರುವಾಗ, ಚರ್ಚೆಗಳನ್ನು ಮಾಡದೇ ಇರುವ ವಾತಾವರಣದಲ್ಲಿ ಆತುರಾತುರವಾಗಿ ವಿಧೇಯಕ ಮಂಡನೆಯಾಗಿರುವುದರ ಹಿಂದೆ ಭೂಮಾಫಿಯಾಗಳ, ಭೂಗಳ್ಳರ ಕೈವಾಡವಿರುವುದು ಖಚಿತ ಎಂದು ಅವರು ಹೇಳಿದ್ದಾರೆ.
ಈಗಿನ ವಿದ್ಯಮಾನವನ್ನು ಗಮನಿಸಿದರೆ ಯಡಿಯೂರಪ್ಪನವರ ಈ ಹಿಂದಿನ ಸರ್ಕಾರದಲ್ಲಿ ನೋಟಿಫಿಕೇಷನ್, ಡಿನೋಟಿಫಿಕೇಷನ್, ಕೆಐಎಡಿಬಿ, ಬಿಡಿಎ ಇನ್ನೂ ಮುಂತಾದ ಭೂ ಅವ್ಯವಹಾರಗಳು ಭೂ ಮಾಫಿಯಾಗಳಿಗೆ ನೆರವು ನೀಡುವಂತಹ ಚಟುವಟಿಕೆಗಳನ್ನು ಈಗಿನ ಸರ್ಕಾರದಲ್ಲೂ ಸಹ ಯಡಿಯೂರಪ್ಪನವರು ಕ್ರಮೇಣ ಪ್ರಾರಂಭ ಮಾಡುತ್ತಿರುವ ಬಗ್ಗೆ ಮನವರಿಕೆ ಆಗುತ್ತಿದೆ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷವು ಕೈಗಾರಿಕೆಗಳನ್ನು ಸ್ಥಾಪಿಸುವ ಈ ಕಾಯ್ದೆಯ ಅಡಿಯಲ್ಲಿ ಎಷ್ಟು ಶಾಸಕರುಗಳಿಗೆ ಮಾಜಿ ಶಾಸಕರುಗಳಿಗೆ ಮಂತ್ರಿ ಮಾಜಿ ಮಂತ್ರಿ ಮಹೋದಯರು ಗಳಿಗೆ ಹಾಗೂ ರಾಜಕೀಯ ಮಂಜೂರು ಮಾಡಿರುವ ಮಾಹಿತಿಯನ್ನು ಈ ಕೂಡಲೇ ರಾಜ್ಯದ ಜನತೆಗೆ ತಿಳಿಸಬೇಕೆಂದು ಆಗ್ರಹಿಸುತ್ತದೆ. ಈ ಜನವಿರೋಧಿ ಕಾನೂನನ್ನು ಸರ್ಕಾರವು ಹಿಂಪಡೆಯದಿದ್ದಲ್ಲಿ ಆಮ್ ಆದ್ಮಿ ಪಕ್ಷವು ರಾಜ್ಯದಾದ್ಯಂತ ಉಗ್ರ ಪ್ರತಿಭಟನೆಯನ್ನು ಮಾಡುವುದರ ಮೂಲಕ ರಾಜ್ಯದ ಜನತೆಗೆ ಈ ವಿಷಯವನ್ನು ತಿಳಿಸಲಾಗುವುದೆಂದು ಈ ಮೂಲಕ ಎಚ್ಚರಿಕೆ ನೀಡುತ್ತಿದೆ ಇದರ ವಿರುದ್ಧ ಕಾನೂನು ಸಮರವನ್ನು ಸಹ ಸಾರುತ್ತದೆ ಎಚ್ಚರಿಕೆಯನ್ನು ಪಕ್ಷವು ನೀಡುತ್ತದೆ ಎಂದು ಹೇಳಿದ್ದಾರೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications