ದೆಹಲಿ ಸುಗ್ರಿವಾಜ್ಞೆ ವಿರೋಧಿಸುವಂತೆ HD ದೇವೇಗೌಡರಿಗೆ ಎಎಪಿ ಮನವಿ
ಬೆಂಗಳೂರು, ಜುಲೈ 27: ಕೇಂದ್ರ ಸರ್ಕಾರದ ನವದೆಹಲಿ ಸುಗ್ರಿವಾಜ್ಞೆ ವಿರುದ್ಧ ತಮ್ಮ ಜೊತೆ ಹೋರಾಡುವಂತೆ ರಾಜ್ಯದ ಅಮ್ ಆದ್ಮಿ ಪಕ್ಷದ ಮುಖಂಡರು ಬುಧವಾರ ಮಾಜಿ ಪ್ರಧಾನಿ ಜೆಡಿಎಸ್ನ ಎಚ್ಡಿ ದೇವೇಗೌಡ ಅವರಿಗೆ ಮನವಿ ಮಾಡಿದರು.
ಬುಧವಾರ ಸಂಜೆ ಮಾಜಿ ಪ್ರಧಾನಮಂತ್ರಿ ಮತ್ತು ಜೆಡಿಎಸ್ ವರಿಷ್ಠ HD ದೇವೇಗೌಡ ಅವರನ್ನು ಅವರ ಮನೆಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹಾಗೂ ಇತರ ನಾಯಕರು ಸೌಹಾರ್ದಯುತವಾಗಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಇದೇ ವೇಳೆ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ, ಸಂವಿಧಾನವನ್ನು ಹಾಗೂ ದೇಶದ ಒಕ್ಕೂಟ ವ್ಯವಸ್ಥೆಯನ್ನು ಉಳಿಸಲು ದೆಹಲಿ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಈ ಸುಗ್ರಿವಾಜ್ಞೆಗೆ ರಾಜ್ಯ ಸಭೆಯಲ್ಲಿ ವಿರೋಧ ವ್ಯಕ್ತಪಡಿಸಬೇಕೆಂದು ಮುಖ್ಯಮಂತ್ರಿ ಚಂದ್ರು ಮನವಿ ಅವರು ಎಚ್ಡಿ ದೇವೇಗೌಡರಲ್ಲಿ ಮನವಿ ಮಾಡಿದರು.
ಕೇಂದ್ರ ಸರ್ಕಾರವು ದುರುದ್ದೇಶದಿಂದ ದೇಹಲಿ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು, ದ್ವೇಷ ರಾಜಕಾರಣ ಮಾಡಲು ಹೀಗೆ ಸುಗ್ರೀವಾಜ್ಞೆ ಹೊರಡಿಸಿದೆ ಎಂದು ಕರ್ನಾಟಕ ಹಾಗೂ ದೆಹಲಿ ನಾಯಕರು ಕಿಡಿ ಕಾರುತ್ತಲೇ ಬಂದಿದ್ದಾರೆ.

ಸುಗ್ರೀವಾಜ್ಞೆ ವಿರೋಧಿಸುವಂತೆ ವಿಪಕ್ಷಗಳ ಸಂಘಟನೆ
ಈ ಸುಗ್ರೀವಾಜ್ಞೆ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಕೇಂದ್ರ ವಿರೋಧಪಕ್ಷಗಳ ನಾಯಕರನ್ನು ಸಂಘಟಿಸಿದರು. ತಾವೆಲ್ಲರು ಮುಂಗಾರು ಅಧಿವೇಶನದಲ್ಲಿ (Monsoon Session 2023) ಈ ಸುಗ್ರೀವಾಜ್ಞೆಗೆ ವಿರೋಧ ವ್ಯಕ್ತಪಡಿಸುವಂತೆ ಮನವಿ ಮಾಡಿದ್ದರು. ವಿಪಕ್ಷಗಳ ನಾಯಕರಾದ ಅಖಿಲೇಶ್ ಯಾದವ್, ನಿತಿಶ್ ಕುಮಾರ್, ಮಾಯಾವತಿ, ಸೇರಿದಂತೆ ಅನೇಕರ ಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದರು.
ಇದರಿಂದ ಆಮ್ ಆದ್ಮಿ ಪಕ್ಷದ ದೆಹಲಿ ಸಿಎಂ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಸಹ ತಂತ್ರ ಹೆಣೆದಿದ್ದರು. ಆದರೆ ಅವರ ಈ ಸುಗ್ರೀವಾಜ್ಞೆಯ ಮನವಿಗೆ ಆರಂಭದಲ್ಲಿ ಕಾಂಗ್ರೆಸ್ ಬೆಂಬಲ ನೀಡುವಲ್ಲಿ ಮೌನ ವಹಿಸಿತ್ತು. ಹೀಗಾಗಿ ವಿಪಕ್ಷಗಳ ಒಂದು ಸಭೆಗೆ ಎಎಪಿ ಗೈರಾಗಿತ್ತು. ತದನಂತರ ಬೆಂಗಳೂರಿನಲ್ಲಿ ವಿಪಕ್ಷಗಳ ಸಭೆ ನಡೆಯುವ ಹೊತ್ತಿಗೆ ಕಾಂಗ್ರೆಸ್ ಮೌನ ಮುರಿಯಿತು. ಈ ಮೂಲಕವು ಕೇಂದ್ರ ವಿಪಕ್ಷಗಳು ಬಿಜೆಪಿ ವಿರುದ್ಧ ಸೆಟೆದು ನಿಂತಿವೆ.
ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡರ ನಿವಾಸದ ಭೇಟಿ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ, ಸಂವಹನ ಉಸ್ತುವಾರಿ ಬ್ರಿಜೇಶ್ ಕಾಳಪ್ಪ, ಜಗದೀಶ್ ವಿ ಸದಂ, ದರ್ಶನ್ ಜೈನ್, ಬಸವರಾಜ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಉಪಸ್ಥಿತರಿದ್ದರು.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications