ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏ.18ರಂದು ನಿಗದಿಯಾಗಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 16: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಏ.18ರಂದು ನಡೆಯಬೇಕಿದ್ದ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ.

ಕೋವಿಡ್ ನಿಯಂತ್ರಣ ಸಂಬಂಧ ಉಭಯ ಪಕ್ಷಗಳ ಮುಖಂಡರ ಸಭೆಯನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಏ.18ರ ಸಂಜೆ 4 ಗಂಟೆಗೆ ಕರೆದಿದ್ದರು.

ಬೆಂಗಳೂರಲ್ಲಿ 9917 ಸೇರಿ ಕರ್ನಾಟಕದಲ್ಲಿ 14,859 ಮಂದಿಗೆ ಕೊರೊನಾ ಸೋಂಕುಬೆಂಗಳೂರಲ್ಲಿ 9917 ಸೇರಿ ಕರ್ನಾಟಕದಲ್ಲಿ 14,859 ಮಂದಿಗೆ ಕೊರೊನಾ ಸೋಂಕು

ಸಭೆಯಲ್ಲಿ ಸಿದ್ದರಾಮಯ್ಯ, ಎಚ್‌ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗುತ್ತಾರೆ ಎಂದು ಹೇಳಲಾಗಿತ್ತು.ಇದೀಗ ಸಭೆಯನ್ನು ದಿಢೀರ್ ಮುಂದೂಡಿಕೆ ಮಾಡಲಾಗಿದ್ದು, ಯಾವ ಕಾರಣಕ್ಕೆ ಮುಂದೂಡಿಕೆ ಮಾಡಲಾಗಿದೆ ಎನ್ನುವ ಚರ್ಚೆ ಶುರುವಾಗಿದೆ.

 Karnataka All Party Meeting Postponed

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಎರಡನೇ ಬಾರಿಗೆ ಕೊರೊನಾ ಸೋಂಕು ತಗುಲಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರಣದಿಂದಾಗಿ ಸಭೆಯನ್ನು ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.

ಕರ್ನಾಟಕದಲ್ಲಿ ಬರೋಬ್ಬರಿ 14,859 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಾಹಿತಿ ನೀಡಿದೆ. ಒಂದೇ ದಿನ 78 ಮಂದಿ ಮೃತಪಟ್ಟಿದ್ದಾರೆ, ಇದುವರೆಗೆ 13,190 ಮಂದಿ ಸಾವನ್ನಪ್ಪಿದ್ದಾರೆ.

Recommended Video

ಸಾಮಾಜಿಕ ಜಾಲತಾಣವನ್ನ ಸಂಪೂರ್ಣ ಬಂದ್ ಮಾಡಿದ ಸರ್ಕಾರ | Oneindia Kannada

ಕಳೆದ 24 ಗಂಟೆಗಳಲ್ಲಿ 4031ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಇದುವರೆಗೆ 1003985 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 107315 ಸಕ್ರಿಯ ಪ್ರಕರಣಗಳಿವೆ, ಒಟ್ಟು 1124509 ಪ್ರಕರಣಗಳಿವೆ. 577 ಮಂದಿ ಐಸಿಯುನಲ್ಲಿದ್ದಾರೆ.

English summary
Chief Minister BS Yediyurappa tested positive for coronavirus, Karnataka all party meeting postponed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X