ಶಿಷ್ಟಾಚಾರ, ಹಕ್ಕುಚ್ಯುತಿ ಹೆಸರಿನಲ್ಲಿ ಶರತ್ ಬಚ್ಚೇಗೌಡ 'ಕೈ'ಹಿಡಿದ ಕಾಂಗ್ರೆಸ್
ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಸುದ್ದಿಯೋ/ವದಂತಿಯೋ ಅದು ಇಂದು ನಿನ್ನೆಯದಲ್ಲ. ಆದರೆ, ಅಧಿಕೃತವಾಗಿ ಕಾಂಗ್ರೆಸ್ ಆಗಲಿ ಶರತ್ ಆಗಲಿ ಈ ಬಗ್ಗೆ ಹೇಳಿಕೆಯನ್ನು ನೀಡುತ್ತಿಲ್ಲ.
ವಿಧಾನ ಮಂಡಲದ ಹಾಲೀ ಬಜೆಟ್ ಅಧಿವೇಶನದಲ್ಲಿ, ಶರತ್ ತಮ್ಮ ಒಂದು ಕಾಲನ್ನು ಕಾಂಗ್ರೆಸ್ಸಿನಲ್ಲಿಟ್ಟಿರುವುದು ಹೌದು ಎನ್ನುವುದಕ್ಕೆ ಪೂರಕ ಎನ್ನುವಂತೆ ವಿದ್ಯಮಾನವೊಂದು ನಡೆದಿದೆ. ಇದು ಸ್ಪಷ್ಟವಾಗಿ ಶರತ್ ಅವರು ಬಿಜೆಪಿಯಿಂದ ದೂರವಾಗುತ್ತಿರುವ ಸೂಚನೆಯಂತೆ ತೋರುತ್ತಿದೆ.
ತಾವು ಪ್ರತಿನಿಧಿಸುವ ಕ್ಷೇತ್ರದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಆರೋಪಿಸಿದ್ದಾರೆ. ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರನ್ನು ಕರೆಯದೇ ಇರುವುದು ಶರತ್ ಬೆಂಬಲಿಗರನ್ನು ಕೆರಳಿಸಿದೆ.
ರಾಜಕೀಯ ಜಿದ್ದಾಜಿದ್ದಿಗೆ ಹೆಸರಾಗಿರುವ ಹೊಸಕೋಟೆಯ ಗೌತಂ ಕಾಲೋನಿಯಲ್ಲಿ ಸರಕಾರದ ಅನುದಾನದ ಅಡಿಯಲ್ಲಿ ಒಳಚರಂಡಿ ಕಾಮಗಾರಿಯ ಗುದ್ದಲಿಪೂಜೆ ಕಾರ್ಯಕ್ರಮವಿತ್ತು. ಸಚಿವ ಎಂ.ಟಿ.ಬಿ ನಾಗರಾಜ್ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆಯೇ, ಶರತ್ ಬೆಂಬಲಿಗರು ಪ್ರತಿಭಟನೆ ನಡೆಸಲು ಆರಂಭಿಸಿ, ಹೆದ್ದಾರಿ ತಡೆಯನ್ನು ಮಾಡಿದ್ದರು. ಇದಕ್ಕಾಗಿ ಶರತ್ ಸೇರಿದಂತೆ ಹದಿನೆಂಟು ಜನರ ವಿರುದ್ದ ಎಫ್ಐಆರ್ ದಾಖಲಾಗಿತ್ತು.

ಅಧಿವೇಶನ ಆರಂಭ
ಅಧಿವೇಶನ ಆರಂಭವಾದ ನಂತರ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಶರತ್ ಬಚ್ಬೇಗೌಡ ಹಕ್ಕುಚ್ಯುತಿ ಮಂಡನೆಯನ್ನು ಮಾಡಿದ್ದರು. ಸ್ಪೀಕರ್ ಕಾಗೇರಿಯವರು ಇದಕ್ಕೆ ಅವಕಾಶವನ್ನೂ ನೀಡಿದ್ದರು. ಈ ಬಗ್ಗೆ ಸದನದಲ್ಲಿ ಮಾತನಾಡಿದ ಶರತ್, ಸ್ಥಳೀಯ ಪೊಲೀಸರು ಮತ್ತು ನಗರಸಭೆಯ ಆಯುಕ್ತರನ್ನು ತರಾಟೆಗೆ ತೆಗೆದುಕೊಂಡರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಈ ಸಂದರ್ಭದಲ್ಲಿ ಶರತ್ ಬೆಂಬಲಕ್ಕೆ ಕಾಂಗ್ರೆಸ್ ಶಾಸಕರು ನಿಂತರು. ಪ್ರಮುಖವಾಗಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಕೃಷ್ಣ ಭೈರೇಗೌಡ ಅವರು ಸರಕಾರದ ವಿರುದ್ದ ಕಿಡಿಕಾರುತ್ತಾ, ಸದನದ ಬಾವಿಗೆ ಇಳಿದರು. ಆಗ ಕಾಂಗ್ರೆಸ್ಸಿನ ಇತರ ಶಾಸಕರೂ ಶರತ್ ಪರವಾಗಿ ನಿಂತರು.
Recommended Video

ಅಧಿಕಾರ ಅನ್ನುವುದು ಶಾಶ್ವತವಲ್ಲ
"ಅಧಿಕಾರ ಅನ್ನುವುದು ಶಾಶ್ವತವಲ್ಲ , ಇವತ್ತು ಇಲ್ಲಿ ಕೂತವರು ನಾಳೆ ಅಲ್ಲಿ ಕೂರಬಹುದು. ಅಲ್ಲಿ ಕೂತವರು ಇಲ್ಲಿ ಬರಬಹುದು. ಹೊಸಕೋಟೆಯಲ್ಲಿ ಕಾರ್ಯಕ್ರಮ ನಡೆಯುತ್ತದೆ. ಶನಿವಾರ ಬೆಳಗ್ಗೆ ಕಾರ್ಯಕ್ರಮಕ್ಕೆ ಸಚಿವರನ್ನ ಆಹ್ವಾನಿಸುತ್ತಾರೆ. ಇವೆಲ್ಲವನ್ನೂ ನಗರಸಭೆಯ ಆಯುಕ್ತರು ಮಾಡುತ್ತಾರೆ. ಸ್ಥಳೀಯ ಶಾಸಕನಿಗೆ ಆಹ್ವಾನ ಕೊಡಿಸುವಷ್ಟೂ ಸೌಜನ್ಯವಿಲ್ಲವೇ? ಇದನ್ನು ಪ್ರಶ್ನಿಸಿ ನಮ್ಮ ಬೆಂಬಲಿಗರು ಪ್ರತಿಭಟನೆ ಮಾಡಿದರೆ, ಲಾಠಿಚಾರ್ಜ್ ಮಾಡುತ್ತಾರೆ"ಎಂದು ಶರತ್ ಬಚ್ಚೇಗೌಡ ಆಕ್ರೋಶ ವ್ಯಕ್ತ ಪಡಿಸಿದರು.

ಹಕ್ಕುಚ್ಯುತಿ ಹೆಸರಿನಲ್ಲಿ ಶರತ್ ಬಚ್ಚೇಗೌಡ 'ಕೈ'ಹಿಡಿದ ಕಾಂಗ್ರೆಸ್
ರಾಜಕೀಯದಲ್ಲಿ ಇಂತಹ ಶಿಷ್ಟಾಚಾರ ಉಲ್ಲಂಘನೆಯಾಗುವ ಹತ್ತುಹಲವು ನಿದರ್ಶನಗಳಿವೆ. ಆದರೆ, ಶರತ್ ಪರವಾಗಿ ಕಾಂಗ್ರೆಸ್ ಶಾಸಕರು ಒಂದಾಗಿ, ಬಾವಿಗಿಳಿದಿದ್ದು ಪ್ರಮುಖಾಂಶವಾಗಿತ್ತು. ಕಳೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು, ಬಿಜೆಪಿಗೆ ಪಾಠ ಕಲಿಸಿದ ಯುವ ಮುಖಂಡ ಶರತ್ ಬಚ್ಚೇಗೌಡ, ಕಾಂಗ್ರೆಸ್ಸಿಗೆ ಮತ್ತಷ್ಟು ಹತ್ತಿರವಾಗುತ್ತಿರುವುದಕ್ಕೆ ಈ ವಿದ್ಯಮಾನ ಒಂದು ಉದಾಹರಣೆ. ದಟ್ಸ್ ಆಲ್...
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications