ಉಪಚುನಾವಣೆ: ಬೆಂಗಳೂರಿನಲ್ಲಿ 4 ದಿನ ಮದ್ಯಮಾರಾಟ ನಿಷೇಧ
ಬೆಂಗಳೂರು, ನ 28: ಹದಿನೈದು ಅಸೆಂಬ್ಲಿ ಕ್ಷೇತ್ರಗಳ ಉಪಚುನಾವಣೆ ಮತ್ತು ಮತಎಣಿಕೆ ಪ್ರಕ್ರಿಯೆ ಡಿಸೆಂಬರ್ ತಿಂಗಳಲ್ಲಿ ನಡೆಯುತ್ತಿದೆ. ಈ ಸಂಬಂಧ, ಬೆಂಗಳೂರು ನಗರ ಪೊಲೀಸ್ ಆಯುಕ್ತ, ಭಾಸ್ಕರ್ ರಾವ್, ಮದ್ಯಮಾರಾಟ ನಿಷೇಧಗೊಳಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
"ದಿನಾಂಕ: 05.12.2019ರಂದು ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯ ನಾಲ್ಕು ಅಸೆಂಬ್ಲಿ ಕ್ಷೇತ್ರಗಳಲ್ಲಿ ಚುನಾವಣೆ ನಿಗದಿಯಾಗಿದೆ. ಸದರಿ ದಿನದಂದು ಮತದಾರರಿಗೆ ಮುಕ್ತ ಮತ್ತು ನ್ಯಾಯೋಚಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ, ಮತದಾನದ ಮುಕ್ತಾಯದ ಹಿಂದಿನ 48 ಗಂಟೆಗಳ ಕಾಲದ ಅವಧಿಯನ್ನು ಪಾನ ವಿರೋಧ (ಡ್ರೈ ಡೇ) ದಿನವೆಂದು ಘೋಷಿಸುವಂತೆ, ಚುನಾವಣಾ ಆಯೋಗ ಸೂಚಿಸಿರುತ್ತದೆ".
"ಭಾಸ್ಕರ್ ರಾವ್ ಆದ ನಾನು, ಕರ್ನಾಟಕ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಸೆಕ್ಷನ್ 135ಸಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಚುನಾವಣೆ ನಡೆಯುವ ಕಮಿಷನರೇಟ್ ವ್ಯಾಪ್ತಿಯ (ರಾಮನಗರ ಹೊರತು ಪಡಿಸಿ), ಕೆ.ಆರ್.ಪುರಂ, ಮಹಾಲಕ್ಶ್ಮೀ ಲೇಔಟ್, ಯಶವಂತಪುರ ಮತ್ತು ಶಿವಾಜಿನಗರ ಅಸೆಂಬ್ಲಿ ಕ್ಷೇತ್ರಗಳಲ್ಲಿ ಈ ಕೆಳಗಂಡಂತೆ, ಮದ್ಯ ಮಾರಾಟವನ್ನು ನಿಷೇಧಿಸಿದ್ದೇನೆ" ಎಂದು ಪೊಲೀಸ್ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ದಿನಾಂಕ: 03.12.2019ರ ಸಂಜೆ ಆರು ಗಂಟೆಯಿಂದ, ದಿನಾಂಕ: 05.12.2019ರ ಮಧ್ಯರಾತ್ರಿ ಹನ್ನೆರಡು ಗಂಟೆಯವರೆಗೆ
ದಿನಾಂಕ: 08.12.2019ರ ಮಧ್ಯರಾತ್ರಿ 12 ಗಂಟೆಯಿಂದ, ದಿನಾಂಕ : 09.12.2019ರ ಮಧ್ಯರಾತ್ರಿ 12 ಗಂಟೆಯವರೆಗೆ
ಈ ಸರಹದ್ದಿನಲ್ಲಿ ಬರುವ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ರೆಸ್ಟೋರೆಂಟ್ ಮತ್ತು ಕ್ಲಬ್ ಗಳಲ್ಲಿ ಮದ್ಯ ಮಾರಾಟವನ್ನು, ಮೇಲೆ ನಮೂದಿಸಿದ ದಿನಗಳಲ್ಲಿ ನಿಷೇಧಿಸಲಾಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications