ಬ್ಯಾಟರಾಯನಪುರ ಕ್ಷೇತ್ರ: ಗ್ರಾಮೀಣ-ನಗರ ಮತದಾರರ ಸಮ್ಮಿಲನ
ಬೆಂಗಳೂರು, ಏಪ್ರಿಲ್ 20: ಬೆಂಗಳೂರು ಉತ್ತರ ತಾಲ್ಲೂಕಿಗೆ ಸೇರುವ ಬ್ಯಾಟರಾಯನಪುರ ಕ್ಷೇತ್ರ ಬೆಂಗಳೂರಿನ ದೊಡ್ಡ ಕ್ಷೇತ್ರಗಳಲ್ಲಿ ಒಂದು. ಈ ಬಾರಿಯ ಚುನಾವಣೆ ಬ್ಯಾಟಾರಾಯನಪುರ ಕ್ಷೇತ್ರದಲ್ಲಿ ನಡೆಯುತ್ತಿರುವ ಮೂರನೇ ಚುನಾವಣೆಯಷ್ಟೆ. ಈ ಕ್ಷೇತ್ರದಲ್ಲಿ ಮೊದಲ ವಿಧಾನಸಭೆ ಚುನಾವಣೆ ನಡೆದಿದ್ದು 2008ರಲ್ಲಿ.
ಇಲ್ಲಿ ಕೃಷ್ಣಭೈರೇಗೌಡ ಅವರು ಸತತ ಎರಡು ಬಾರಿ ಕಾಂಗ್ರೆಸ್ ಬಾರಿ ಆಯ್ಕೆಯಾಗಿದ್ದಾರೆ, 2008ರಲ್ಲಿ ಅವರು 9,352 ಮತಗಳ ಅಂತರದಿಂದ ಗೆದ್ದಿದ್ದರೆ 2013ರಲ್ಲಿ 32,400 ಮತಗಳ ಅಂತರದಿಂದ ಗೆದ್ದಿದ್ದಾರೆ.
ಮತದಾರ ಸಂಖ್ಯೆ
ಬ್ಯಾಟರಾಯನಪುರ ಕ್ಷೇತ್ರವು ಬೆಂಗಳೂರಿನ ದೊಡ್ಡ ಕ್ಷೇತ್ರಗಳಲ್ಲಿ ಒಂದು. ಇಲ್ಲಿಯ ಮತದಾರರ ಸಂಖ್ಯೆ 4.19 (4,19,587) ಲಕ್ಷ ಮೀರಿದೆ. ಕ್ಷೇತ್ರದಲ್ಲಿ ಪುರುಷ ಮತದಾರರ ಸಂಖ್ಯೆ 2,19,775. ಮಹಿಳಾ ಮತದಾರರ ಸಂಖೆ 1,99,733.

ಕ್ಷೇತ್ರ ವಿಶೇಷತೆ: ಬ್ಯಾಟರಾಯನಪುರ ವಾರ್ಡ್ ಮತ್ತು ಗ್ರಾಮ ಪಂಚಾಯಿತಿ ಎರಡನ್ನೂ ಒಳಗೊಂಡಿರುವುದು ವಿಶೇಷ. ನಗರ ಮತ್ತು ಗ್ರಾಮೀಣ ಭಾಗಕ್ಕೆ ಸೇರಿದ ಎರಡೂ ರೀತಿಯ ಮತದಾರರು ಬ್ಯಾಟರಾಯನಪುರ ಕ್ಷೇತ್ರದಲ್ಲಿದ್ದಾರೆ. ಬ್ಯಾಟರಾಯನಪುರ 7 ವಾರ್ಡುಗಳು ಮತ್ತು 8 ಗ್ರಾಮ ಪಂಚಾಯಿತಿಗಳನ್ನು ಹೊಂದಿದೆ. ಕೆಂಪೆಗೌಡ ವಿಮಾನ ನಿಲ್ದಾಣ ರಸ್ತೆಗೆ ಹೊಂದಿಕೊಂಡಿರುವ ಬ್ಯಾಟರಾಯನಪುರ ವಾಣಿಜ್ಯ, ವ್ಯಾಪಾರದಲ್ಲಿ ಮುಂದುವರೆದ ಕ್ಷೇತ್ರ.
ಸಮಸ್ಯೆಗಳು: * ಅರ್ಕಾವತಿ ಬಡಾವಣೆ ಸಮಸ್ಯೆ ಈ ಕ್ಷೇತ್ರದ ಬಹುದೊಡ್ಡ ಸಮಸ್ಯೆ, ಅರ್ಕಾವತಿ ಬಡಾವಣೆಗೆ ಸರಿಯಾದ ನೀರು ಮತ್ತು ವಿದ್ಯುತ್ ಸಂಪರ್ಕವೇ ಇಲ್ಲ. ಅಲ್ಲಿನ ನಿವಾಸಿಗಳು ಮೂಲಸೌಲಭ್ಯ ಕೊರತೆಯಿಂದ ಸಮಸ್ಯೆ ಪಡುತ್ತಿದ್ದಾರೆ.
* ಕ್ಷೇತ್ರದ ಸುಪರ್ದಿಯಲ್ಲಿ ಬರುವ 50ಕ್ಕೂ ಹೆಚ್ಚು ಹಳ್ಳಿಗಳಿಗೆ ಇಂದಿಗೂ ಸರಿಯಾದ ರಸ್ತೆಗಳಿಲ್ಲ, ಸ್ವಚ್ಛತೆ ಮತ್ತು ನೀರಿನ ವ್ಯವಸ್ಥೆಯೂ ಅಷ್ಟಕ್ಕಷ್ಟೆ.
* ಕೊಡಿಗೇಹಳ್ಳಿ ರೈಲ್ವೆ ಅಂಡರ್ಪಾಸ್ ಕಾಮಗಾರಿ ಮೂರು ವರ್ಷದಿಂದ ನಡೆಯುತ್ತಲೇ ಇದೆ. ಇದು ಸಂಚಾರ ವ್ಯತ್ಯಯ ಉಂಟು ಮಾಡಿದೆ.
ಕ್ಷೇತ್ರದ ವಾರ್ಡುಗಳು: ಜಕ್ಕೂರು, ಥಣಿಸಂದ್ರ, ಬ್ಯಾಟರಾಯನಪುರ, ಕೊಡಿಗೇಹಳ್ಳಿ, ವಿದ್ಯಾರಣ್ಯಪುರ, ದೊಡ್ಡಬೊಮ್ಮಸಂದ್ರ, ಕುವೆಂಪುನಗರ.
ಈ ಬಾರಿ ನಾಮಪತ್ರ ಸಲ್ಲಿಸಿರುವ ಪ್ರಮುಖರು: ಕಾಂಗ್ರೆಸ್ನಿಂದ ಕೃಷ್ಣಭೈರೇಗೌಡ, ಬಿಜೆಪಿ ಪಕ್ಷದಿಂದ ಎ.ರವಿ, ಜೆಡಿಎಸ್ನಿಂದ ಟಿ.ಜಿ.ಚಂದ್ರ.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications