ಮುನಿರಾಜು ಅವರ ಹ್ಯಾಟ್ರಿಕ್ ಕನಸು ಈಡೇರುತ್ತಾ ದಾಸರಹಳ್ಳಿಯಲ್ಲಿ?
ಬೆಂಗಳೂರು, ಏಪ್ರಿಲ್ 20: ರಾಜಧಾನಿ ಬೆಂಗಳೂರಿನ ಬಿಜೆಪಿಗಳ ಭದ್ರಕೋಟೆಗಳ ಪೈಕಿ ಒಂದು ಎನಿಸಿರುವ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಬಿಜೆಪಿಯ ಮುನಿರಾಜು ಹ್ಯಾಟ್ರಿಕ್ ಸಾಧಿಸುವ ಕನಸು ಕಾಣುತ್ತಿದ್ದಾರೆ. ಅದಕ್ಕೆ ಬ್ರೇಕ್ ಹಾಕಲು ಇನ್ನಿಲ್ಲದ ಪ್ರಯತ್ನ ಆರಂಭಿಸಿದೆ.
ಬಿಜೆಪಿಯ ನಾಗಾಲೋಟದ ಗೆಲುವಿಗೆ ಜೆಡಿಎಸ್ ನ ಮಂಜುನಾಥ್ ಈ ಬಾರಿ ಪ್ರಬಲ ಪೈಪೋಟಿ ಒಡ್ಡಿದ್ದು, ಕಳೆದ ಬಾರಿ ಕಾಂಗ್ರೆಸ್ ನ ಹಿರಿಯ ಮುಖಂಡ ಬಿ.ಎಲ್. ಶಂಕರ್ ಅವರನ್ನು ಸೋಲಿಸಿದ ಮುನಿರಾಜು ಅವರಿಗೆ ಈ ಬಾರಿ ಅವರ ಕಾರ್ಯ ವೈಖರಿ ಬಗೆಗೆ ಇರುವ ಅಸಾಮಾಧಾನ ಕೆಲ ಮಟ್ಟಿಗೆ ಆತಂಕ ಉಂಟುಮಾಡಿದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಕಳೆದ 2 ಚುನಾವಣೆಯಲ್ಲಿ ದಾಸರಹಳ್ಳಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಮುನಿರಾಜು, ಈ ಬಾರಿಯೂ ತಮ್ಮ ಪ್ರಾಬಲ್ಯ ಉಳಿಸಿಕೊಂಡಿದ್ದಾರೆ. ಪಕ್ಷದ ಟಿಕೆಟ್ ಘೋಷಣೆಯಾಗಿದೆ. ಆದರೆ, ಈ ಬಾರಿ ಬಿಜೆಪಿಗೆ ಜೆಡಿಎಸ್ ಪ್ರಬಲ ಹೋರಾಟಕ್ಕೆ ಅಣಿಯಾಗುತ್ತಿದೆ. ಕಳೆದ ಬಾರಿ ಕಾಂಗ್ರೆಸ್ ನ ಬಿ.ಎಲ್. ಶಂಕರ್ ಚುನಾವಣಾ ಕಣದಲ್ಲಿ 6-7 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು.

ಈ ಬಾರಿ ಕಾಂಗ್ರೆಸ್ ಇನ್ನೂ ಈ ಕ್ಷೇತ್ರದ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಒಂದು ವೇಳೆ ಕಾಂಗ್ರೆಸ್ ಪ್ರಭಾವಿ ನಾಯಕರನ್ನು ಕಣಕ್ಕಿಳಿಸಿದರೆ, ಮೂರು ಪಕ್ಷಗಳಿಗೆ ಕ್ಷೇತ್ರ ಸವಾಲಾಗಿ ಪರಿಣಮಿಸಿದೆ. ಬಿಜೆಪಿಯ ಭದ್ರಕೋಟೆಯಲ್ಲೊಂದಾಗಿರುವ ಟಿ.ದಾಸರಹಳ್ಳಿಯಲ್ಲಿ ಪ್ರಸ್ತುತ ಮೂರು ಪಕ್ಷಗಳಲ್ಲಿ ಅಸಮಾಧಾನವೂ ಹೊಗೆಯಾಡುತ್ತಿದೆ.
ಕಳೆದ 2 ಬಾರಿ ಗೆದ್ದ ಬಿಜೆಪಿಯ ಮುನಿರಾಜು ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕೆಲಸಗಳಲ್ಲಿ ತೊಡಗಿಸಿಕೊಂಡಿಲ್ಲ ಎಂಬ ಜನಾಭಿಪ್ರಾಯವೂ ವ್ಯಕ್ತವಾಗಿದೆ.
ವಲಸಿಗರೇ ಹೆಚ್ಚು: ರಾಷ್ಟ್ರೀಯ ಹೆದ್ದಾರಿ, ತುಮಕೂರು ರಸ್ತೆ ಭಾಗ ಎಂಬುದಾಗಿ, ಗುರುತಿಸಿಕೊಂಡಿರುವ ದಾಸರಹಳ್ಳಿ ಕ್ಷೇತ್ರದಲ್ಲಿ ಶಾಹಿ ಎಕ್ಸ್ ಪೋರ್ಟ್ಸ್, ಜಿಂದಾಲ್ ಸೇರಿ ವಿವಿಧ ಬೃಹತ್ ಹಾಗೂ ಮಧ್ಯಮ ಕೈಗಾರಿಕೆಗಳಿವೆ. ಕೂಲಿ ಕಾರ್ಮಿಕರು, ಕಾರ್ಖಾನೆಗಳ ಕಾರ್ಮಿಕರು ಈ ಭಾಗದಲ್ಲಿ ಹೆಚ್ಚಿರುವುದು ಗಮನಾರ್ಹ ಅಂಶ. ಅಂತೆಯೇ ಉದ್ಯೋಗಕ್ಕಾಗಿ ನಗರದಲ್ಲಿ ನೆಲೆಸಿರುವವರ ಸಂಖ್ಯೆಯೂ ಹೆಚ್ಚು.
ತಮಿಳುನಾಡು, ಆಂಧ್ರಪ್ರದೇಶ ಹಾಗೂ ಉತ್ತರ ಭಾರತದಿಂದ ವಲಸೆ ಬಂದವರೂದೊಡ್ಡ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮತ ಚಲಾಯಿಸುವ ಹಕ್ಕು ಪಡೆದ ವಲಸಿಗರ ಸಂಖ್ಯೆಯೂ ಚುನಾವಣಾ ಲೆಕ್ಕಾಚಾರದಲ್ಲಿ ಪ್ರಮುಖವಾಗಲಿದೆ. ಕಾಂಗ್ರೆಸ್ ನಿಂದ ಪ್ರಬಲ ಅಭ್ಯರ್ಥಿ ಕಣಕ್ಕಿಳಿದರೆ, ಅತ್ಯುತ್ತಮ ಪೈಪೋಟಿ ಏರ್ಪಡುವ ಸಾಧ್ಯತೆ ಹೆಚ್ಚಿದೆ.
2013ರ ವಿಧಾನಸಭಾ ಚುನಾವಣೆಯ ಫಲಿತಾಂಶ: ಬಿಜೆಪಿಯಿಂದ ಮುನಿರಾಜು 57,562 ಮತದಿಂದ ಗೆಲುವು ಸಾಧಿಸಿದ್ದರೆ, ಅವರು ಎದುರು ಸ್ಪರ್ಧಿಸಿದ್ದ ಕಾಂಗ್ರೆಸ್ ನ ಬಿಎಲ್ ಶಂಕರ್ 46,734 ಮತ, ಜೆಡಿಎಸ್ ನಿಂದ ಅಂದಾನಪ್ಪ 43,039 ಮತಗಳನ್ನು ಪಡೆದುಕೊಂಡಿದ್ದರು.
ಪಾಲಿಕೆ ಬಲಾಬಲ: ಬಿಜೆಪಿ-5, ಚೊಕ್ಕಸಂದ್ರ, ದಾಸರಹಳ್ಳಿ, ಮಲ್ಲಸಂದ್ರ, ಬಾಗಲಗುಂಟೆ, ಹೆಗ್ನಳ್ಳಿ, ಕಾಂಗ್ರೆಸ್-2- ಶೆಟ್ಟಿಹಳ್ಳಿ, ಪೀಣ್ಯ ಕೈಗಾರಿಕಾ ಪ್ರದೇಶ, ಜೆಡಿಎಸ್ 1 ರಾಜಗೋಪಾಲನಗರದಲ್ಲಿದೆ.
ಮತದಾರರ ಸಂಖ್ಯೆ: ದಾಸರಹಳ್ಳಿ ಕ್ಷೇತ್ರದಲ್ಲಿ ಪುರುಷರು-2,36,853, ಮಹಿಳೆಯರು 2,00,138, ಇತರೆ 86, ಒಟ್ಟು 4,37,077 ಮತದಾರರಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications