ಬೆಂಗಳೂರಲ್ಲಿ ಒಟ್ಟು ಮತದಾರರ 97,15,109: ಹೆಚ್ಚಾದ ಯುವ ಮತದಾರರು
ಬೆಂಗಳೂರು, ಏಪ್ರಿಲ್ 27: ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿಯಲ್ಲಿ ಯುವ ಮತದಾರರ ಸಂಖ್ಯೆ ಈ ಭಾರಿ ಹೆಚ್ಚಳವಾಗಿದೆ. ಬೆಂಗಳೂರು ನಗರ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಎಷ್ಟು ಜನ ಮತದಾನ ಅರ್ಹರು, ಅದರಲ್ಲಿ ಯುವಕರೆಷ್ಟು ಎಂದು ಮಾಹಿತಿಯನ್ನು ಬಿಬಿಎಂಪಿ ಪ್ರಕಟಿಸಿದೆ.
ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಗುರುವಾರ ಮಾನ್ಯ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮತದಾರರ ಪಟ್ಟಿ ಕುರಿತು ಇಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಮತದಾರರ ಕುರಿತು ವಿವರಣೆ ನೀಡಿದರು.

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 97,15,109 ಮತದಾರರು ಇದ್ದಾರೆ. ಅದರಲ್ಲಿ 50,24,775 ಮಂದಿ ಪುರುಷ ಮತದಾರರು ಹಾಗೂ 46,86,813 ಜನ ಮಹಿಳಾ ಮತದಾರರು ಇದ್ದಾರೆ. ಇನ್ನೂ 1,761 ಇತರೆ, 1,760 ಸೇವಾ ಮತದಾರರಿದ್ದಾರೆ ಎಂದು ತಿಳಿಸಿದರು.
ಯುವ ಮತದಾರರ ಸಂಖ್ಯೆ 1.43 ಲಕ್ಷ
ಈ ಸಲ 1,43,526 ಯುವ ಮತದಾರರು ಚುನಾವಣಾ ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. 80ವರ್ಷ ವಯಸ್ಸಿನ ಮತದಾರರು ಹಾಗೂ ವಿಶೇಷ ಚೇತನರಿಗೆ ಏಪ್ರಿಲ್ 29 ರಿಂದ ಮೇ 6ನೇ ತಾರೀಖಿನವರೆಗೂ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಚುನಾವಣಾಧಿಕಾರಿಗಳ ಮುಖಾಂತರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.
ರಾಜ್ಯ ಮುಖ್ಯ ಚುನಾವಣಾಧಿಕಾರಿಯವರ ಸುತ್ತೋಲೆಯಂತೆ ಏಪ್ರಿಲ್ 30 ರಂದು 'ನಮ್ಮ ನಡೆ ಮತಗಟ್ಟೆಯ ಕಡೆ' ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಕರ್ನಾಟಕ ವಿಧಾನಸಭೆ-2023 ಮತ್ತು ಮತದಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು 'ನಮ್ಮ ನಡೆ ಮತಗಟ್ಟೆಯ ಕಡೆ' ನಡೆಯಲಿದೆ. ವಿಶೇಷವೆಂದರೆ ಈ ಕಾರ್ಯಕ್ರಮ ಎಲ್ಲ ಮತಗಟ್ಟೆಗಳಲ್ಲಿ ಏಕ ಕಾಲಕ್ಕೆ ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ನಡೆಸಲಾಘುವುದು ಎಂದರು.

ಏಕಕಾಲಕ್ಕೆ 'ನಮ್ಮ ನಡೆ ಮತಗಟ್ಟೆಯ ಕಡೆ' ಕಾರ್ಯಕ್ರಮ
ಪ್ರಸ್ತುತ ಚುನಾವಣೆಯ ಮತದಾನ ಮೇ 10 ರಂದು ನಡೆಯಲಿದೆ. 'ನಮ್ಮ ನಡೆ ಮತಗಟ್ಟೆಯ ಕಡೆ' ಕಾರ್ಯಕ್ರಮ ಬೆಂಗಳೂರು ನಗರದಲ್ಲಿ ಏಕಕಾಲದಲ್ಲಿ ಬೆಳಗ್ಗೆ 8 ಗಂಟೆಗೆ ಜರುಗುವಂತೆ ಯೋಜನೆ ರೂಪಿಸಲಾಗಿದೆ. ಈ ವೇಳೆ ಪ್ರಾಥಮಿಕವಾಗಿ ಮತಗಟ್ಟೆ ಹಂತದಲ್ಲಿ ಮತಗಟ್ಟೆ ಅಧಿಕಾರಿಗಳು, ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ನೇತೃತ್ವ ವಹಿಸಿ ಜಾಗೃತಿ ಮೂಡಿಸಲಿದ್ದಾರೆ ಎಂದು ತುಷಾರ್ ಗಿರಿನಾಥ್ ವಿವರಿಸಿದರು.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications