ಹೆಬ್ಬಾಳದಲ್ಲಿ ಚುನಾವಣಾಧಿಕಾರಿಗೆ ಧಮಕಿ: ಬಿಜೆಪಿ ಕಾರ್ಯಕರ್ತರ ಬಂಧನ
ಬೆಂಗಳೂರು, ಮೇ 12: ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಈಗಾಗಲೇ ಆರಂಭವಾಗಿದೆ. ಕೆಲವೊಂದು ಕಡೆ ಇವಿಎಂನಲ್ಲಿ ದೋಷ ಕಂಡುಬಂದಿದೆ. ಇನ್ನು ಕೆಲವೆಡೆ ಚುನಾವಣಾ ಸಿಬ್ಬಂದಿಗಳು ತಡವಾಗಿ ಬಂದಿರುವ ಕಾರಣ ಮತದಾನ ನಿಧಾನಗತಿಯಲ್ಲಿ ಸಾಗಿದೆ.ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಗಲಾಟೆ ಆರಂಭವಾಗಿದೆ.
ಬಿಜೆಪಿ ಕಾರ್ಯಕರ್ತರು ಚುನಾವಣಾಧಿಕಾರಿಗೆ ಅವಾಜ್ ಹಾಕಿ ಬಂಧನಕ್ಕೊಳಗಾದ ಘಟನೆ ಹೆಬ್ಬಾಳದಲ್ಲಿ ನಡೆದಿದೆ. ಬಿಜೆಪಿ ಶಾಸಕ ಬಂದ ಮೇಲೆ ಮತದಾನ ಮಾಡಬೇಕು ಎಂದು ಮತದಾನವನ್ನು ಬಿಜೆಪಿ ಕಾರ್ಯಕರ್ತರು ತಡೆಹಿಡದಿದ್ದರು.
In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು

ಚುನಾವಣಾಧಿಕಾರಿ ಹಾಗೂ ಕಾರ್ಯರ್ತರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ನಂತರ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.. ಇದೀಗ ಮತದಾನ ತಡವಾಗಿ ಆರಂಭವಾಗಿದೆ.












Click it and Unblock the Notifications