ವಿಜಯನಗರ: ಕೈ ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು
ಬೆಂಗಳೂರು, ಮೇ 12: ಚುನಾವಣೆಯ ದಿನವೇ ರಾಜಕೀಯ ವಿರೋಧ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.
ಬೆಂಗಳೂರಿನ ಹಂಪಿನಗರದ ಈಜುಕೊಳದ ಸಮೀಪ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ನಾಲ್ವರು ಕಾರ್ಯಕರ್ತರು ಗಾಯಗೊಂಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಪೊಲೀಸರು ಎರಡೂ ಕಡೆಯ ಮುಖಂಡರನ್ನು ಸಮಾಧಾನಪಡಿಸಿ ಘರ್ಷಣೆಯನ್ನು ತಹಬದಿಗೆ ತಂದರು.
ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಪಿ ರವಿ ಚನ್ನಣ್ಣನವರ್, ಇದು ಮೇಲ್ನೋಟಕ್ಕೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿ ಕಾಣಿಸುತ್ತಿದೆ. ಮತಗಟ್ಟೆಯಿಂದ ಕೇವಲ 100 ಮೀಟರ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದು ಸೂಕ್ಷ್ಮ ಪ್ರದೇಶವಾಗಿದೆ. ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ವಿಜಯನಗರದ ಕಾಂಗ್ರೆಸ್ ಶಾಸಕ ಕೃಷ್ಣಪ್ಪ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು, ಇಲ್ಲಿ ಗೂಂಡಾಗಿರಿ ನಡೆಸಲಾಗುತ್ತಿದೆ. ಪೊಲೀಸರು ಕೂಡ ಶಾಸಕರು ಹೇಳಿದಂತೆ ಕೇಳುತ್ತಿದ್ದಾರೆ ಎಂದು ಆರೋಪಿಸಿದರು.
ಘಟನೆಯಲ್ಲಿ ಗಾಯಗೊಂಡ ಬಿಜೆಪಿ ಪಾಲಿಕೆ ಸದಸ್ಯ ಆನಂದ್ ಹೊಸೂರ್ ಪ್ರತಿಭಟನೆ ಮಾಡುತ್ತಿರುವಾಗಲೇ ಕುಸಿದು ಬಿದ್ದರು. ಅವನ್ನು ಹೊಯ್ಸಳ ವಾಹನದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು.
In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು
ಪೊಲೀಸರ ವಿರುದ್ಧ ಆಕ್ರೋಶ
ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಪಾಲಿಕೆ ಸದಸ್ಯನ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂದ್ ಅವರು ನ್ಯಾಯಬದ್ಧವಾಗಿ ಚುನಾವಣಾ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರವೀಂದ್ರ ಆರೋಪಿಸಿದರು.
ಕೃಷ್ಣಪ್ಪ ಅವರ ಕಡೆಯ ಗೂಂಡಾ ಕಾಂಗ್ರೆಸ್ ಕಾರ್ಯಕರ್ತರು ನಿನ್ನೆಯಿಂದ ಇಲ್ಲಿ ಬೀಡು ಬಿಟ್ಟಿದ್ದಾರೆ. ಅಲ್ಲದೆ ಅವರು ತಮಗೆ ಬೇಕಾದ ಪೋಲೀಸರನ್ನು ಇಲ್ಲಿಗೆ ನಿಯೋಜನೆ ಮಾಡಿಕೊಂಡಿದ್ದಾರೆ. ಪೋಲಿಸರ ಮುಂದೆಯೇ ಹಲ್ಲೆಗೆ ಮುಂದಾಗಿದ್ದಾರೆ. ಪೊಲೀಸರು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.
ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ಸಿಗರು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಇಂಥ ಹಲ್ಲೆ ಸಂಸ್ಕೃತಿ ಕಾಂಗ್ರೆಸ್ನವರದ್ದು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications